ಜಾಹೀರಾತು

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ.

ಮಂಡ್ಯ ನಗರದ ಸಾದತ್ ನಗರದ ನಿವಾಸಿ ಹೂರ್ ಎಂಬ ಮುಸ್ಲಿಂ ಮಹಿಳೆ ನಗರದೆಲ್ಲಡೆ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ಸುಮಾರು ೭೦ ವರ್ಷದ ಈ ವೃದ್ಧೆಗೆ ತೊನ್ನು ದೇಹವಿಡೀ ಆವರಿಸಿತ್ತು. ಒಬ್ಬಂಟಿಯಾಗಿ ಮನೆಯಲ್ಲಿದ್ದ ಇವರು ಎರಡು ದಿನದಿಂದ ಮನೆಯಿಂದ ಹೊರಬಂದಿರಲಿಲ್ಲ. ಕುತೂಹಲಗೊಂಡ ಅಕ್ಕಪಕ್ಕದವರು ಬಾಗಿಲು ತೆರೆದು ನೋಡಲಾಗಿ ಆ ವೃದ್ಧ ಮಹಿಳೆ ಹೂರ್ ಮೃತಪಟ್ಟಿದ್ದು ಕಂಡುಬಂದಿದೆ. ಜೊತೆಗೇ ಮನೆಯೊಳಗೆ ಕಾಲಿರಿಸಿದವರಿಗೆ ಅಲ್ಲೆಲ್ಲ ರಾಶಿ ರಾಶಿ ಇದ್ದ ಒಂದು ಎರಡು, ಐದು, ಹತ್ತು ರೂಗಳ ಕಾಯಿನ್‌ಗಳು, ಹತ್ತು, ಇಪ್ಪತ್ತು ಐವತ್ತು ರೂ.ಗಳ ನೋಟುಗಳ ಎರಚಾಡಿದ್ದನ್ನು ಕಂಡವರು ಮೂಕವಿಸ್ಮಿತರಾದರು.

ಮತ್ತಷ್ಟು ಹುಡುಕಾಡಿದಾಗ ಅಲ್ಲಲ್ಲಿ ಚೀಲಗಳಲ್ಲೂ ನೋಟುಗಳನ್ನು ತುಂಬಿಟ್ಟಿರುವುದು ಕಂಡುಬಂದಿತು. ಕೂಡಲೇ ಸ್ಥಳೀಯರು ಮಸೀದಿ ಮುಖಂಡರಿಗೆ ತಿಳಿಸಲಾಗಿ, ಸ್ಥಳಕ್ಕಾಗಮಿಸಿದ ಮುಖಂಡರು ಶವವನ್ನು ದಫನ್ ಮಾಡಿದ ಬಳಿಕ ಹಣ ಎಣಿಕೆ ಕಾರ್ಯ ಕೈಗೊಂಡಿದ್ದಾರೆ. ಎಣಿಕೆಯಲ್ಲಿ ಸುಮಾರು ೧೫ ರಿಂದ ೨೦ ಲಕ್ಷ ಸಂಗ್ರಹವಿರಬಹುದು ಎಂದು ಅಂದಾಜಿಸಲಾಗಿದೆ. ಜೀವನ ಪೂರ್ತಿ ಭಿಕ್ಷೆ ಬೇಡಿ ಕೂಡಿಟ್ಟ ಈ ವೃದ್ಧೆಗೆ ನಾನು ಮುಂದೊಂದು ದಿನ ಸಾಯುತ್ತೇನೆಂದು ಎನಿಸಿರಲೇ ಇಲ್ಲ ಎನಿಸುತ್ತದೆ. ನಾನು ಎಂದೆಂದಿಗೂ ಇದ್ದೇ ಇರುತ್ತೇನೆಂಬ ಅದಮ್ಯ ವಿಶ್ವಾಸ ಈ ವೃದ್ಧೆಗಿದ್ದಿರಬಹುದು. ಬಹುಶಃ ಅದಕ್ಕಾಗೇ ತಾನು ಜನರಿಂದ ಬೇಡಿ ತಂದಿದ್ದನ್ನೆಲ್ಲ ಮನೆಯಲ್ಲಿ ರಾಶಿ ರಾಶಿ ಮಾಡಿ ಇರಿಸಿದ್ದು, ಆಯಮ್ಮ ಸತ್ತ ಬಳಿಕ ಸಂಪತ್ತು ಎರಚಾಡಿದೆ! ತಾನೂ ತಿನ್ನದೆ, ಪರರಿಗೂ ನೀಡದ ಈ ಮನುಷ್ಯನ ಆಸೆ ದುರಾಸೆಗೆ ಇದೊಂದು ನಿದರ್ಶನವಾಗಿದೆ.

ಆಂದೋಲನ ಡೆಸ್ಕ್

Recent Posts

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

1 hour ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

2 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

3 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

4 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

5 hours ago

ಚಾಮರಾಜನಗರ ಅರಣ್ಯ ವಲಯದಲ್ಲಿ ಹೆಚ್ಚಿದ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!

ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…

8 hours ago