ಅಹಲ್ಯ ಅಪ್ಪಚ್ಚು, ಚಿತ್ರಕಲಾವಿದೆ, ಸೋಮವಾರಪೇಟೆ
ರಾಗಿ ತಿಂದವನಿಗೆ ರೋಗವಿಲ್ಲ ಎಂಬ ಗಾದೆ ಮಾತಿದೆ. ಅದರಂತೆ ನಾವು ಪ್ರತಿದಿನ ರಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ನಾನು ನನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು ರಾಗಿ ಸೇವನೆ ಮಾಡುತ್ತೇನೆ. ಪ್ರತಿ ದಿನ ಮುಂಜಾನೆಯ ತಿಂಡಿಯ ಬದಲಿಗೆ ಅಥವಾ ರಾಗಿಯ ಜೊತೆಗಿನ ಅನುರಾಗ ಲಘು ಉಪಾಹಾರದೊಂದಿಗೆ ರಾಗಿ ಮಾಲ್ಟ್ ಕುಡಿಯುತ್ತೇನೆ. ಇದರಿಂದ ದೇಹ ತಂಪಾಗಿರುವ ಜತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ರಾಗಿ ಮಾಲ್ಟ್ ಅನ್ನು ಮನೆಯಲ್ಲಿ ನಾನೇ ತಯಾರಿಸಿಕೊಳ್ಳುತ್ತೇನೆ.
ರಾಗಿ ಜತೆಗೆ ಅಗತ್ಯಕ್ಕೆ ತಕ್ಕಂತೆ ಬಾದಾಮಿ, ಗೊಡಂಬಿ, ಜೋಳ, ಗೋಧಿ, ಅಕ್ಕಿ ಜತೆಗೆ ಒಂದಿಷ್ಟು ಮಾದರಿಯ ಕಾಳುಗಳನ್ನು ಸೇರಿಸಿ ಚೆನ್ನಾಗಿ ಪುಡಿ ಮಾಡಿಕೊಳ್ಳಬೇಕು. ನಂತರ ಅದನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಬೆಳಗಿನ ಸಮಯದಲ್ಲಿ ಸೇವಿಸಬೇಕು. ಇದರಿಂದ ನಮ್ಮ ದೇಹಕ್ಕೆ ಅಗತ್ಯವಾದ ಪ್ರೋಟೀನ್ ಸಿಗುವ ಜತೆಗೆ ಹಿತಮಿತವಾದ ಆಹಾರ ಸೇವಿಸಿದಂತಾಗುತ್ತದೆ. ಇದರೊಂದಿಗೆ ಹೊರ ಭಾಗದ ಆಹಾರಗಳ ಸೇವನೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಇಂತಹ ಆಹಾರಗಳ ಸೇವನೆ ಕಡೆ ಗಮನ ನೀಡಿದರೆ, ದೇಹದ ಆರೋಗ್ಯವು ಚೆನ್ನಾಗಿರುತ್ತದೆ. ಜತೆಗೆ ಫ್ಯಾಟ್ ಕೂಡ ಕಡಿಮೆಯಾಗಲಿದೆ.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…