ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ (ಝೀ) ಹಾಗೂ ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ (ಎಸ್ಪಿಐಎನ್) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್ಸಿಎಲ್ಟಿ) ಒಪ್ಪಿಗೆ ನೀಡಿದೆ.
ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.
ವಿಲೀನಕ್ಕೆ ಅನುಮೋದನೆ ನೀಡಿರುವ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ವಿಲೀನದ ಕುರಿತಾದ ಎಲ್ಲಾ ಆಕ್ಷೇಪಣೆಗಳನ್ನೂ ವಜಾಗೊಳಿಸಿದೆ. ಇದರಿಂದ ಕಳೆದ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲದಿಂದ ತೂಗುಯ್ಯಾಲೆಯಲ್ಲಿದ್ದ ಬಹುನಿರೀಕ್ಷಿತ ವಿಲೀನಕ್ಕೆ ಹಾದಿ ಸುಗಮವಾಗಿದೆ.
ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಜುಲೈ 10ರಂದೇ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್ಟೈನ್ಮೆಂಟ್ (ಈ ಹಿಂದಿನ ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ) ನಡುವಿನ ವಿಲೀನದ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಒಂದು ತಿಂಗಳ ನಂತರ ಅಂದರೆ ಆಗಸ್ಟ್ 10 ರಂದು ತೀರ್ಪು ಪ್ರಕಟಿಸಿದೆ.
ಎಚ್.ವಿ. ಸುಬ್ಬಾ ರಾವ್ ಮತ್ತು ಮಧು ಸಿನ್ಹಾ ಅವರನ್ನೊಳಗೊಂಡ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮುಂಬೈ ಪೀಠವು ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್ಟೈನ್ಮೆಂಟ್ನ ವಿಲೀನಕ್ಕೆ ಒಪ್ಪಿಗೆ ನೀಡಿದೆ.
ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಹಾಗೂ ಕಲ್ವರ್ ಮ್ಯಾಕ್ಸ್ ಎಂಟರ್ಟೈನ್ಮೆಂಟ್ನ ವಿಲೀನಕ್ಕೆ ತಡೆ ಕೋರಿ ಝೀನ ಸಾಲದಾತರಾದ ಆಕ್ಸಿಸ್ ಫೈನಾನ್ಸ್, ಜೆಸಿ ಫ್ಲವರ್ ಅಸೆಟ್ ರೀಕನ್ಸ್ಟ್ರಕ್ಷನ್ ಕಂ, ಐಡಿಬಿಐ ಬ್ಯಾಂಕ್, ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಐಡಿಬಿಐ ಟ್ರಸ್ಟಿಶಿಪ್ಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೊರೆ ಹೋಗಿದ್ದವು. ಇವರ ಆಕ್ಷೇಪಗಳನ್ನು ಆಲಿಸಿದ ನಂತರ ಜುಲೈ 10ರಂದು ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.
ಡಿಸೆಂಬರ್ 2021ರಲ್ಲಿ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಹಾಗೂ ಸೋನಿ ಪಿಕ್ಟರ್ಸ್ ನೆಟ್ವರ್ಕ್ಸ್ ಇಂಡಿಯಾ ತಮ್ಮ ವ್ಯವಹಾರಗಳನ್ನು ಸಂಯೋಜಿಸಲು ಒಪ್ಪಂದ ಮಾಡಿಕೊಂಡಿದ್ದವು. ಈ ಸಂದರ್ಭದಲ್ಲಿ ಸೋನಿ ಮತ್ತು ಝೀ ತಮ್ಮ ತಮ್ಮ ಟಿವಿ ವಾಹಿನಿಗಳು, ಚಲನಚಿತ್ರ ಸ್ವತ್ತುಗಳು ಮತ್ತು ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳನ್ನು ವಿಲೀನಗೊಳಿಸಲು ನಿರ್ಧರಿಸಿದ್ದವು.
ಬಳಿಕ, ವಿಲೀನಕ್ಕೆ ರಾಷ್ಟ್ರೀಯ ಷೇರು ಮಾರುಕಟ್ಟೆ (ಎನ್ಎಸ್ಇ), ಬಾಂಬೆ ಷೇರು ಮಾರುಕಟ್ಟೆ (ಬಿಎಸ್ಇ) ಮತ್ತು ಇತರ ನಿಯಂತ್ರಣ ಸಂಸ್ಥೆಗಳಾದ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಹಾಗೂ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)ದಿಂದ ಅನುಮೋದನೆ ಪಡೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯನ್ನು ಸಂಪರ್ಕಿಸಿದ್ದವು. ಇಲ್ಲಿ ಝೀನ ಸಾಲದಾತರಿಂದ ಆಕ್ಷೇಪ ವ್ಯಕ್ತವಾದ ಕಾರಣ ವಿಲೀನ ವಿಳಂಬವಾಗಿತ್ತು.
ಒಪ್ಪಂದದ ಭಾಗವಾಗಿ ಪುನೀತ್ ಗೋಯೆಂಕಾ ವಿಲೀನಗೊಂಡ ಘಟಕದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಲಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…