ಚಿಂತಾಮಣಿ

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಲೂಕಿನ ಕೆಂಪಯ್ಯನ ಹಟ್ಟಿ ಗ್ರಾಮದ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಕಪ್ಪೆಗೆ ಪೂಜೆ ಮಾಡಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಪ್ಪೆಯನ್ನು ಹಿಡಿದು ಬೇವಿನ ಸೊಪ್ಪಿನ ಜೊತೆಗೆ ಹಾಕುವ ಮೂಲಕ ಅರಿಶಿನ ಕುಂಕುಮ ಹಾಕಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಉಯೋ ಉಯೋ ಮಳೆರಾಯ ಎಂಬ ಘೋಷಣೆಗಳನ್ನು ಕೂಗುತ್ತ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಮಳೆಗಾಗಿ ವಿಶೇಷ ರೀತಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ ಮಕ್ಕಳು. ಈ ಮಕ್ಕಳ ಪದ್ಧತಿಗೆ ಅನುಗುಣವಾಗಿ ಗ್ರಾಮಸ್ಥರು ಸಹ ಸಾಥ್ ನೀಡಿರುವುದು ಮಕ್ಕಳಿಗೆ ಅನುಕೂಲವಾಗಿದೆ.

ಜನ ಜಾನುವಾರುಗಳಿಗೂ ಸಂಕಟ
ಬಿರು ಬೇಸಿಗೆ ಪ್ರಾರಂಭವಾದ ದಿನಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿರುವ ದಿನಮಾನಗಳಲ್ಲಿ ಗ್ರಾಮದಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೂ ಸಹ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಾಗಾಗಿ ಮಳೆ ಬರುವಂತೆ ಮಾಡಲು ಹಿಂದಿನ ಪದ್ಧತಿಯಂತೆ ಮಕ್ಕಳು ಸಾಂಪ್ರದಾಯಿಕವಾಗಿ ಪೂಜೆ ಪುರಸ್ಕಾರ ನಡೆಸಿದ್ದಾರೆ.

ಮುಖ್ಯ ಮಂತ್ರಿಗಳಿಗೆ ಪತ್ರ
ಈ ಹಿಂದೆ ವರ್ಣಿಕಾ ಎಂಬ ಇದೆ ಗ್ರಾಮದ ವಿದ್ಯಾರ್ಥಿನಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ ಎಂಬ ವಿಷಯವನ್ನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಎಲ್ಲರ ಗಮನವನ್ನು ಸೆಳೆದಿದ್ದಳು. ಅಂತೇಯೇ ಮನೆ
ಮುಖ್ಯಮಂತ್ರಿ ಅವರು ಉಡುತೊರೆ ಹಳ್ಳ ಜಲಾಶಯಕ್ಕೆ ನದಿ ಮೂಲದಿಂದ ನೀರು ತುಂಬಿಸಲು 490 ಕೋಟಿ ರೂ ವೆಚ್ಚದಲ್ಲಿ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿಟ್ಟಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago