ಅಂಕಣಗಳು

ಒಂದು ಇರುಳು ಪ್ರಖರವಾಗಿ ಮಿನುಗಿದ ನಕ್ಷತ್ರ

• ವಿನಯ ಪ್ರಭಾವತಿ

ಒಂದು ದಿನ ರಾತ್ರಿ ಇದ್ದಕ್ಕಿದ್ದಂತೆ ಬಾನಿನಲ್ಲಿ ಪ್ರಖರವಾಗಿ ನಕ್ಷತ್ರವೊಂದು ಮಿನುಗುತ್ತಿತ್ತು. ಬೇರೆ ನಕ್ಷತ್ರಗಳಿಗಿಂತ ಸಾವಿರ ಪಟ್ಟು ಹೆಚ್ಚು ಮಿನುಗುತ್ತಿದ್ದ ಆ ನಕ್ಷತ್ರದ ಬೆಳಕು ಬೆಟ್ಟಗುಡ್ಡವನ್ನು ಆವರಿಸಿತ್ತು. ಬೆಟ್ಟದಲ್ಲಿ ಮಲಗಿದ್ದ ಕುರಿಗಾಯಿಗಳಿಗೆ ಈ ಬೆಳಕು ಅಚ್ಚರಿ, ಭಯ ತಂದಿತ್ತು. ಇಷ್ಟು ಬೆಳಕನ್ನು ನೀಡುತ್ತಿರುವ ಈ ನಕ್ಷತ್ರ ಏನನ್ನು ಸೂಚಿಸುತ್ತಿದೆ ಎಂದು ಅರೆಕ್ಷಣ ದಿಗಿಲಾ ದರು. ಆದರೆ ಪಕ್ಕನೆ ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲೂ ಪ್ರಕಾಶಿಸಿತು, ಕುರುಬರು ಬಹಳವಾಗಿ ಹೆದರಿದರು. ಆ ದೂತನು ಅವರಿಗೆ -‘ಹೆದರಬೇಡಿರಿ, ಕೇಳಿರಿ ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭ ಸಮಾಚಾರವನ್ನು ನಿಮಗೆ ತಿಳಿಸುತ್ತೇನೆ, ನಿಮಗೆ ಒಳಿತನ್ನು ಮಾಡುವ ಸಂಕೇತ ವಾಗಿಯೇ ಈ ನಕ್ಷತ್ರ ಕಾಣಿಸಿಕೊಂಡಿದೆ. ಮುಂದೆ ವಿಶ್ವದಲ್ಲಿ ಸಂತಸ, ನೆಮ್ಮದಿ ಮನೆ ಮಾಡಲಿದೆ. ಇದಕ್ಕೆ ಕಾರಣವಾಗುವ ದೇವಮಾನವನ ಜನನದ ಸಂಕೇತವೇ ಈ ನಕ್ಷತ್ರವಾಗಿದೆ. ಆತ ಇಡೀ ಜಗತ್ತಿಗೆ ಬೆಳಕು ನೀಡಲಿರುವನು’ ಎಂದು ದೂತನು ಹೇಳಿದನು. ನಂತರ ಆ ಕುರಿಗಾಹಿಗಳು ನಕ್ಷತ್ರದ ಹಾದಿಯನ್ನೇ ಹಿಂಬಾಲಿಸಿ ನಡೆದರು. ಆ ನಕ್ಷತ್ರ ಅವರನ್ನು ಯೇಸುಕ್ರಿಸ್ತ ಜನಿಸಿದ್ದ ಬೆಥ್ಲೆಹೆಮ್‌ಗೆ ಕರೆದುಕೊಂಡು ಹೋಯಿತು.

ನಕ್ಷತ್ರ ದೈವತ್ವವನ್ನು ಸೂಚಿಸುವಂಥದು. ಮೂಡಣ ದೇಶದಿಂದ ಬಂದ ಮೂವರು ಜೋಯಿಸ ಪಂಡಿತರಿಗೂ ಯೇಸು ಹುಟ್ಟಿದ ಸ್ಥಳ ತೋರಿಸಿದ್ದು ಈ ನಕ್ಷತ್ರವೇ. ಪಂಡಿತರು ಕೂಸನ್ನು ಕಂಡು, ಅದಕ್ಕೆ ಸಾಷ್ಟಾಂಗ ನಮ ಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ, ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.

ಎಲ್ಲ ಕ್ರೈಸ್ತ ಮನೆಗಳಲ್ಲೂ ಒಂದು ಕ್ರಿಸ್‌ಮಸ್ ವೃಕ್ಷವನ್ನು ತಂದು ನಿಲ್ಲಿಸುವುದು ವಾಡಿಕೆ. ಕ್ರಿಸ್‌ಮಸ್ ಆಚರಣೆಯಲ್ಲಿ ಕ್ರಿಸ್‌ಮಸ್‌ ಮರವೇ ಪ್ರಮುಖ ಆಕರ್ಷಣೆ. ಈ ವೃಕ್ಷವನ್ನು ದೀಪಗಳು ಮತ್ತು ಇತರ ವಸ್ತು ಗಳಿಂದ ಅಲಂಕಾರಗೊಳಿಸಲಾಗುತ್ತದೆ. ಇದು ನಿತ್ಯ ಹರಿ ದ್ವರ್ಣದ ಮರ. ಈ ಮರವು ಸದಾ ಹಸಿರಾಗಿರುವ ಕಾರಣ ಮನೆಯ ಮುಂದೆ ಇಡುತ್ತಿದ್ದರಂತೆ ಕಾರಣ ಮನೆಗೆ ಯಾವುದೇ ದುಷ್ಟಶಕ್ತಿಗಳ ಪ್ರವೇಶಿಸಬಾರದು ಎಂಬುದಾಗಿತ್ತು. ಆ ನಂಬಿಕೆಯೇ ಇಂದಿಗೂ ಮುಂದುವರಿದಿದೆ. ನಮ್ಮ ಮನಸ್ಸು ಸದಾ ಹಸಿರಾಗಿ ಪ್ರಫುಲ್ಲವಾಗಿ ಇರಲಿ ಎಂಬುದೇ ಇದರ ಸಂಕೇತ.

ಕ್ರಿಸ್‌ಮಸ್ ಹಬ್ಬ, ಕೊಡುಗೆಯ ಹಬ್ಬ ಕೂಡ ಹೌದು. ಉಡುಗೊರೆಗಳನ್ನು ಕೊಡುವುದು, ವಿನಿಮಯ ಮಾಡಿಕೊಳ್ಳುವುದು. ತಿಂಡಿ ತಿನಿಸುಗಳು, ಊಟವನ್ನು ಹಂಚಿಕೊಳ್ಳುವುದು ಈ ಹಬ್ಬದ ವಿಶೇಷತೆ, ಅಂದು ಎಷ್ಟು ಜನ ಕ್ರೈಸ್ತರು ಹಬ್ಬವನ್ನು ಅನಾಥಾಶ್ರಮದಲ್ಲಿ, ವೃದ್ಧಾಶ್ರಮದಲ್ಲಿ ಆಚರಿಸುತ್ತಾರೆ. ಕ್ರಿಸ್ಮಸ್ ಹಬ್ಬದ ಮೂಲ ಉದ್ದೇಶವೇ ಬಡವರಿಗೆ, ಅನಾಥರಿಗೆ, ನಿರ್ಗತಿಕರಿಗೆ ಉಡುಗೊರೆಗಳನ್ನು ಯಾವುದೇ ರೂಪದಲ್ಲಾದರೂ ನೀಡುವುದು.

ಕ್ರಿಸ್‌ಮಸ್ ಹಬ್ಬದಲ್ಲಿ ಸಾಂಟಾಕ್ಲಾಸ್‌ನದು ಒಂದು ವಿಶೇಷ ಸ್ಥಾನ. ಆತನ ವೇಷ ಭೂಷಣ ಮೆಚ್ಚಿಗೆ ಆಗುವಂತದ್ದು. ಕೆಂಪು ಬಟ್ಟೆ, ಹಾಟ್ ತೊಟ್ಟು, ಬಿಳಿ ಗಡ್ಡ, ಡೊಳ್ಳು ಹೊಟ್ಟೆ, ಉಡುಗೊರೆಗಳನ್ನು ಚೀಲದಲ್ಲಿ ತುಂಬಿ ಕೊಂಡು ಬರುವುದು. ಸಾಂಟಾಕ್ಲಾಸಿನ ನಿಜವಾದ ಹೆಸರು ಸಂತ ನಿಕೋಲಸ್ ಅಂತ. ಈತನು ನಾಲ್ಕನೇ ಶತಮಾನದಲ್ಲಿ ಜೀವಿಸಿದ್ದ ಒಬ್ಬ ಕ್ರೈಸ್ತ ಪಾದ್ರಿ, ಈತನು ರಹಸ್ಯವಾಗಿ ನಿರ್ಗತಿ ಕರಿಗೆ ಸಹಾಯ ಮಾಡುತ್ತಿದ್ದನಂತೆ. ಮಕ್ಕಳು ಅಂದರೆ ಸಾಂಟಾ ಕ್ಲಾಸ್‌ಗೆ ತುಂಬಾ ಪ್ರೀತಿ, ಕ್ರಿಸ್‌ಮಸ್‌ ಹಬ್ಬಕ್ಕೆ ಚಕ್ಕುಲಿ, ಕರ್ಜಿಕಾಯಿ, ಡೈಮಂಡ್ ಕಟ್ಸ್, ರೋಸ್ ಕುಕ್ಕೀಸ್, ರವೆ ಉಂಡೆ, ಕೊಬ್ಬರಿ ಮಿಠಾಯಿ ವಿವಿಧ ರೀತಿಯ ಕೇಕ್‌ಗಳನ್ನು ಕೂಡ ಮಾಡಿ ನೆರೆಹೊರೆಯವರಿಗೆ, ಸ್ನೇಹಿತರಿಗೆ ಹಂಚುವುದು.
p.j.vinaya@gmail.com

andolanait

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

51 mins ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

52 mins ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

55 mins ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

1 hour ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 hour ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

1 hour ago