ಚಿಂತಾಮಣಿ

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಲೂಕಿನ ಕೆಂಪಯ್ಯನ ಹಟ್ಟಿ ಗ್ರಾಮದ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಕಪ್ಪೆಗೆ ಪೂಜೆ ಮಾಡಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಪ್ಪೆಯನ್ನು ಹಿಡಿದು ಬೇವಿನ ಸೊಪ್ಪಿನ ಜೊತೆಗೆ ಹಾಕುವ ಮೂಲಕ ಅರಿಶಿನ ಕುಂಕುಮ ಹಾಕಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಉಯೋ ಉಯೋ ಮಳೆರಾಯ ಎಂಬ ಘೋಷಣೆಗಳನ್ನು ಕೂಗುತ್ತ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಮಳೆಗಾಗಿ ವಿಶೇಷ ರೀತಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ ಮಕ್ಕಳು. ಈ ಮಕ್ಕಳ ಪದ್ಧತಿಗೆ ಅನುಗುಣವಾಗಿ ಗ್ರಾಮಸ್ಥರು ಸಹ ಸಾಥ್ ನೀಡಿರುವುದು ಮಕ್ಕಳಿಗೆ ಅನುಕೂಲವಾಗಿದೆ.

ಜನ ಜಾನುವಾರುಗಳಿಗೂ ಸಂಕಟ
ಬಿರು ಬೇಸಿಗೆ ಪ್ರಾರಂಭವಾದ ದಿನಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿರುವ ದಿನಮಾನಗಳಲ್ಲಿ ಗ್ರಾಮದಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೂ ಸಹ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಾಗಾಗಿ ಮಳೆ ಬರುವಂತೆ ಮಾಡಲು ಹಿಂದಿನ ಪದ್ಧತಿಯಂತೆ ಮಕ್ಕಳು ಸಾಂಪ್ರದಾಯಿಕವಾಗಿ ಪೂಜೆ ಪುರಸ್ಕಾರ ನಡೆಸಿದ್ದಾರೆ.

ಮುಖ್ಯ ಮಂತ್ರಿಗಳಿಗೆ ಪತ್ರ
ಈ ಹಿಂದೆ ವರ್ಣಿಕಾ ಎಂಬ ಇದೆ ಗ್ರಾಮದ ವಿದ್ಯಾರ್ಥಿನಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ ಎಂಬ ವಿಷಯವನ್ನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಎಲ್ಲರ ಗಮನವನ್ನು ಸೆಳೆದಿದ್ದಳು. ಅಂತೇಯೇ ಮನೆ
ಮುಖ್ಯಮಂತ್ರಿ ಅವರು ಉಡುತೊರೆ ಹಳ್ಳ ಜಲಾಶಯಕ್ಕೆ ನದಿ ಮೂಲದಿಂದ ನೀರು ತುಂಬಿಸಲು 490 ಕೋಟಿ ರೂ ವೆಚ್ಚದಲ್ಲಿ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿಟ್ಟಿದ್ದರು.

 

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

6 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

16 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

21 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

21 hours ago