ಅಂಕಣಗಳು

ಸರ್ಕಾರಿ ಶಾಲೆಗಳಿಗೆ ಹೊಸ ರೂಪ ನೀಡುತ್ತಿರುವ ಅಕ್ತ ಟೀಮ್‌

ಅನಿಲ್ ಅಂತರಸಂತೆ

ರಾಜ್ಯದಲ್ಲಿ ಕೆಲ ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ. ಇಲ್ಲಿ ಮೂಲಸೌಕರ್ಯಗಳಿಲ್ಲ, ಉತ್ತಮ ವಾತಾವರಣವಿಲ್ಲ, ಮೈದಾನವಿಲ್ಲ, ಕಟ್ಟಡಗಳ ಸ್ಥಿತಿ ಉತ್ತಮವಾಗಿಲ್ಲ ಎಂಬೆಲ್ಲ ಕಾರಣಗಳಿಂದಾಗಿ ಇಂದು ಸಾಕಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಿದ್ದಾರೆ.

ಶಾಲೆಗಳ ಈ ಸಮಸ್ಯೆಗಳಿಂದ ಮಕ್ಕಳ ದಾಖಲಾತಿ ಪ್ರಮಾಣವು ಇಳಿಮುಖವಾಗಿದೆ. ಇದರಿಂದಾಗಿ ಕೆಲ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುವಿಪಿವೆ, ಸಾಕಷ್ಟು ಮುಚ್ಚಿವೆ ಕೂಡ. ಸರ್ಕಾರಿ ಶಾಲೆಗಳ ಈ ಪರಿಸ್ಥಿತಿ ಕಂಡ ಯುವತಿ ಅಕ್ಕ ಅನು ತನ್ನ ಗೆಳೆಯರ ಬಳಗವನ್ನು ಕಟ್ಟಿಕೊಂಡು ಸರ್ಕಾರಿ ಶಾಲೆಗಳಿಗೆ ಸುಣ್ಣಬಣ್ಣ ಬಳಿಯುವ ಜತೆಗೆ ಆವರಣವನ್ನು ಸ್ವಚ್ಛಗೊಳಿಸುತ್ತಾ ‘ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ’ ಅಭಿಯಾನವನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಮೈಸೂರು, ಮಂಡ್ಯ ಭಾಗಗಳ ಸರ್ಕಾರಿ ಶಾಲೆಗಳಲ್ಲಿ ತಮ್ಮ ಶ್ರಮದಾನ ಮಾಡಿರುವ ಅಕ್ಕ ಅನು ಮತ್ತು ತಂಡ ಎಚ್. ಡಿ. ಕೋಟೆಯ ಅಂತರಸಂತೆ ಶಾಲೆ, ಗಂಗಡಹೊಸಹಳ್ಳಿ ಶಾಲೆ, ಹ್ಯಾಂಡ್‌ಪೋಸ್ಟ್ ಶಾಲೆ, ಹುಣಸೂರಿನ ಹುಂಡೀಮಾಳ, ನಾಗರಹೊಳೆ ಅರಣ್ಯ ವ್ಯಾಪ್ತಿಯ ನಾಗರಹೊಳೆ ಗಿರಿಜನ ಆಶ್ರಮ ಶಾಲೆ, ವಡಕನ ಮಾಳ ಶಾಲೆ, ಹೊಸೂರು ಹಾಡಿ ಶಾಲೆ, ಮಂಡ್ಯದ ದೊಡ್ಡಬೇಡರಹಳ್ಳಿ ಶಾಲೆ, ಹೊಸಕೆರೆ ಶಾಲೆ, ಅರೆಚಾಕನಹಳ್ಳಿ ಶಾಲೆಗಳನ್ನು ಸ್ವಚ್ಚಗೊಳಿಸಿ, ಬಣ್ಣ ಹೆಚ್ಚಿ ಸುಂದರಗೊಳಿಸಿದ್ದಾರೆ. ಗಿಡಗಂಟಿಗಳಿಂದ ಆವೃತ್ತಗೊಂಡು ಸುಣ್ಣ ಬಣ್ಣವಿಲ್ಲದೆ ದುಸ್ಥಿತಿಯಲ್ಲಿರುವ ಸರ್ಕಾರಿ ಕನ್ನಡ ಶಾಲೆಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವುದೇ ಈ ತಂಡದ ಕಾಯಕ. ಇಂತಹ ಸಮಾಜ ಸೇವೆಯಿಂದಲೇ ಇಂದು ಕರ್ನಾಟಕದ ಮನೆ ಮಾತಾಗಿರುವ ಅಕ್ಕ ಅನು ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಚಿಕ್ಕಬೆರಗಿ ಗ್ರಾಮದ ಹೇಮಣ್ಣ ಮತ್ತು ಈರಮ್ಮ ದಂಪತಿಗಳ ಮೂರನೇ ಮಗಳು. ಅಕ್ಕ ಅನು ಎಂದೇ ಪ್ರಸಿದ್ಧಿ ಪಡೆದಿರುವ ಇವರು ತಮ್ಮ 12-15 ಮಂದಿಯ ತಂಡದ ಸಹಾಯದೊಂದಿಗೆ ರಾಜ್ಯದ 121ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಶ್ರಮದಾನ ಮಾಡುವ ಮೂಲಕ ಹೊಸ ರೂಪ ನೀಡುತ್ತಿದ್ದಾರೆ.

ಸ್ವಚ್ಛ ಭಾರತ ಅಭಿಯಾನ ಮತ್ತು ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ ಅಭಿಯಾನದ ಮೂಲಕ ಅಕ್ಕ ಅನು ಮತ್ತು ತಂಡ 2019ರಿಂದ ಈ ಸೇವೆಯನ್ನು ಆರಂಭಿಸಿದ್ದು, ಈಗಾಗಲೇ ರಾಜ್ಯದ ಸುಮಾರು 23 ಜಿಲ್ಲೆಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳನ್ನು ಸ್ವಚ್ಛ ಮಾಡುವ ಜೊತೆಗೆ ಸ್ಥಳೀಯ ದಾನಿಗಳ ಸಹಕಾರದಿಂದ ಶಾಲೆಗಳಿಗೆ ಸುಣ್ಣ ಬಣ್ಣ ಬಳಿಯುವ ಕಾಯಕ ಮಾಡುತ್ತಿದ್ದಾರೆ. ಕನ್ನಡ ಶಾಲೆಗಳ ಪರಿಸ್ಥಿತಿ ಕಂಡ ಅನು ಆರಂಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿಯೇ ಬಣ್ಣ ಬಳಿಯುವ ಕೆಲಸ ಆರಂಭಿಸಿದರು. ಆರಂಭದಲ್ಲಿರ ಸರ್ಕಾರಿ ಶಾಲಾಗಳಲ್ಲ ಇವರು ಕೈಗೊಂಡ ಸೇವೆ ಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ ಕೆಲ ಉತ್ಸಾಹಿ ಯುವಕರೂ ಅವರ ತಂಡ ಸೇರಲು ಬಯಸಿ ಸುಮಾರು 12-15 ಜನರ ತಂಡವಾಗಿ ಪರಿವರ್ತನೆಗೊಂಡು ರಾಜ್ಯವನ್ನು ಸುತ್ತಿ ಅಲ್ಲಿನ ಸರ್ಕಾರಿ ಶಾಲೆಗಳಲ್ಲಿ ಶ್ರಮದಾನ ಮಾಡುತ್ತಿದೆ. ಈವರೆಗೂ ಸುಮಾರು 121ಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿರುವ ಇವರು ಜನರ ಸಹಕಾರವಿದ್ದರೆ ಇನ್ನೂ ಹೆಚ್ಚಿನ ಶಾಲೆಗಳನ್ನು ದರಸ್ತಿಗೊಳಿಸಲಿದ್ದೇವೆ. ನಮ್ಮ ಉದ್ದೇಶ ಸರ್ಕಾರಿ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಗಳು ಅಭಿವೃದ್ಧಿಯಾದರೆ ಕನ್ನಡ ಭಾಷೆ ಉಳಿಯಲಿದೆ ಎನ್ನುತ್ತಾರೆ ಅಕ್ಕ ಅನು.

ಅನು ಅವರು ಈ ಸೇವೆಯನ್ನು ತಮ್ಮ ಕಾಲೇಜು ದಿನಗಳಲ್ಲೇ ಆರಂಭಿಸಿ ದರೂ ಆಗ ಅವರಿಗೆ ಸರಿಯಾದ ಪ್ರೋತ್ಸಾಹ ಸಿಗಲಿಲ್ಲ. ಈಗ ಇವರ ಕೆಲಸ ಮೆಚ್ಚಿ ಲಕ್ಷಾಂತರ ಮಂದಿ ಬೆಂಬಲಿಸುತ್ತಿದ್ದಾರೆ. ಕೇವಲ ಶಾಲೆಗಳು ಮಾತ್ರವ ಲ್ಲದೆ ಪುರಾತಾನ ದೇಗುಲಗಳು, ಸ್ಮಶಾನ, ಬಾವಿ, ಕಲ್ಯಾಣಿಗಳನ್ನೂ ಸ್ವಚ್ಛಗೊಳಿಸಿ ಸ್ವಚ್ಛ ಭಾರತ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕೊವೀಡ್ ವೇಳೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹಿರೇಮಾದಿನಾಳ ಗ್ರಾಮದ ಅಜ್ಜಿಯೊಬ್ಬರಿಗೆ ಮನೆಯನ್ನು ನಿರ್ಮಿಸಿಕೊಡುವ ಮೂಲಕ ಅನು ಮಾದರಿಯಾಗಿದ್ದಾರೆ.

ಖಾಸಗಿ ಶಾಲೆಗಳ ಎದುರು ಸರ್ಕಾರಿ ಶಾಲೆಗಳು ಮಂಕಾಗುತ್ತಿವೆ. ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಹಂತ ತಲುಪಿವೆ. ಸರ್ಕಾರಿ ಶಾಲೆಗಳು ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದ್ದು, ಅವು ಮುಚ್ಚಿದರೆ ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಆದ್ದರಿಂದ ನಮ್ಮ ಶಾಲೆಗಳೂ ಉತ್ತಮವಾಗಿದ್ದರೆ ಹೆಚ್ಚು ಮಕ್ಕಳು ದಾಖಲಾಗಿ ಶಾಲೆ ಉಳಿಯಲಿದೆ ಎಂಬುದು ನಮ್ಮ ಉದ್ದೇಶ.
-ಅಕ್ಕ ಅನು, ಸಮಾಜ ಸೇವಕಿ

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

6 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

6 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

8 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

8 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

8 hours ago