ರಾಜಕೀಯ ಮೇಲಾಟದ ಕೇಂದ್ರವಾದ BASE : ಭಾಗ-2

ನಾ ದಿವಾಕರ

ಬೇಸ್ ವಿಶ್ವವಿದ್ಯಾಲಯದ ಧ್ಯೇಯ ಮತ್ತು ಗುರಿ: ಡಾ.ಬಿ.ಆರ್‌ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವು ಅರ್ಥಶಾಸ್ತ್ರ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಒಂದು ಅತ್ಯುತ್ಕೃಷ್ಟ ಕಲಿಕೆಯ ಶೈಕ್ಷಣಿಕ ಸಂಸ್ಥೆಯಾಗಿ ರೂಪುಗೊಂಡಿದೆ. ಶೀಘ್ರಗತಿಯಲ್ಲಿ ಬದಲಾಗುತ್ತಿರುವ ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಯ ಪಥದಲ್ಲಿರುವ ಭಾರತದ ವರ್ತಮಾನದ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಅರ್ಥಶಾಸ್ತ್ರೀಯ ಜ್ಞಾನ ಪ್ರಸರಣದ ಒಂದು ಉತ್ಕೃಷ್ಟ ಸಂಸ್ಥೆಯಾಗಿ ಇದನ್ನು ರೂಪಿಸಲಾಗಿದೆ. ಭವಿಷ್ಯದ ಪೀಳಿಗೆಯ ಅರ್ಥಶಾಸ್ತ್ರಜ್ಞರನ್ನು ರೂಪಿಸುವುದಷ್ಟೇ ಅಲ್ಲದೆ, ನೀತಿ ನಿರೂಪಕರನ್ನೂ ಸಿದ್ಧಪಡಿಸುವ ನಿಟ್ಟಿನಲ್ಲಿ ದೇಶವು ಎದುರಿಸುತ್ತಿರುವ ಹಲವಾರು ಮಾರುಕಟ್ಟೆ ಸವಾಲುಗಳಿಗೆ ಸ್ಪಂದಿಸಲು ಸೂಕ್ತ ವಿದ್ಯಾರ್ಜನೆಯ ಮಾರ್ಗಗಳನ್ನು ಈ ವಿಶ್ವವಿದ್ಯಾಲಯದಲ್ಲಿ ಕಲ್ಪಿಸಲಾಗುತ್ತದೆ.

ಅರ್ಥಶಾಸ್ತ್ರ ಮತ್ತು ತತ್ಸಂಬಂಧಿ ಜ್ಞಾನಶಿಸ್ತುಗಳಲ್ಲಿ ಒಂದು ವಿಶಿಷ್ಟ ಕಲಿಕಾ ಮಾದರಿಯನ್ನು ಅಳವಡಿಸಲಾಗುತ್ತಿದ್ದು, ಸಂಶೋಧನೆಗೆ ಪೂರಕವಾದಂತಹ ಕಲಿಕಾ ಮಾರ್ಗಗಳನ್ನು ರೂಪಿಸಲಾಗುತ್ತದೆ. ಈ ವಿಶ್ವವಿದ್ಯಾಲಯದ ಪಠ್ಯಕ್ರಮವನ್ನೂ ಅತ್ಯುತ್ಕೃಷ್ಟ ಮಟ್ಟದಲ್ಲಿ ಸಿದ್ಧಪಡಿಸಲಾಗಿದ್ದು, ವಿದ್ಯಾರ್ಥಿಗಳನ್ನು ಆಧುನಿಕ ಕಾಲಘಟ್ಟದ ಕಾರ್ಪೋರೇಟ್, ಶೈಕ್ಷಣಿಕ, ವಿಶ್ಲೇಷಣಾತ್ಮಕ ಹಾಗೂ ಸಾರ್ವಜನಿಕ ಆಡಳಿತ ನೀತಿಗಳ ಚೌಕಟ್ಟಿನಲ್ಲಿ ತಯಾರು ಮಾಡಲಾಗುತ್ತದೆ. ಅತ್ಯಾಧುನಿಕ ತಾತ್ವಿಕ ಮತ್ತು ಪ್ರಾಯೋಗಿಕ ವಿಮರ್ಶೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ಈ ವಿಶ್ವವಿದ್ಯಾಲಯದಿಂದ ಹೊರಬೀಳುವ ವಿದ್ಯಾರ್ಥಿಗಳು ತಮ್ಮ ಮುಂದಿನ ಅವಕಾಶಗಳನ್ನು ಸಮರ್ಪಕವಾಗಿ, ಸಮರ್ಥನೀಯವಾಗಿ ಬಳಸಿಕೊಳ್ಳುವಂತೆ ತರಬೇತಿ ನೀಡಲಾಗುತ್ತದೆ.

ಐದು ವರ್ಷಗಳ ಇಂಟಿಗ್ರೇಟೆಡ್ ಎಂಎಸ್ಸಿ ಎಕನಾಮಿಕ್ಸ್ ಈ ವಿಶ್ವವಿದ್ಯಾಲಯದ ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿ ರೂಪುಗೊಂಡಿದೆ.

ಅರ್ಥಶಾಸ್ತ್ರವನ್ನು ಇತರ ಸಂಬಂಧಿತ ವಿಚಾರಗಳೊಡನೆ ಆಳವಾಗಿ ಅಭ್ಯಸಿಸಿ ಅಧ್ಯಯನ ನಡೆಸುವಂತಹ ಪಠ್ಯಕ್ರಮಗಳನ್ನು ಈ ಕೋರ್ಸ್‌ನಲ್ಲಿ ಅಳವಡಿಸಲಾಗಿದೆ. ಈ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಮೂರು ವರ್ಷದ ಅಧ್ಯಯನದ ನಂತರ ಅರ್ಥಶಾಸ್ತ್ರದ ಬಿಎಸ್ಸಿ (ಆನರ್ಸ್ )ಪದವಿಯೊಂದಿಗೆ ನಿರ್ಗಮಿಸುವ ಆಯ್ಕೆಯನ್ನೂ ಕಲ್ಪಿಸಲಾಗಿದೆ. ಎಂಎಸ್ಸಿ ಎಕನಾಮಿಕ್ಸ್ ೨ ವರ್ಷದ ಪದವಿ ಕೋರ್ಸ್ ಮೂಲಕವೂ ವಿದ್ಯಾರ್ಥಿಗಳು ಅರ್ಥಶಾಸ್ತ್ರದ ವಿಭಿನ್ನ ವಿಷಯಗಳನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನೂ ಸುಲಭವಾಗಿ ಕಲ್ಪಿಸಲು ನೆರವಾಗುತ್ತದೆ. ಕಾರ್ಪೋರೇಟ್ ವಲಯಕ್ಕೆ ಅವಶ್ಯವಾದ ಮತ್ತು ಸಾರ್ವಜನಿಕ ನೀತಿಗಳು ಮತ್ತು ಸಂಶೋಧನೆಗೆ ಪೂರಕವಾದ ಪಠ್ಯವಿಷಯಗಳನ್ನು ಅಧ್ಯಯನ ಮಾಡಲು ಈ ಕೋರ್ಸ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಇವೆರಡರ ಹೊರತಾಗಿ ಆಸಕ್ತ ವಿದ್ಯಾರ್ಥಿಗಳಿಗಾಗಿ ಪೂರ್ಣ ಪ್ರಮಾಣದ ಪಿಹೆಚ್‌ಡಿ ಪಡೆಯುವ ಸೌಲಭ್ಯವನ್ನೂ ಒದಗಿಸಲಾಗಿದೆ. ಬೌದ್ಧಿಕವಾಗಿ ಆಸಕ್ತಿ ಇರುವವರು ಮತ್ತು ಉತ್ತಮ ಶೈಕ್ಷಣಿಕ ಹಿನ್ನೆಲೆ ಇರುವ ವಿದ್ಯಾರ್ಥಿಗಳು ಪಿಹೆಚ್‌ಡಿ ಮಾಡಲು ಅವಕಾಶ ನೀಡಲಾಗಿದೆ. ವಿಶೇಷವಾಗಿ ಅರ್ಥಶಾಸ್ತ್ರ ಮತ್ತು ಅಭಿವೃದ್ಧಿ ಅಧ್ಯಯನಗಳಲ್ಲಿ ಹೆಚ್ಚಿನ ಜ್ಞಾನ ಪಡೆಯುವ ಸಲುವಾಗಿ ಪಿಹೆಚ್ಡಿ ಯೋಜನೆಯನ್ನು ಅಳವಡಿಸಲಾಗಿದೆ. ಈ ಸಂದರ್ಭದಲ್ಲೇ ವಿದ್ಯಾರ್ಥಿಗಳಿಗೆ ಅಂತರ್ ಶಿಸ್ತೀಯ ಅಧ್ಯಯನದ ಅವಕಾಶಗಳನ್ನೂ ಸಹ ಕಲ್ಪಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಎಲ್ಲ ಕೋರ್ಸ್‌ಗಳಲ್ಲೂ ಎರಡು ಬ್ಯಾಚ್‌ನಲ್ಲಿ ನೂರಾರು ವಿದ್ಯಾರ್ಥಿಗಳು ತಮ್ಮ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ ಪಡೆದು ನಿರ್ಗಮಿಸಿದ್ದಾರೆ.

ಮರು ಉದ್ಘಾಟನೆಯ ಉದ್ದೇಶವೇನು ?

ಐದು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ಎರಡು ಬ್ಯಾಚ್ ವಿದ್ಯಾರ್ಥಿಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿರುವ ಒಂದು ಶೈಕ್ಷಣಿಕ ಸಂಸ್ಥೆಯಾಗಿ ಡಾ ಬಿ ಆರ್ ಅಂಬೇರ್ಡ್ಕ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ತನ್ನ ಹಿರಿಮೆ ಸಾಧಿಸಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ವಿಸ್ತರಣಾ ಕಾರ್ಯಗಳೂ ನಡೆದಿಲ್ಲ ಅಥವಾ ಕಾಮಗಾರಿಗಳೂ ನಡೆಯುತ್ತಿಲ್ಲ. ಯಾವುದೇ ಹೊಸ ಜ್ಞಾನಶಿಸ್ತಿನ ವಿಭಾಗವನ್ನು ಇಲ್ಲಿ ರೂಪಿಸಲಾಗಿಲ್ಲ. ೨೦೧೭ರಲ್ಲಿ ಆರಂಭವಾದಂತೆಯೇ ಮೂರು ಕೋರ್ಸ್‌ಗಳ ಅವಕಾಶವನ್ನು ಇಂದಿಗೂ ಮುಂದುವರೆಸಲಾಗಿದೆ. ಹೀಗಿರುವಾಗಲೂ ಪ್ರಧಾನಮಂತ್ರಿಗಳಿಂದ ಮರು ಉದ್ಘಾಟನೆ ಮಾಡಿಸುವ ಅವಶ್ಯಕತೆ ಏನಿತ್ತು ಎನ್ನುವುದು ಜಿಜ್ಞಾಸೆಯಾಗಿಯೇ ಉಳಿಯಲಿದೆ.

ಶಿಕ್ಷಣ ಮತ್ತು ಜ್ಞಾನ ಪರಂಪರೆಯನ್ನು ಸಂಪೂರ್ಣ ಖಾಸಗೀಕರಣಕ್ಕೊಳಪಡಿಸಿ, ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳಿಗೆ ಶಿಕ್ಷಣ ಕ್ಷೇತ್ರವನ್ನು ಆಕ್ರಮಿಸಲು ಸಕಲ ಅವಕಾಶವನ್ನೂ ನೀಡಲಾಗುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ, ಸರ್ಕಾರದಿಂದಲೇ ಸ್ಥಾಪಿಸಲಾದ ವಿಶ್ವವಿದ್ಯಾಲಯವನ್ನು ಮರು ಉದ್ಘಾಟನೆ ಮಾಡುವುದು ವಿಡಂಬನೆಯಾಗಿ ಕಾಣುತ್ತದೆ. ಶಿಷ್ಟಾಚಾರದ ದೃಷ್ಟಿಯಿಂದ ನೋಡಿದಾಗಲೂ ರಾಜ್ಯ ಸರ್ಕಾರದ ಈ ನಡೆ ಪ್ರಶ್ನಾರ್ಹವೇ ಆಗುತ್ತದೆ. ಒಂದು ಹೊಸ ಶೈಕ್ಷಣಿಕ ಸಂಸ್ಥೆಯನ್ನಾದರೂ ಸ್ಥಾಪಿಸಿ, ಅದರ ಶಂಕುಸ್ಥಾಪನೆಯನ್ನು ಪ್ರಧಾನಿಗಳಿಂದ ಮಾಡಿಸಿದ್ದರೆ ಸಾರ್ಥಕ ಎನಿಸುತ್ತಿತ್ತು.

ಈ ಜಿಜ್ಞಾಸೆಗಳ ನಡುವೆಯೇ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಾಗಲಿ ಎಂದು ಆಶಿಸಬಹುದಷ್ಟೇ. ಬಹುಶಃ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವೂ ಇದೇ ಆಗಿರಬಹುದು!

andolana

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

26 mins ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

3 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

4 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

6 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

9 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

9 hours ago