BREAKING NEWS

ಝೀ-ಸೋನಿ ವಿಲೀನ: ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ

ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್‌ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್‌ಸಿಎಲ್‌ಟಿ) ಒಪ್ಪಿಗೆ ನೀಡಿದೆ.

ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.

ವಿಲೀನಕ್ಕೆ ಅನುಮೋದನೆ ನೀಡಿರುವ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ವಿಲೀನದ ಕುರಿತಾದ ಎಲ್ಲಾ ಆಕ್ಷೇಪಣೆಗಳನ್ನೂ ವಜಾಗೊಳಿಸಿದೆ. ಇದರಿಂದ ಕಳೆದ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲದಿಂದ ತೂಗುಯ್ಯಾಲೆಯಲ್ಲಿದ್ದ ಬಹುನಿರೀಕ್ಷಿತ ವಿಲೀನಕ್ಕೆ ಹಾದಿ ಸುಗಮವಾಗಿದೆ.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಜುಲೈ 10ರಂದೇ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್ (ಈ ಹಿಂದಿನ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ) ನಡುವಿನ ವಿಲೀನದ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಒಂದು ತಿಂಗಳ ನಂತರ ಅಂದರೆ ಆಗಸ್ಟ್‌ 10 ರಂದು ತೀರ್ಪು ಪ್ರಕಟಿಸಿದೆ.

ಎಚ್‌.ವಿ. ಸುಬ್ಬಾ ರಾವ್ ಮತ್ತು ಮಧು ಸಿನ್ಹಾ ಅವರನ್ನೊಳಗೊಂಡ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮುಂಬೈ ಪೀಠವು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ಒಪ್ಪಿಗೆ ನೀಡಿದೆ.

ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ತಡೆ ಕೋರಿ ಝೀನ ಸಾಲದಾತರಾದ ಆಕ್ಸಿಸ್ ಫೈನಾನ್ಸ್, ಜೆಸಿ ಫ್ಲವರ್ ಅಸೆಟ್ ರೀಕನ್‌ಸ್ಟ್ರಕ್ಷನ್ ಕಂ, ಐಡಿಬಿಐ ಬ್ಯಾಂಕ್, ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಐಡಿಬಿಐ ಟ್ರಸ್ಟಿಶಿಪ್‌ಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೊರೆ ಹೋಗಿದ್ದವು. ಇವರ ಆಕ್ಷೇಪಗಳನ್ನು ಆಲಿಸಿದ ನಂತರ ಜುಲೈ 10ರಂದು ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಡಿಸೆಂಬರ್ 2021ರಲ್ಲಿ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಸೋನಿ ಪಿಕ್ಟರ್ಸ್‌ ನೆಟ್ವರ್ಕ್ಸ್‌ ಇಂಡಿಯಾ ತಮ್ಮ ವ್ಯವಹಾರಗಳನ್ನು ಸಂಯೋಜಿಸಲು ಒಪ್ಪಂದ ಮಾಡಿಕೊಂಡಿದ್ದವು. ಈ ಸಂದರ್ಭದಲ್ಲಿ ಸೋನಿ ಮತ್ತು ಝೀ ತಮ್ಮ ತಮ್ಮ ಟಿವಿ ವಾಹಿನಿಗಳು, ಚಲನಚಿತ್ರ ಸ್ವತ್ತುಗಳು ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ವಿಲೀನಗೊಳಿಸಲು ನಿರ್ಧರಿಸಿದ್ದವು.

ಬಳಿಕ, ವಿಲೀನಕ್ಕೆ ರಾಷ್ಟ್ರೀಯ ಷೇರು ಮಾರುಕಟ್ಟೆ (ಎನ್‌ಎಸ್‌ಇ), ಬಾಂಬೆ ಷೇರು ಮಾರುಕಟ್ಟೆ (ಬಿಎಸ್‌ಇ) ಮತ್ತು ಇತರ ನಿಯಂತ್ರಣ ಸಂಸ್ಥೆಗಳಾದ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಹಾಗೂ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)ದಿಂದ ಅನುಮೋದನೆ ಪಡೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯನ್ನು ಸಂಪರ್ಕಿಸಿದ್ದವು. ಇಲ್ಲಿ ಝೀನ ಸಾಲದಾತರಿಂದ ಆಕ್ಷೇಪ ವ್ಯಕ್ತವಾದ ಕಾರಣ ವಿಲೀನ ವಿಳಂಬವಾಗಿತ್ತು.

ಒಪ್ಪಂದದ ಭಾಗವಾಗಿ ಪುನೀತ್‌ ಗೋಯೆಂಕಾ ವಿಲೀನಗೊಂಡ ಘಟಕದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಲಿದ್ದಾರೆ.

andolanait

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

24 mins ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

41 mins ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

1 hour ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

2 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

3 hours ago