ಅಂಕಣಗಳು

ಸರ್ಕಾರಿ ಶಾಲೆಗಳಿಗೆ ಹೊಸ ರೂಪ ನೀಡುತ್ತಿರುವ ಅಕ್ತ ಟೀಮ್‌

ಅನಿಲ್ ಅಂತರಸಂತೆ

ರಾಜ್ಯದಲ್ಲಿ ಕೆಲ ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ. ಇಲ್ಲಿ ಮೂಲಸೌಕರ್ಯಗಳಿಲ್ಲ, ಉತ್ತಮ ವಾತಾವರಣವಿಲ್ಲ, ಮೈದಾನವಿಲ್ಲ, ಕಟ್ಟಡಗಳ ಸ್ಥಿತಿ ಉತ್ತಮವಾಗಿಲ್ಲ ಎಂಬೆಲ್ಲ ಕಾರಣಗಳಿಂದಾಗಿ ಇಂದು ಸಾಕಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಿದ್ದಾರೆ.

ಶಾಲೆಗಳ ಈ ಸಮಸ್ಯೆಗಳಿಂದ ಮಕ್ಕಳ ದಾಖಲಾತಿ ಪ್ರಮಾಣವು ಇಳಿಮುಖವಾಗಿದೆ. ಇದರಿಂದಾಗಿ ಕೆಲ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುವಿಪಿವೆ, ಸಾಕಷ್ಟು ಮುಚ್ಚಿವೆ ಕೂಡ. ಸರ್ಕಾರಿ ಶಾಲೆಗಳ ಈ ಪರಿಸ್ಥಿತಿ ಕಂಡ ಯುವತಿ ಅಕ್ಕ ಅನು ತನ್ನ ಗೆಳೆಯರ ಬಳಗವನ್ನು ಕಟ್ಟಿಕೊಂಡು ಸರ್ಕಾರಿ ಶಾಲೆಗಳಿಗೆ ಸುಣ್ಣಬಣ್ಣ ಬಳಿಯುವ ಜತೆಗೆ ಆವರಣವನ್ನು ಸ್ವಚ್ಛಗೊಳಿಸುತ್ತಾ ‘ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ’ ಅಭಿಯಾನವನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಮೈಸೂರು, ಮಂಡ್ಯ ಭಾಗಗಳ ಸರ್ಕಾರಿ ಶಾಲೆಗಳಲ್ಲಿ ತಮ್ಮ ಶ್ರಮದಾನ ಮಾಡಿರುವ ಅಕ್ಕ ಅನು ಮತ್ತು ತಂಡ ಎಚ್. ಡಿ. ಕೋಟೆಯ ಅಂತರಸಂತೆ ಶಾಲೆ, ಗಂಗಡಹೊಸಹಳ್ಳಿ ಶಾಲೆ, ಹ್ಯಾಂಡ್‌ಪೋಸ್ಟ್ ಶಾಲೆ, ಹುಣಸೂರಿನ ಹುಂಡೀಮಾಳ, ನಾಗರಹೊಳೆ ಅರಣ್ಯ ವ್ಯಾಪ್ತಿಯ ನಾಗರಹೊಳೆ ಗಿರಿಜನ ಆಶ್ರಮ ಶಾಲೆ, ವಡಕನ ಮಾಳ ಶಾಲೆ, ಹೊಸೂರು ಹಾಡಿ ಶಾಲೆ, ಮಂಡ್ಯದ ದೊಡ್ಡಬೇಡರಹಳ್ಳಿ ಶಾಲೆ, ಹೊಸಕೆರೆ ಶಾಲೆ, ಅರೆಚಾಕನಹಳ್ಳಿ ಶಾಲೆಗಳನ್ನು ಸ್ವಚ್ಚಗೊಳಿಸಿ, ಬಣ್ಣ ಹೆಚ್ಚಿ ಸುಂದರಗೊಳಿಸಿದ್ದಾರೆ. ಗಿಡಗಂಟಿಗಳಿಂದ ಆವೃತ್ತಗೊಂಡು ಸುಣ್ಣ ಬಣ್ಣವಿಲ್ಲದೆ ದುಸ್ಥಿತಿಯಲ್ಲಿರುವ ಸರ್ಕಾರಿ ಕನ್ನಡ ಶಾಲೆಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವುದೇ ಈ ತಂಡದ ಕಾಯಕ. ಇಂತಹ ಸಮಾಜ ಸೇವೆಯಿಂದಲೇ ಇಂದು ಕರ್ನಾಟಕದ ಮನೆ ಮಾತಾಗಿರುವ ಅಕ್ಕ ಅನು ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಚಿಕ್ಕಬೆರಗಿ ಗ್ರಾಮದ ಹೇಮಣ್ಣ ಮತ್ತು ಈರಮ್ಮ ದಂಪತಿಗಳ ಮೂರನೇ ಮಗಳು. ಅಕ್ಕ ಅನು ಎಂದೇ ಪ್ರಸಿದ್ಧಿ ಪಡೆದಿರುವ ಇವರು ತಮ್ಮ 12-15 ಮಂದಿಯ ತಂಡದ ಸಹಾಯದೊಂದಿಗೆ ರಾಜ್ಯದ 121ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಶ್ರಮದಾನ ಮಾಡುವ ಮೂಲಕ ಹೊಸ ರೂಪ ನೀಡುತ್ತಿದ್ದಾರೆ.

ಸ್ವಚ್ಛ ಭಾರತ ಅಭಿಯಾನ ಮತ್ತು ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ ಅಭಿಯಾನದ ಮೂಲಕ ಅಕ್ಕ ಅನು ಮತ್ತು ತಂಡ 2019ರಿಂದ ಈ ಸೇವೆಯನ್ನು ಆರಂಭಿಸಿದ್ದು, ಈಗಾಗಲೇ ರಾಜ್ಯದ ಸುಮಾರು 23 ಜಿಲ್ಲೆಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳನ್ನು ಸ್ವಚ್ಛ ಮಾಡುವ ಜೊತೆಗೆ ಸ್ಥಳೀಯ ದಾನಿಗಳ ಸಹಕಾರದಿಂದ ಶಾಲೆಗಳಿಗೆ ಸುಣ್ಣ ಬಣ್ಣ ಬಳಿಯುವ ಕಾಯಕ ಮಾಡುತ್ತಿದ್ದಾರೆ. ಕನ್ನಡ ಶಾಲೆಗಳ ಪರಿಸ್ಥಿತಿ ಕಂಡ ಅನು ಆರಂಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿಯೇ ಬಣ್ಣ ಬಳಿಯುವ ಕೆಲಸ ಆರಂಭಿಸಿದರು. ಆರಂಭದಲ್ಲಿರ ಸರ್ಕಾರಿ ಶಾಲಾಗಳಲ್ಲ ಇವರು ಕೈಗೊಂಡ ಸೇವೆ ಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ ಕೆಲ ಉತ್ಸಾಹಿ ಯುವಕರೂ ಅವರ ತಂಡ ಸೇರಲು ಬಯಸಿ ಸುಮಾರು 12-15 ಜನರ ತಂಡವಾಗಿ ಪರಿವರ್ತನೆಗೊಂಡು ರಾಜ್ಯವನ್ನು ಸುತ್ತಿ ಅಲ್ಲಿನ ಸರ್ಕಾರಿ ಶಾಲೆಗಳಲ್ಲಿ ಶ್ರಮದಾನ ಮಾಡುತ್ತಿದೆ. ಈವರೆಗೂ ಸುಮಾರು 121ಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿರುವ ಇವರು ಜನರ ಸಹಕಾರವಿದ್ದರೆ ಇನ್ನೂ ಹೆಚ್ಚಿನ ಶಾಲೆಗಳನ್ನು ದರಸ್ತಿಗೊಳಿಸಲಿದ್ದೇವೆ. ನಮ್ಮ ಉದ್ದೇಶ ಸರ್ಕಾರಿ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಗಳು ಅಭಿವೃದ್ಧಿಯಾದರೆ ಕನ್ನಡ ಭಾಷೆ ಉಳಿಯಲಿದೆ ಎನ್ನುತ್ತಾರೆ ಅಕ್ಕ ಅನು.

ಅನು ಅವರು ಈ ಸೇವೆಯನ್ನು ತಮ್ಮ ಕಾಲೇಜು ದಿನಗಳಲ್ಲೇ ಆರಂಭಿಸಿ ದರೂ ಆಗ ಅವರಿಗೆ ಸರಿಯಾದ ಪ್ರೋತ್ಸಾಹ ಸಿಗಲಿಲ್ಲ. ಈಗ ಇವರ ಕೆಲಸ ಮೆಚ್ಚಿ ಲಕ್ಷಾಂತರ ಮಂದಿ ಬೆಂಬಲಿಸುತ್ತಿದ್ದಾರೆ. ಕೇವಲ ಶಾಲೆಗಳು ಮಾತ್ರವ ಲ್ಲದೆ ಪುರಾತಾನ ದೇಗುಲಗಳು, ಸ್ಮಶಾನ, ಬಾವಿ, ಕಲ್ಯಾಣಿಗಳನ್ನೂ ಸ್ವಚ್ಛಗೊಳಿಸಿ ಸ್ವಚ್ಛ ಭಾರತ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕೊವೀಡ್ ವೇಳೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹಿರೇಮಾದಿನಾಳ ಗ್ರಾಮದ ಅಜ್ಜಿಯೊಬ್ಬರಿಗೆ ಮನೆಯನ್ನು ನಿರ್ಮಿಸಿಕೊಡುವ ಮೂಲಕ ಅನು ಮಾದರಿಯಾಗಿದ್ದಾರೆ.

ಖಾಸಗಿ ಶಾಲೆಗಳ ಎದುರು ಸರ್ಕಾರಿ ಶಾಲೆಗಳು ಮಂಕಾಗುತ್ತಿವೆ. ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಹಂತ ತಲುಪಿವೆ. ಸರ್ಕಾರಿ ಶಾಲೆಗಳು ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದ್ದು, ಅವು ಮುಚ್ಚಿದರೆ ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಆದ್ದರಿಂದ ನಮ್ಮ ಶಾಲೆಗಳೂ ಉತ್ತಮವಾಗಿದ್ದರೆ ಹೆಚ್ಚು ಮಕ್ಕಳು ದಾಖಲಾಗಿ ಶಾಲೆ ಉಳಿಯಲಿದೆ ಎಂಬುದು ನಮ್ಮ ಉದ್ದೇಶ.
-ಅಕ್ಕ ಅನು, ಸಮಾಜ ಸೇವಕಿ

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago