BREAKING NEWS

ಝೀ-ಸೋನಿ ವಿಲೀನ: ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ

ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್‌ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್‌ಸಿಎಲ್‌ಟಿ) ಒಪ್ಪಿಗೆ ನೀಡಿದೆ.

ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.

ವಿಲೀನಕ್ಕೆ ಅನುಮೋದನೆ ನೀಡಿರುವ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ವಿಲೀನದ ಕುರಿತಾದ ಎಲ್ಲಾ ಆಕ್ಷೇಪಣೆಗಳನ್ನೂ ವಜಾಗೊಳಿಸಿದೆ. ಇದರಿಂದ ಕಳೆದ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲದಿಂದ ತೂಗುಯ್ಯಾಲೆಯಲ್ಲಿದ್ದ ಬಹುನಿರೀಕ್ಷಿತ ವಿಲೀನಕ್ಕೆ ಹಾದಿ ಸುಗಮವಾಗಿದೆ.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಜುಲೈ 10ರಂದೇ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್ (ಈ ಹಿಂದಿನ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ) ನಡುವಿನ ವಿಲೀನದ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಒಂದು ತಿಂಗಳ ನಂತರ ಅಂದರೆ ಆಗಸ್ಟ್‌ 10 ರಂದು ತೀರ್ಪು ಪ್ರಕಟಿಸಿದೆ.

ಎಚ್‌.ವಿ. ಸುಬ್ಬಾ ರಾವ್ ಮತ್ತು ಮಧು ಸಿನ್ಹಾ ಅವರನ್ನೊಳಗೊಂಡ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮುಂಬೈ ಪೀಠವು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ಒಪ್ಪಿಗೆ ನೀಡಿದೆ.

ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ತಡೆ ಕೋರಿ ಝೀನ ಸಾಲದಾತರಾದ ಆಕ್ಸಿಸ್ ಫೈನಾನ್ಸ್, ಜೆಸಿ ಫ್ಲವರ್ ಅಸೆಟ್ ರೀಕನ್‌ಸ್ಟ್ರಕ್ಷನ್ ಕಂ, ಐಡಿಬಿಐ ಬ್ಯಾಂಕ್, ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಐಡಿಬಿಐ ಟ್ರಸ್ಟಿಶಿಪ್‌ಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೊರೆ ಹೋಗಿದ್ದವು. ಇವರ ಆಕ್ಷೇಪಗಳನ್ನು ಆಲಿಸಿದ ನಂತರ ಜುಲೈ 10ರಂದು ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಡಿಸೆಂಬರ್ 2021ರಲ್ಲಿ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಸೋನಿ ಪಿಕ್ಟರ್ಸ್‌ ನೆಟ್ವರ್ಕ್ಸ್‌ ಇಂಡಿಯಾ ತಮ್ಮ ವ್ಯವಹಾರಗಳನ್ನು ಸಂಯೋಜಿಸಲು ಒಪ್ಪಂದ ಮಾಡಿಕೊಂಡಿದ್ದವು. ಈ ಸಂದರ್ಭದಲ್ಲಿ ಸೋನಿ ಮತ್ತು ಝೀ ತಮ್ಮ ತಮ್ಮ ಟಿವಿ ವಾಹಿನಿಗಳು, ಚಲನಚಿತ್ರ ಸ್ವತ್ತುಗಳು ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ವಿಲೀನಗೊಳಿಸಲು ನಿರ್ಧರಿಸಿದ್ದವು.

ಬಳಿಕ, ವಿಲೀನಕ್ಕೆ ರಾಷ್ಟ್ರೀಯ ಷೇರು ಮಾರುಕಟ್ಟೆ (ಎನ್‌ಎಸ್‌ಇ), ಬಾಂಬೆ ಷೇರು ಮಾರುಕಟ್ಟೆ (ಬಿಎಸ್‌ಇ) ಮತ್ತು ಇತರ ನಿಯಂತ್ರಣ ಸಂಸ್ಥೆಗಳಾದ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಹಾಗೂ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)ದಿಂದ ಅನುಮೋದನೆ ಪಡೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯನ್ನು ಸಂಪರ್ಕಿಸಿದ್ದವು. ಇಲ್ಲಿ ಝೀನ ಸಾಲದಾತರಿಂದ ಆಕ್ಷೇಪ ವ್ಯಕ್ತವಾದ ಕಾರಣ ವಿಲೀನ ವಿಳಂಬವಾಗಿತ್ತು.

ಒಪ್ಪಂದದ ಭಾಗವಾಗಿ ಪುನೀತ್‌ ಗೋಯೆಂಕಾ ವಿಲೀನಗೊಂಡ ಘಟಕದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಲಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago