ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಾಲೂಕಿನ ಕೆಂಪಯ್ಯನ ಹಟ್ಟಿ ಗ್ರಾಮದ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಕಪ್ಪೆಗೆ ಪೂಜೆ ಮಾಡಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಕಪ್ಪೆಯನ್ನು ಹಿಡಿದು ಬೇವಿನ ಸೊಪ್ಪಿನ ಜೊತೆಗೆ ಹಾಕುವ ಮೂಲಕ ಅರಿಶಿನ ಕುಂಕುಮ ಹಾಕಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಉಯೋ ಉಯೋ ಮಳೆರಾಯ ಎಂಬ ಘೋಷಣೆಗಳನ್ನು ಕೂಗುತ್ತ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಮಳೆಗಾಗಿ ವಿಶೇಷ ರೀತಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ ಮಕ್ಕಳು. ಈ ಮಕ್ಕಳ ಪದ್ಧತಿಗೆ ಅನುಗುಣವಾಗಿ ಗ್ರಾಮಸ್ಥರು ಸಹ ಸಾಥ್ ನೀಡಿರುವುದು ಮಕ್ಕಳಿಗೆ ಅನುಕೂಲವಾಗಿದೆ.
ಜನ ಜಾನುವಾರುಗಳಿಗೂ ಸಂಕಟ
ಬಿರು ಬೇಸಿಗೆ ಪ್ರಾರಂಭವಾದ ದಿನಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿರುವ ದಿನಮಾನಗಳಲ್ಲಿ ಗ್ರಾಮದಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೂ ಸಹ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಾಗಾಗಿ ಮಳೆ ಬರುವಂತೆ ಮಾಡಲು ಹಿಂದಿನ ಪದ್ಧತಿಯಂತೆ ಮಕ್ಕಳು ಸಾಂಪ್ರದಾಯಿಕವಾಗಿ ಪೂಜೆ ಪುರಸ್ಕಾರ ನಡೆಸಿದ್ದಾರೆ.
ಮುಖ್ಯ ಮಂತ್ರಿಗಳಿಗೆ ಪತ್ರ
ಈ ಹಿಂದೆ ವರ್ಣಿಕಾ ಎಂಬ ಇದೆ ಗ್ರಾಮದ ವಿದ್ಯಾರ್ಥಿನಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ ಎಂಬ ವಿಷಯವನ್ನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಎಲ್ಲರ ಗಮನವನ್ನು ಸೆಳೆದಿದ್ದಳು. ಅಂತೇಯೇ ಮನೆ
ಮುಖ್ಯಮಂತ್ರಿ ಅವರು ಉಡುತೊರೆ ಹಳ್ಳ ಜಲಾಶಯಕ್ಕೆ ನದಿ ಮೂಲದಿಂದ ನೀರು ತುಂಬಿಸಲು 490 ಕೋಟಿ ರೂ ವೆಚ್ಚದಲ್ಲಿ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿಟ್ಟಿದ್ದರು.
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…
ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…
ವಾಷಿಂಗ್ಟನ್ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…
ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…
ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…
ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…