ಅಂಕಣಗಳು

ಕ್ರಿಸ್‌ಮಸ್‌ ಸಂಭ್ರಮಕ್ಕೆ ಕ್ಯಾರಲ್ ಗಾಯನದ ಮುನ್ನುಡಿ

• ಪ್ರೊ.ಎ.ಟಿ.ಸದೆಬೋಸ್

ಇಂದು ಕ್ರಿಸ್ತನ ಹುಟ್ಟು ಹಬ್ಬ. ಜಗತ್ತಿನ ಅತ್ಯಂತ ದೊಡ್ಡ ಹಬ್ಬ. ಇನ್ನು ಸರಿಯಾಗಿ ಒಂದು ವಾರಕ್ಕೆ ಹೊಸ ವರ್ಷ ಬರಲಿದೆ. ಕ್ರಿಸ್ತ ಜನಿಸಿದಾಗ ನಕ್ಷತ್ರವೊಂದು ನಮಗೆ ದಾರಿ ತೋರಿದರೆ, ಇಂದು ಕ್ರೈಸ್ತರ ಮನೆ ಮನೆಗಳಲ್ಲಿ ನಕ್ಷತ್ರವನ್ನು ಬೆಳಗುತ್ತಾ ಕ್ರಿಸ್ತನ ಜನನದ ನೆನಪನ್ನು ತರಲು ಗೋದಲಿಯ ಸೃಷ್ಟಿ ಸಾಂತಕ್ಲಾಸನ ಆಗಮನ ಇವೆಲ್ಲ ನಡೆಯುತ್ತದೆ. ಕ್ರಿಸ್‌ಮಸ್ ವೃಕ್ಷವನ್ನೂ ನಿಲ್ಲಿಸುತ್ತಾರೆ.

ರೋಮನ್ ದೊರೆ ಸೀಸ‌ ಅಗಸ್ಟಸ್‌ ಕಾಲದಲ್ಲಿ ಎಲ್ಲ ಕಡೆ ಜನಗಣತಿಯನ್ನು ನಡೆಸಿದರು. ಬೆಥ್ಲೆಹೆಮ್‌ನ ವಾಸಕ್ಕೆ ಮನೆ ಇಲ್ಲದ ಬಡಕುಟುಂಬವೊಂದರಲ್ಲಿ ಯೇಸು ಗೋದಲಿ ಯಲ್ಲಿ ಜನಿಸಿದರು. ರಾತ್ರಿಯ ವೇಳೆ ಕುರಿ ಕಾಯುತ್ತಿದ್ದ ಕುರುಬರಿಗೆ ದೇವದೂತರು ಸಂದೇಶ ನೀಡಿ, ‘ಮಹೋನ್ನ ತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಸುಮನುಜರಿಗೆ ಶಾಂತಿ ಎಂದು ಸಾರಿದರು. ಇದೇ ಮೊದಲ ಕ್ಯಾರಲ್ ಎಂದು ಗುರುತಿಸಲಾಗುತ್ತದೆ. ಅಂದಿನ ಸಾಮಾಜಿಕ
ಶ್ರೇಣಿಯ ಕೆಳಗಿನ ಮೆಟ್ಟಿಲಲ್ಲಿದ್ದ ಕುರುಬರಿಗೆ ದೇವ ದೂತರು ಈ ಸಂದೇಶ ನೀಡಿದರೂ. ಶಕ್ತಿಶಾಲಿ ಅರಸರನ್ನು ಆಯ್ಕೆ ಮಾಡಿಕೊಳ್ಳಲಿಲ್ಲ.

ಕ್ರಿಸ್‌ಮಸ್‌ ಆಚರಣೆಯು ಡಿಸೆಂಬರ್ ತಿಂಗಳ ಆರಂಭದಲ್ಲಿ ಕ್ಯಾರಲ್ ಗೀತೆಗಳ ಇಂಪಾದ ಗಾಯನದಿಂದ ಆರಂಭವಾಗುತ್ತದೆ. ಮೈಸೂರಿನಲ್ಲಿ ಕ್ರಿಸ್‌ಮಸ್ ಹಬ್ಬದ ಆರಂಭವನ್ನು ಸೂಚಿಸುವಂತೆ, ಕಾರ್ಮೆಲ್ ಕ್ಯಾಥೋಲಿಕ್ ಸಂಸ್ಥೆಯು ಕ್ಯಾರಲ್ ಗೀತೆಗಳ ಬೃಹತ್ ಗಾಯನ ಕಾರ್ಯ ಕ್ರಮವನ್ನು ಡಿಸೆಂಬರ್ ತಿಂಗಳ ಎರಡನೇ ಭಾನುವಾರ ಆಯೋಜಿಸಿತ್ತು. ಸಂಗೀತಕ್ಕೆ ಎಲ್ಲರನ್ನೂ ಬೆಸೆಯುವ ಶಕ್ತಿ ಇದೆ ಎಂಬುದನ್ನು ಸಾಬೀತುಪಡಿಸುವಂತೆ ಕಾರ್ಮೆಲ್ ಕ್ಯಾರಲ್ ಗೀತೆಗಳ ಗಾಯನವು ಸಾಂಸ್ಕೃತಿಕ ನಗರಿಯ ಒಂದು ಅವಿಭಾಜ್ಯ ಘಟಕ ಎಂಬಂತೆ ಆಗಿದೆ.

ಕ್ಯಾರಲ್ ಗೀತೆಗಳ ಸ್ಪರ್ಧೆಯು ನರ್ಸರಿ ಮಕ್ಕಳಿಂದ ವೃತ್ತಿ ನಿರತ ಗಾಯಕರವರೆಗೂ ಸುಮಾರು 12 ವರ್ಗಗಳಲ್ಲಿ ನಡೆಯುತ್ತದೆ. ಈ ಸ್ಪರ್ಧೆಯು ವಿವಿಧ ವರ್ಗಗಳ ಜನರನ್ನು ಒಂದು ವೇದಿಕೆಗೆ ತರುವುದೇ ವಿಶೇಷವಾಗಿದೆ.
ಈ ವರ್ಷ ನಡೆದ 31ನೇ ಕ್ರಿಸ್‌ಮಸ್ ಕ್ಯಾರಲ್ ಗಾಯನದಲ್ಲಿ 103 ತಂಡಗಳು ಹಾಗೂ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಗಾಯಕರು ಒಂದೇ ದಿನ ವೇದಿಕೆಯನ್ನೇರಿದರು. ಸುಮಾರು ಹತ್ತು ಸಾವಿರಕ್ಕೂ ಅಧಿಕ ಮಂದಿ ದಿನಏಡೀ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದಿನ ಸಂಕೀರ್ಣವಾದ ಒತ್ತಡದ ಸ್ಪರ್ಧಾಯುಗದಲ್ಲಿ, ಕೈ ಕೈ ಹಿಡಿದು ಒಂದೇ ಸ್ವರವಾಗಿ, ಗೀತೆಯಾಗಿ ಹಾಡುವಾಗ ಅಲ್ಲಿ ಜಾತಿ, ಮತ, ಧರ್ಮ, ಭಾವ ಮೀರಿದ ಸೌಹಾರ್ದ ವಾತಾವರಣವು ಏರ್ಪಡುತ್ತದೆ ಎಂಬುದು ಅಲ್ಲಿ ಸತ್ಯವಾಗಿತ್ತು.

ಕ್ರಿಸ್‌ಮಸ್ ಕ್ಯಾರಲ್ ಗೀತೆಗಳ ಸ್ಪರ್ಧೆಯನ್ನು ಸಂಘವು ತುಂಬಾ ವ್ಯವಸ್ಥಿತವಾಗಿ ಏರ್ಪಡಿಸಿತ್ತು. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಸ್ಪರ್ಧಿಗಳು ನವೆಂಬರ್‌ನಿಂದಲೇ ತಯಾರಿ ನಡೆಸಿದ್ದರು. ಅಂದವಾದ ವೇಷ ಭೂಷಣಗಳು, ಸಾಂತಕ್ಲಾಸ್, ಮಾತೇ ಮೇರಿ, ಸಂತ ಜೋಸೆಫ್ ಹಾಗೂ ಬಾಲ ಯೇಸುವಿನ ಅನುಕರಣೆಗಳನ್ನು ಮಾಡುತ್ತಾ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮೈಸೂರು ನಗರ ಮತ್ತು ಆಸುಪಾಸಿನ ಎಲ್ಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಯನಶೀಲ ಸಹೋದರರು, ಭಗಿನಿಯರು ವಿವಿಧ ಕ್ರೈಸ್ತ ಪಂಗಡಗಳು ಭಾಗವಹಿಸಿದ್ದವು.

1992ರಲ್ಲಿ ಮೊತ್ತ ಮೊದಲ ಬಾರಿಗೆ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಕಾರ್ಮೆಲ್ ಕ್ಯಾರಲ್ ಗೀತೆಗಳ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಅಂದು ಮೂವತ್ತು ತಂಡಗಳಿಂದ ಆರಂಭವಾದ ಈ ಕಾರ್ಯಕ್ರಮವು ಇಂದು ದಿನವಿಡೀ ಬಿಡುವಿಲ್ಲದಂತೆ ನಡೆಯುತ್ತದೆ. ಕ್ರಿಸ್‌ಮಸ್ ಆಚರಣೆಯನ್ನು ಮೈಸೂರಿಗೆ ಸಾರುವ ಈ ಸ್ಪರ್ಧೆಗಳಲ್ಲಿ ಕ್ರೈಸ್ತರ ವಿವಿಧ ಪಂಗಡಗಳಾದ ಕ್ಯಾಥೋಲಿಕ್, ಪ್ರೊಟೆಸ್ಟೆಂಟ್, ಪೆಂಟಕೊಸ್ಟ್ ಇತ್ಯಾದಿ ಎಲ್ಲರೂ ಸಂತೋಷ, ಸಡಗರದಿಂದ ಪಾಲ್ಗೊಳ್ಳುತ್ತಾರೆ.

ಕನ್ನಡ, ಇಂಗ್ಲಿಷ್ ಅಲ್ಲದೆ ಭಾರತೀಯ ಎಲ್ಲ ಭಾಷೆಗಳಲ್ಲಿಯೂ ಹಾಡಬಹುದು. ಕೊನೆಗೆ ಬಹುಮಾನಿತರು, ಪಾಲ್ಗೊಂಡವರು ಸಿಹಿಯನ್ನು ಹಂಚಿ ಹೊಸ ವರ್ಷವನ್ನು ಎದುರುಗೊಳ್ಳಲು ಮುನ್ನಡೆಯುತ್ತಾರೆ.
sadeboset@gmail.com

andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

8 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

8 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

8 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

10 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

10 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago