BREAKING NEWS

‘ನಾನು ಮೊದಲು ಕನ್ನಡಿಗ ಆಮೇಲೆ ಮುಸ್ಲಿಂ’ ಎಂದಿದ್ದ ಜಮೀರ್ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕಾರ : ಕನ್ನಡಪರ ಹೋರಾಟಗಾರರ ಆಕ್ರೋಶ

ಬೆಂಗಳೂರು : ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಚಿವರಾಗಿ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅಂತಿಮವಾಗಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್, ಅಲ್ಲಾ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಚಿವ ಜಮೀರ್ ನಡೆಗೆ ಸಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಸಚಿವ ಜಮೀರ್ ಅಹ್ಮದ್ ಖಾನ್ ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು : ಕನ್ನಡ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ಈ ಕುರಿತು ಟ್ವೀಟ್ ಮಾಡಿದ್ದು, ‘ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.
https://twitter.com/narayanagowdru/status/1659830895132676097?s=20
ಅಂತೆಯೇ ಕರ್ನಾಟಕಕ್ಕೆ ಬರುವ ರಾಷ್ಟ್ರೀಯ ನಾಯಕರೇ ಕನ್ನಡದಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿರುವಾಗ ಈ ನಾಡಿನಲ್ಲೇ ಹುಟ್ಟಿರೋ ಜಮೀರ್ ಅಹ್ಮದ್ ಅವರೇ, ಇಷ್ಟು ವರ್ಷದಿಂದ ಇಲ್ಲೇ ಇದ್ದು ಕರ್ನಾಟಕದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲ. ಅಂದರೆ ನಿಮಗೇನು ಹೇಳೋದು. ಮೊದಲು ಕನ್ನಡ ಮಿಕ್ಕಿದ್ದು ಆಮೇಲೆ. ನಿಮ್ಮ ಈ ನಡೆಗೆ ನಮ್ಮ ವಿರೋಧ ಇದೆ’ ಎಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದಾರೆ.
https://twitter.com/rajanna_rupesh/status/1659839733122605056?s=20

lokesh

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

9 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

10 hours ago