BREAKING NEWS

ಝೀ-ಸೋನಿ ವಿಲೀನ: ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ

ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್‌ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್‌ಸಿಎಲ್‌ಟಿ) ಒಪ್ಪಿಗೆ ನೀಡಿದೆ.

ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.

ವಿಲೀನಕ್ಕೆ ಅನುಮೋದನೆ ನೀಡಿರುವ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ವಿಲೀನದ ಕುರಿತಾದ ಎಲ್ಲಾ ಆಕ್ಷೇಪಣೆಗಳನ್ನೂ ವಜಾಗೊಳಿಸಿದೆ. ಇದರಿಂದ ಕಳೆದ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲದಿಂದ ತೂಗುಯ್ಯಾಲೆಯಲ್ಲಿದ್ದ ಬಹುನಿರೀಕ್ಷಿತ ವಿಲೀನಕ್ಕೆ ಹಾದಿ ಸುಗಮವಾಗಿದೆ.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಜುಲೈ 10ರಂದೇ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್ (ಈ ಹಿಂದಿನ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ) ನಡುವಿನ ವಿಲೀನದ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಒಂದು ತಿಂಗಳ ನಂತರ ಅಂದರೆ ಆಗಸ್ಟ್‌ 10 ರಂದು ತೀರ್ಪು ಪ್ರಕಟಿಸಿದೆ.

ಎಚ್‌.ವಿ. ಸುಬ್ಬಾ ರಾವ್ ಮತ್ತು ಮಧು ಸಿನ್ಹಾ ಅವರನ್ನೊಳಗೊಂಡ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮುಂಬೈ ಪೀಠವು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ಒಪ್ಪಿಗೆ ನೀಡಿದೆ.

ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ತಡೆ ಕೋರಿ ಝೀನ ಸಾಲದಾತರಾದ ಆಕ್ಸಿಸ್ ಫೈನಾನ್ಸ್, ಜೆಸಿ ಫ್ಲವರ್ ಅಸೆಟ್ ರೀಕನ್‌ಸ್ಟ್ರಕ್ಷನ್ ಕಂ, ಐಡಿಬಿಐ ಬ್ಯಾಂಕ್, ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಐಡಿಬಿಐ ಟ್ರಸ್ಟಿಶಿಪ್‌ಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೊರೆ ಹೋಗಿದ್ದವು. ಇವರ ಆಕ್ಷೇಪಗಳನ್ನು ಆಲಿಸಿದ ನಂತರ ಜುಲೈ 10ರಂದು ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಡಿಸೆಂಬರ್ 2021ರಲ್ಲಿ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಸೋನಿ ಪಿಕ್ಟರ್ಸ್‌ ನೆಟ್ವರ್ಕ್ಸ್‌ ಇಂಡಿಯಾ ತಮ್ಮ ವ್ಯವಹಾರಗಳನ್ನು ಸಂಯೋಜಿಸಲು ಒಪ್ಪಂದ ಮಾಡಿಕೊಂಡಿದ್ದವು. ಈ ಸಂದರ್ಭದಲ್ಲಿ ಸೋನಿ ಮತ್ತು ಝೀ ತಮ್ಮ ತಮ್ಮ ಟಿವಿ ವಾಹಿನಿಗಳು, ಚಲನಚಿತ್ರ ಸ್ವತ್ತುಗಳು ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ವಿಲೀನಗೊಳಿಸಲು ನಿರ್ಧರಿಸಿದ್ದವು.

ಬಳಿಕ, ವಿಲೀನಕ್ಕೆ ರಾಷ್ಟ್ರೀಯ ಷೇರು ಮಾರುಕಟ್ಟೆ (ಎನ್‌ಎಸ್‌ಇ), ಬಾಂಬೆ ಷೇರು ಮಾರುಕಟ್ಟೆ (ಬಿಎಸ್‌ಇ) ಮತ್ತು ಇತರ ನಿಯಂತ್ರಣ ಸಂಸ್ಥೆಗಳಾದ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಹಾಗೂ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)ದಿಂದ ಅನುಮೋದನೆ ಪಡೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯನ್ನು ಸಂಪರ್ಕಿಸಿದ್ದವು. ಇಲ್ಲಿ ಝೀನ ಸಾಲದಾತರಿಂದ ಆಕ್ಷೇಪ ವ್ಯಕ್ತವಾದ ಕಾರಣ ವಿಲೀನ ವಿಳಂಬವಾಗಿತ್ತು.

ಒಪ್ಪಂದದ ಭಾಗವಾಗಿ ಪುನೀತ್‌ ಗೋಯೆಂಕಾ ವಿಲೀನಗೊಂಡ ಘಟಕದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಲಿದ್ದಾರೆ.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

5 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

5 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

6 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

7 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

7 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

7 hours ago