BREAKING NEWS

ಝೀ-ಸೋನಿ ವಿಲೀನ: ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ

ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್‌ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್‌ಸಿಎಲ್‌ಟಿ) ಒಪ್ಪಿಗೆ ನೀಡಿದೆ.

ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.

ವಿಲೀನಕ್ಕೆ ಅನುಮೋದನೆ ನೀಡಿರುವ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ವಿಲೀನದ ಕುರಿತಾದ ಎಲ್ಲಾ ಆಕ್ಷೇಪಣೆಗಳನ್ನೂ ವಜಾಗೊಳಿಸಿದೆ. ಇದರಿಂದ ಕಳೆದ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲದಿಂದ ತೂಗುಯ್ಯಾಲೆಯಲ್ಲಿದ್ದ ಬಹುನಿರೀಕ್ಷಿತ ವಿಲೀನಕ್ಕೆ ಹಾದಿ ಸುಗಮವಾಗಿದೆ.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಜುಲೈ 10ರಂದೇ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್ (ಈ ಹಿಂದಿನ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ) ನಡುವಿನ ವಿಲೀನದ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಒಂದು ತಿಂಗಳ ನಂತರ ಅಂದರೆ ಆಗಸ್ಟ್‌ 10 ರಂದು ತೀರ್ಪು ಪ್ರಕಟಿಸಿದೆ.

ಎಚ್‌.ವಿ. ಸುಬ್ಬಾ ರಾವ್ ಮತ್ತು ಮಧು ಸಿನ್ಹಾ ಅವರನ್ನೊಳಗೊಂಡ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮುಂಬೈ ಪೀಠವು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ಒಪ್ಪಿಗೆ ನೀಡಿದೆ.

ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್‌ನ ವಿಲೀನಕ್ಕೆ ತಡೆ ಕೋರಿ ಝೀನ ಸಾಲದಾತರಾದ ಆಕ್ಸಿಸ್ ಫೈನಾನ್ಸ್, ಜೆಸಿ ಫ್ಲವರ್ ಅಸೆಟ್ ರೀಕನ್‌ಸ್ಟ್ರಕ್ಷನ್ ಕಂ, ಐಡಿಬಿಐ ಬ್ಯಾಂಕ್, ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಐಡಿಬಿಐ ಟ್ರಸ್ಟಿಶಿಪ್‌ಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೊರೆ ಹೋಗಿದ್ದವು. ಇವರ ಆಕ್ಷೇಪಗಳನ್ನು ಆಲಿಸಿದ ನಂತರ ಜುಲೈ 10ರಂದು ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಡಿಸೆಂಬರ್ 2021ರಲ್ಲಿ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹಾಗೂ ಸೋನಿ ಪಿಕ್ಟರ್ಸ್‌ ನೆಟ್ವರ್ಕ್ಸ್‌ ಇಂಡಿಯಾ ತಮ್ಮ ವ್ಯವಹಾರಗಳನ್ನು ಸಂಯೋಜಿಸಲು ಒಪ್ಪಂದ ಮಾಡಿಕೊಂಡಿದ್ದವು. ಈ ಸಂದರ್ಭದಲ್ಲಿ ಸೋನಿ ಮತ್ತು ಝೀ ತಮ್ಮ ತಮ್ಮ ಟಿವಿ ವಾಹಿನಿಗಳು, ಚಲನಚಿತ್ರ ಸ್ವತ್ತುಗಳು ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ವಿಲೀನಗೊಳಿಸಲು ನಿರ್ಧರಿಸಿದ್ದವು.

ಬಳಿಕ, ವಿಲೀನಕ್ಕೆ ರಾಷ್ಟ್ರೀಯ ಷೇರು ಮಾರುಕಟ್ಟೆ (ಎನ್‌ಎಸ್‌ಇ), ಬಾಂಬೆ ಷೇರು ಮಾರುಕಟ್ಟೆ (ಬಿಎಸ್‌ಇ) ಮತ್ತು ಇತರ ನಿಯಂತ್ರಣ ಸಂಸ್ಥೆಗಳಾದ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಹಾಗೂ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)ದಿಂದ ಅನುಮೋದನೆ ಪಡೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯನ್ನು ಸಂಪರ್ಕಿಸಿದ್ದವು. ಇಲ್ಲಿ ಝೀನ ಸಾಲದಾತರಿಂದ ಆಕ್ಷೇಪ ವ್ಯಕ್ತವಾದ ಕಾರಣ ವಿಲೀನ ವಿಳಂಬವಾಗಿತ್ತು.

ಒಪ್ಪಂದದ ಭಾಗವಾಗಿ ಪುನೀತ್‌ ಗೋಯೆಂಕಾ ವಿಲೀನಗೊಂಡ ಘಟಕದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಲಿದ್ದಾರೆ.

andolanait

Recent Posts

ಹನೂರು: ಪಿ.ಜಿ.ಪಾಳ್ಯ ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫುಲ್‌ ಖುಷ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…

26 mins ago

ಪಹಲ್ಗಾಮ್‌ ಮಾದರಿ ದಾಳಿ: ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ…

38 mins ago

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು.…

47 mins ago

ಮಕ್ಕಳ ಜೊತೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ…

2 hours ago

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

2 hours ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

3 hours ago