ಅಹಲ್ಯ ಅಪ್ಪಚ್ಚು, ಚಿತ್ರಕಲಾವಿದೆ, ಸೋಮವಾರಪೇಟೆ
ರಾಗಿ ತಿಂದವನಿಗೆ ರೋಗವಿಲ್ಲ ಎಂಬ ಗಾದೆ ಮಾತಿದೆ. ಅದರಂತೆ ನಾವು ಪ್ರತಿದಿನ ರಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ನಾನು ನನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು ರಾಗಿ ಸೇವನೆ ಮಾಡುತ್ತೇನೆ. ಪ್ರತಿ ದಿನ ಮುಂಜಾನೆಯ ತಿಂಡಿಯ ಬದಲಿಗೆ ಅಥವಾ ರಾಗಿಯ ಜೊತೆಗಿನ ಅನುರಾಗ ಲಘು ಉಪಾಹಾರದೊಂದಿಗೆ ರಾಗಿ ಮಾಲ್ಟ್ ಕುಡಿಯುತ್ತೇನೆ. ಇದರಿಂದ ದೇಹ ತಂಪಾಗಿರುವ ಜತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ರಾಗಿ ಮಾಲ್ಟ್ ಅನ್ನು ಮನೆಯಲ್ಲಿ ನಾನೇ ತಯಾರಿಸಿಕೊಳ್ಳುತ್ತೇನೆ.
ರಾಗಿ ಜತೆಗೆ ಅಗತ್ಯಕ್ಕೆ ತಕ್ಕಂತೆ ಬಾದಾಮಿ, ಗೊಡಂಬಿ, ಜೋಳ, ಗೋಧಿ, ಅಕ್ಕಿ ಜತೆಗೆ ಒಂದಿಷ್ಟು ಮಾದರಿಯ ಕಾಳುಗಳನ್ನು ಸೇರಿಸಿ ಚೆನ್ನಾಗಿ ಪುಡಿ ಮಾಡಿಕೊಳ್ಳಬೇಕು. ನಂತರ ಅದನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಬೆಳಗಿನ ಸಮಯದಲ್ಲಿ ಸೇವಿಸಬೇಕು. ಇದರಿಂದ ನಮ್ಮ ದೇಹಕ್ಕೆ ಅಗತ್ಯವಾದ ಪ್ರೋಟೀನ್ ಸಿಗುವ ಜತೆಗೆ ಹಿತಮಿತವಾದ ಆಹಾರ ಸೇವಿಸಿದಂತಾಗುತ್ತದೆ. ಇದರೊಂದಿಗೆ ಹೊರ ಭಾಗದ ಆಹಾರಗಳ ಸೇವನೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಇಂತಹ ಆಹಾರಗಳ ಸೇವನೆ ಕಡೆ ಗಮನ ನೀಡಿದರೆ, ದೇಹದ ಆರೋಗ್ಯವು ಚೆನ್ನಾಗಿರುತ್ತದೆ. ಜತೆಗೆ ಫ್ಯಾಟ್ ಕೂಡ ಕಡಿಮೆಯಾಗಲಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…