ಬೆಂಗಳೂರು : ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ತನಿಷಾ ಕುಪ್ಪಂಡ ಅವರು ‘ಪೆಂಟಗನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಏ 7ರಂದು ಚಿತ್ರ ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ತನಿಷಾ ಕುಪ್ಪಂಡ ಅವರು ಈ ಚಿತ್ರದಲ್ಲಿ ಬೋಲ್ಡ್ ಲುಕ್ನಲ್ಲಿ ಲಿಪ್ಲಾಕ್, ಬ್ಯಾಕ್ಲೆಸ್ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ. ಐದು ಕತೆಗಳಿರುವ, ಐದು ಮಂದಿ ನಿರ್ದೇಶಕರಿಂದ ಮೂಡಿಬಂದಿರುವ ಈ ಸಿನಿಮಾದ ಮೇಲೆ ಪೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ.
ಇತ್ತೀಚೆಗೆ ಸಿನಿಮಾದ ಪ್ರಚಾರ ಅಂಗವಾಗಿ ತನಿಷಾ ಅವರು ಯೂಟ್ಯೂಬ್ ಸಂದಶರ್ನವೊಂದರಲ್ಲಿ ಭಾಗವಹಿಸಿದ್ದರು. ಆದರೆ, ಯೂಟ್ಯೂಬರ್ರೊಬ್ಬರು, ‘ನೀವು ಬೆತ್ತಲೆ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತೀರಾ’ ಎಂದು ತನಿಷಾ ಅವರನ್ನು ಪ್ರಶ್ನೆ ಕೇಳಿದ್ದಾರೆ.ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ತನಿಷಾ, ಸಿನಿಮಾದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಮಾತ್ರಕ್ಕೆ ಬೆತ್ತಲೆ ಸಿನಿಮಾ ಮಾಡೋಕೆ ಆಗುತ್ತಾ? ನಾನು ನೀಲಿಚಿತ್ರ ತಾರೆ ಅಲ್ಲ. ಮಾತನಾಡುವ ಮುನ್ನ ಎಚ್ಚರ ಇರಲಿ. ಕನ್ನಡ ಚಿತ್ರರಂಗದಲ್ಲಿ ಯಾವ ನಟಿಯೂ ನೀಲಿ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಹಾಡೊಂದರಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತನಿಷಾ ಅವರನ್ನು ಸಿನಿಮಾದಲ್ಲಿ ಬೆತ್ತಲೆಯಾಗಿ ಕಾಣಿಸಿಕೊಳ್ಳುತ್ತೀರಾ’ ಎಂದು ಯೂಟ್ಯೂಬರ್ ಕೇಳಿರುವುದು ಸಾರ್ವಜನಿಕರನ್ನು ಕೆರಳಿಸಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಟಿ ಸೇರಿದಂತೆ ಅನೇಕರು ಯೂಟ್ಯೂಬರ್ನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.ಐದು ವಿಭಿನ್ನ ಕಥೆಗಳನ್ನು ಒಳಗೊಂಡ ಈ ಚಿತ್ರದಲ್ಲಿ ಬರುವ 5 ಕಥೆಗಳಿಗೆ ಆಕಾಶ್ ಶ್ರೀವತ್ಸ, ಚಂದ್ರಮೋಹನ್, ರಾಘು ಶಿವಮೊಗ್ಗ, ಕಿರಣ್ ಕುಮಾರ್ ಹಾಗೂ ಗುರು ದೇಶಪಾಂಡೆ ಹೀಗೆ ಐದು ಜನ ನಿರ್ದೇಶಕರು ಆ್ಯಕ್ಷನ್-ಕಟ್ ಹೇಳಿದ್ದಾರೆ.
ಮೈಸೂರು ಪಾಕ್, ಕಾಮಾತುರಾಣಾ ನಭಯಂ, ನಲಜ್ಜ, ದೋಣಿಸಾಗಲಿ, ಮಿಸ್ಟರ್ ಗೋಪಿ ಕೆಫೆ ಸೇರಿ ಐದು ಕಥೆಗಳಿರುವ ಈ ಚಿತ್ರದಲ್ಲಿ ಹಿರಿಯನಟ ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಅನುಷಾ ರೈ, ವಂಶಿಕೃಷ್ಣ, ಅಪೂರ್ವ ಮುಂತಾದವರು ಅಭಿನಯಿಸಿದ್ದಾರೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…