ಅಂಕಣಗಳು

ಉಸಿರಿನ ಸಮಸ್ಯೆ ಮೆಟ್ಟಿನಿಂತ ಯೋಗಪಟು ಖುಷಿ

• ಪ್ರಶಾಂತ್ ಎಸ್.

ಸಾಧನೆ ಮಾಡುವ ಹಂಬಲವಿದ್ದರೆ ದೇಹದಲ್ಲಿನ ನ್ಯೂನತೆಗಳು, ಸಾಮಾಜಿಕವಾಗಿ ಎದುರಾಗುವ ಸಮಸ್ಯೆ ಸವಾಲುಗಳು ಲೆಕ್ಕವಿರುವುದಿಲ್ಲ. ಗಮನ ಗುರಿಯೆಡೆಗಿದ್ದರೆ ಸಾಧನೆಯ ಹಾದಿ ಹತ್ತಿರವಾಗುತ್ತದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನು ಲೆಕ್ಕಿಸದೆ ಯುವತಿಯೊಬ್ಬಳು ಯೋಗಾ ಭ್ಯಾಸ ಮಾಡಿ ಯೋಗಪಟುವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಮಾದರಿಯಾಗಿದೆ.

ಮೈಸೂರಿನ ಎಚ್.ಖುಷಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗಾಪಟು ವಾಗಿ ಗುರುತಿಸಿಕೊಂಡಿದ್ದು, ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಜತೆಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನೂ ಪಡೆಯುವ ಮೂಲಕ ಮೈಸೂರಿಗೆ ಕೀರ್ತಿ ತಂದಿದ್ದಾರೆ.

ಮೂಲತಃ ಮೈಸೂರಿನ ಹೆಬ್ಬಾಳ ಎರಡನೇ ಹಂತದ ನಿವಾಸಿ ಹೇಮಚಂದ್ರ ಮತ್ತು ಕುಮುದಾ ದಂಪತಿಯ ಮಗಳಾದ ಎಚ್.ಖುಷಿ ಈಗ ಅಂತಾರಾಷ್ಟ್ರೀಯ ಯೋಗಪಟು. ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ, ಯೋಗ ವೈದ್ಯಕೀಯ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ನ್ಯಾಚುರೋಪತಿ, ಯೋಗಿಕ್ ಸೈನ್ಸ್‌ನಲ್ಲಿ ವೈದ್ಯಕೀಯ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ಇವರು ಹತ್ತು ವರ್ಷಗಳಿಂದ ‘ಮೈಸೂರು ವಿವೇಕಾನಂದ ಯೋಗ ಮತ್ತು ಸಂಶೋಧನಾ ಸಂಸ್ಥೆ’ಯ ಡಾ.ಪಿ.ಎನ್.ಗಣೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾರೆ.

ಖುಷಿಗೆ ಆಗಾಗ್ಗೆ ಕಾಡುತ್ತಿದ್ದ ಉಸಿರಾಟದ ಸಮಸ್ಯೆಯಿಂದಾಗಿ ಅವರು ಹತಾಶರಾಗಿದ್ದರು. ತಮಲ್ಲಿನ ಈ ಸಮಸ್ಯೆ ಎಂದಿಗೂ ತಮ್ಮ ಜೀವನಕ್ಕೆ ಮುಳುವಾಗಬಾರದು ಎಂದು ಯೋಗಾಭ್ಯಾಸ ಆರಂಭಿಸಿದರು. ನಿತ್ಯ 3 ಗಂಟೆಗಳ ಕಾಲ ಯೋಗಾಭ್ಯಾಸ ಮಾಡುತ್ತಿದ್ದು, ಇಂದು ಹೆಚ್ಚಿನ ಸಂಖ್ಯೆಯ ‘ಬ್ಯಾಕ್ ಪ್ಲಾಂಕ್ ರಿಕ್ಷೆನ್ ಕ್ರಂಚರ್’ಗಾಗಿ ಯೋಗಾಭ್ಯಾಸದಲ್ಲಿ ವಿಶ್ವದಾಖಲೆ ಬರೆದಿದ್ದಾರೆ.

2014ರಲ್ಲಿ ಅವರು ಚೀನಾದಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದಿದರು. ನಂತರ 2016ರಲ್ಲಿ ವಿಯೆಟ್ನಾಂನಲ್ಲಿ ನಡೆದ ಆರನೇ ಏಷ್ಯನ್ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್‌ನ ವಿವಿಧ ಸ್ಪರ್ಧೆಗಳಲ್ಲಿ 2 ಚಿನ್ನ ಮತ್ತು 2 ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. 2017ರಲ್ಲಿ ಸಿಂಗಾಪುರದಲ್ಲಿ ನಡೆದ 7ನೇ ಏಷ್ಯನ್ ಯೋಗ ಚಾಂಪಿಯನ್ ಶಿಪ್‌ನಲ್ಲಿಯೂ ಭಾರತವನ್ನು ಪ್ರತಿನಿಧಿಸಿ 4 ಚಿನ್ನ ಮತ್ತು 1 ಬೆಳ್ಳಿ ಪದಕಗಳನ್ನೂ, 2018ರಲ್ಲಿ ಅರ್ಜೆಂಟೀನಾದಲ್ಲಿ ನಡೆದ ವಿಶ್ವಯೋಗ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು, 2018ರಲ್ಲಿ ಕೇರಳದಲ್ಲಿ ನಡೆದ 8ನೇ ಏಷ್ಯನ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ 1 ಚಿನ್ನ ಮತ್ತು 1 ಬೆಳ್ಳಿ ಪದಕವನ್ನು, 2019ರಲ್ಲಿ ನಡೆದ 9ನೇ ಏಷ್ಯನ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ, ಕೊರಿಯಾದಲ್ಲಿ 3 ಚಿನ್ನದ ಪದಕಗಳನ್ನು, 2019ರಲ್ಲಿ ಕೋಲ್ಕತ್ತಾ ನಡೆದ ಸ್ಕೂಲ್ ಗೇಮ್ಸ್ ಫೆಡರೇಷನ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಕಂಚಿನ ಪದಕ, 2018ರಲ್ಲಿ ಪ್ರದರ್ಶಕರಾಗಿ ಅವರು ದುಬೈನಲ್ಲಿರುವ ಅಂಬಾಸಿಡರ್ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಿಗೆ ವಿವೇಕಾನಂದ ಯೋಗ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ ಕಾರ್ಯಾಗಾರದಲ್ಲಿ ಭಾಗವಹಿಸಿದರು.
prashanthsmysore@gmail.com

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago