ಅಹಲ್ಯ ಅಪ್ಪಚ್ಚು, ಚಿತ್ರಕಲಾವಿದೆ, ಸೋಮವಾರಪೇಟೆ
ರಾಗಿ ತಿಂದವನಿಗೆ ರೋಗವಿಲ್ಲ ಎಂಬ ಗಾದೆ ಮಾತಿದೆ. ಅದರಂತೆ ನಾವು ಪ್ರತಿದಿನ ರಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ನಾನು ನನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು ರಾಗಿ ಸೇವನೆ ಮಾಡುತ್ತೇನೆ. ಪ್ರತಿ ದಿನ ಮುಂಜಾನೆಯ ತಿಂಡಿಯ ಬದಲಿಗೆ ಅಥವಾ ರಾಗಿಯ ಜೊತೆಗಿನ ಅನುರಾಗ ಲಘು ಉಪಾಹಾರದೊಂದಿಗೆ ರಾಗಿ ಮಾಲ್ಟ್ ಕುಡಿಯುತ್ತೇನೆ. ಇದರಿಂದ ದೇಹ ತಂಪಾಗಿರುವ ಜತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ರಾಗಿ ಮಾಲ್ಟ್ ಅನ್ನು ಮನೆಯಲ್ಲಿ ನಾನೇ ತಯಾರಿಸಿಕೊಳ್ಳುತ್ತೇನೆ.
ರಾಗಿ ಜತೆಗೆ ಅಗತ್ಯಕ್ಕೆ ತಕ್ಕಂತೆ ಬಾದಾಮಿ, ಗೊಡಂಬಿ, ಜೋಳ, ಗೋಧಿ, ಅಕ್ಕಿ ಜತೆಗೆ ಒಂದಿಷ್ಟು ಮಾದರಿಯ ಕಾಳುಗಳನ್ನು ಸೇರಿಸಿ ಚೆನ್ನಾಗಿ ಪುಡಿ ಮಾಡಿಕೊಳ್ಳಬೇಕು. ನಂತರ ಅದನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಬೆಳಗಿನ ಸಮಯದಲ್ಲಿ ಸೇವಿಸಬೇಕು. ಇದರಿಂದ ನಮ್ಮ ದೇಹಕ್ಕೆ ಅಗತ್ಯವಾದ ಪ್ರೋಟೀನ್ ಸಿಗುವ ಜತೆಗೆ ಹಿತಮಿತವಾದ ಆಹಾರ ಸೇವಿಸಿದಂತಾಗುತ್ತದೆ. ಇದರೊಂದಿಗೆ ಹೊರ ಭಾಗದ ಆಹಾರಗಳ ಸೇವನೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಇಂತಹ ಆಹಾರಗಳ ಸೇವನೆ ಕಡೆ ಗಮನ ನೀಡಿದರೆ, ದೇಹದ ಆರೋಗ್ಯವು ಚೆನ್ನಾಗಿರುತ್ತದೆ. ಜತೆಗೆ ಫ್ಯಾಟ್ ಕೂಡ ಕಡಿಮೆಯಾಗಲಿದೆ.
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ…