ಅಂಕಣಗಳು

ನಿವೃತ್ತರಿಗಾಗಿ ನಿವೃತ್ತರಾದವರು ಕಟ್ಟಿಕೊಂಡ ಸೇವಾ ಸಂಸ್ಥೆ

• ಕೀರ್ತಿ ಬೈಂದೂರು
ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇವರೆಲ್ಲ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ Railway Pensioners Welfare Association’ Rogows ತೊಡಗಿಸಿಕೊಂಡು, ಪಿಂಚಣಿ ಪಡೆಯಲು ಪರದಾಡುವ ಜನರಿಗೆ ತಮ್ಮಿಂದಾದಷ್ಟು ಸಹಾಯ ಮಾಡಬೇಕೆಂದು ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರಿನ ಬಂಬೂ ಬಜಾರ್ ಪಕ್ಕದಲ್ಲಿ ಸಂಸ್ಥೆಯ ಕಚೇರಿಯಿದೆ. ಸರ್ಕಾರಿ ವೃತ್ತಿಗಳೇ ಹಾಗೆ, ಅವು ವೃತ್ತಿ ಭರವಸೆ ನೀಡುತ್ತವೆ. ಆದರೆ ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವವರು ನಿವೃತ್ತಿಯ ಮುನ್ನ ತೀರಿಹೋದರೆ, ಅವರ ಹೆಂಡತಿ, ಆನಂತರ ಮದುವೆಯಾಗದ ಮಕ್ಕಳು, ದಿವ್ಯಾಂಗ ಮಕ್ಕಳು ಪಿಂಚಣಿಗೆ ಹಕ್ಕುದಾರರಾಗುತ್ತಾರೆ. ಪಿಂಚಣಿ ಪಡೆಯುವುದೇನು ಸಾಮಾನ್ಯ ಸಂಗತಿಯಲ್ಲ, ದಾಖಲಾತಿ ನೀಡಿದರಾಯಿತು, ವಿನಂತಿ ಪತ್ರ ಲಗತ್ತಿಸಿದರಾಯಿತು ಎನ್ನುವಷ್ಟು ಸುಲಭವಿಲ್ಲ. ರೈಲ್ವೆ ನಿಯಮಗಳ ಬಗ್ಗೆ ಅರಿವು ಹೊಂದಿರುವವರಿಗೆ ಪೆನ್ಗನ್ ಪಡೆಯುವುದು ದೊಡ್ಡ ಸಮಸ್ಯೆಯೇ ಅಲ್ಲ. ಆದರೆ ತಾವೂ ಪೆನ್ನನ್ ಪಡೆಯಬಹುದು ಎಂದು ಅನೇಕರಿಗೆ ತಿಳಿದೇ ಇರುವುದಿಲ್ಲ ಅಥವಾ ತಿಳಿಸಿರುವುದಿಲ್ಲ.

ಪಿಂಚಣಿ ಸಿಗುತ್ತದೆ ಎಂದು ಎಷ್ಟೋ ವರ್ಷ ಬಿಟ್ಟು, ಸಂಸ್ಥೆಗೆ ಸಹಾಯ ಕೇಳಿ ಬಂದಿರುವ ಫಲಾನುಭವಿಗಳು ಅನೇಕರಿದ್ದಾರೆ. ‘ವೃತ್ತಿಯಲ್ಲಿದ್ದರೆ ಮಾಹಿತಿ ಕಲೆ ಹಾಕುವುದು ಸುಲಭವಾಗುತ್ತಿತ್ತು. ಈಗಲೂ ಪಡೆಯಬಹುದು. ಆದರೆ, ತುಸು ತಡವಾಗುತ್ತದಷ್ಟೇ’ ಎನ್ನುತ್ತಾರೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾರ್ಥಸಾರಥಿ ಅವರು.

ಅವಿದ್ಯಾವಂತೆ ಮಹಿಳೆಯೊಬ್ಬಳ ತಂದೆ ರೈಲ್ವೆ ಇಲಾಖೆಯಲ್ಲಿ ನಿವೃತ್ತಿ ಹೊಂದುವ ಮುನ್ನವೇ ತೀರಿಹೋಗಿದ್ದರು. ಆಕೆ ಗಂಡ ಮತ್ತು ತಾಯಿಯನ್ನೂ ಕಳೆದುಕೊಂಡಿದ್ದಳು. ಪಿಂಚಣಿಗಾಗಿ ಇಲಾಖೆಗಳಿಗೆ ಅಲೆಯುತ್ತಿರುವಾಗ, ಅನೇಕರು ಅವಮಾನಿಸಿದ್ದರು. ಹತ್ತು ಮನೆಗಳಲ್ಲಿ ಮನೆಗೆಲಸ ಮಾಡುತ್ತಿದ್ದ ಆಕೆ, ಸೋರುತ್ತಿರುವ ಮನೆಯಲ್ಲೇ ಬದುಕು ಕಟ್ಟಿಕೊಂಡಿದ್ದಳು. ಹೇಗೊ ವಿಳಾಸ ತಿಳಿದು, ಸಂಸ್ಥೆಗೆ ಬಂದಿದ್ದಳು. ಸಂಸ್ಥೆಯ ಅಧಿಕಾರಿಗಳೆಲ್ಲ ಸೇರಿ ಮಹಿಳೆಯ ಸಮಸ್ಯೆಯನ್ನು ಅರಿತರು. ಸಂಸ್ಥೆಯ ಸದಸ್ಯರು ಸೇರಿ ಆಕೆಯ ಸಮಸ್ಯೆ ಬಗೆಹರಿಸಲು ಎರಡು ತಿಂಗಳು ಬೇಕಾದವು. 19 ಲಕ್ಷ ರೂ.ಗಳಷ್ಟು ಬಾಕಿ ಹಣ ಕೊಡಿಸಿದರು. 15 ಸಾವಿರ ರೂ. ಗಳಷ್ಟು ಪಿಂಚಣಿಯ ಹಣ ಪ್ರತಿ ತಿಂಗಳು ಬರುವಂತೆ ನೋಡಿಕೊಂಡಿದ್ದಷ್ಟೇ ಅಲ್ಲ. ಹಣವನ್ನು ಜೋಪಾನವಾಗಿ ಖರ್ಚು ಮಾಡಬೇಕೆಂಬ ಎಚ್ಚರಿಕೆಯನ್ನೂ, ಕೆಲಸ ಮಾಡುತ್ತಿರು ಎಂದು ತಿಳಿವಳಿಕೆಯನ್ನು
ಹೇಳಿದರು.

ಪೈವೇಟ್ ಕಾನ್ವೆಂಟ್‌ನಲ್ಲಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯದೂ ಇದೇ ಕತೆ. ತಾಯಿ ಸತ್ತು ಅದಾಗಲೇ ಹನ್ನೆರಡು ವರ್ಷಗಳು ಕಳೆದಿತ್ತು. ತಂದೆಗೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಖಾತೆಯ ಬಗ್ಗೆ ಏನೂ ತಿಳಿದಿರಲಿಲ್ಲ.

ವಿಶೇಷತೆ ಎಂದರೆ ಅವರ ತಂದೆ ಆಂಗ್ಲೋ ಇಂಡಿಯನ್ ಆಗಿದ್ದರೆ, ತಾಯಿ ಸ್ಥಳೀಯ ಮಹಿಳೆಯಾಗಿದ್ದರು. ತಂದೆಯ ಹೆಸರೊಂದೇ ಇಟ್ಟುಕೊಂಡು ಸಂಸ್ಥೆಯ ಸದಸ್ಯರೆಲ್ಲ ಮಾಹಿತಿ ಹುಡುಕಲು ಆರಂಭಿಸಿದ್ದರು. ರೈಲ್ವೆ ಅಧಿಕಾರಿಗಳು ಅಷ್ಟು ಕೋಟಿ ಜನರ ನಡುವೆ ಆಕೆಯ ತಂದೆಯ ಹೆಸರನ್ನು ಹೇಗೆ ಹುಡುಕುವುದು ಎಂದಾಗ, ಸಂಸ್ಥೆಯ ಸದಸ್ಯರು ಆಕೆಯ ತಂದೆ ಆಂಗ್ಲೋ ಇಂಡಿಯನ್ ಮತ್ತವರ ಹೆಸರಿನ ವಿಶೇಷತೆ ತಿಳಿಸಿಕೊಟ್ಟರು. ಹದಿನೈದು ದಿನಗಳ ಸಮಯ ಕೇಳಿದ್ದ ಅಧಿಕಾರಿಗಳು ಮಾರನೆಯ ದಿನದ ಹೊತ್ತಿಗಾಗಲೇ ಪೂರ್ಣ ವಿವರಗಳನ್ನು ಇವರಿಗೆ ಕಳುಹಿಸಿಯಾಗಿತ್ತು. ಸಿಗಬೇಕಾದ 13 ಲಕ್ಷ ರೂ. ಬಾಕಿ ಹಣದೊಂದಿಗೆ ಆ ಮಹಿಳೆ 23 ಸಾವಿರ ರೂಪಾಯಿಗಳ ಪಿಂಚಣಿ ಪಡೆಯುತ್ತಾ, ಆರಾಮವಾಗಿದ್ದಾರೆ.

“ನಿಮಗೆ ಪಾಸ್‌ಬುಕ್‌ನಲ್ಲಿ ಹಣ ಬರುವ ತನಕ ಸಹಾಯ ಮಾಡುತ್ತೇವೆ. ಇದಕ್ಕೆ ಬದಲಿಯಾಗಿ ಹಣ ಕೊಡುವುದು ಇಲ್ಲಾ, ಸಿಹಿ ನೀಡಿ ಸಂಭ್ರಮಿಸುವಂತಿಲ್ಲ ಎಂಬ ಷರತ್ತನ್ನು ಮೊದಲಿಗೇ ತಿಳಿಸಿಬಿಡುತ್ತಾರೆ. ಕೆಲವರು ತಮ್ಮ ಬದುಕಿಗೆ ಆರ್ಥಿಕ ನೆರವು ಸಿಕ್ಕ ಖುಷಿಯಲ್ಲಿ ಹಣವನ್ನು ತೆಗೆದುಕೊಳ್ಳ ಲೇಬೇಕು ಎಂದು ಒತ್ತಾಯಿಸಿದಾಗ, ಸಂಸ್ಥೆಯ ಹೆಸರಿನಲ್ಲಿ ರಶೀದಿಯನ್ನು ನೀಡಿಯೇ ಹಣ ಪಡೆಯುತ್ತಾರೆ. ಈ ತತ್ವಕ್ಕೆ ಬದ್ಧರಾಗಿ ನಿವೃತ್ತ ರೈಲ್ವೆ ಅಧಿಕಾರಿಗಳೆಲ್ಲ ಕೈ ಜೋಡಿಸುತ್ತಿದ್ದಾರೆ. ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ ಎಂಬ ಸರ್ವಜ್ಞನ ಸಾಲುಗಳನ್ನು ಜೀವನ ಪಾಠವಾಗಿಸಿಕೊಂಡವರ ಕಥೆಯಿದು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

11 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

15 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

16 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

17 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

18 hours ago