ಅಂಕಣಗಳು

ಕೋವಿಡೋತ್ತರದಲ್ಲಿ ಮಕ್ಕಳ ಆತಂಕಗಳು: ಮಕ್ಕಳ ಸಮಸ್ಯೆ ನಿವಾರಣೆಗೆ ಆದ್ಯತೆ ಅಗತ್ಯ

– ಡಾ.ಎನ್.ವಿ.ವಾಸುದೇವ ಶರ್ವಾ

ಜಗತ್ತಿನ ಈ ದಶಕದಾರಂಭ ಆತಂಕಗಳೊಂದಿಗಾಯಿತು. ಕೋವಿಡ್‌ನಿಂದಾದ ಸಾವು ನೋವುಗಳು, ಹವಾವಾನ ವೈಪರೀತ್ಯಗಳು, ಆರ್ಥಿಕ ಕುಸಿತ, ಹಣದುಬ್ಬರ. ಜೊತೆಗೆ ರಷ್ಯಾ ಆರಂಭಿಸಿದ ಯುದ್ಧ, ಇಸ್ರೇಲ್-ಪ್ಯಾಲೆಸ್ಟೀನ್‌ ಸಂಘರ್ಷ, ಅಮೆರಿಕದಲ್ಲಿನ ಆರ್ಥಿಕ ಹಿಂಜರಿಕೆ ಈ ಎಲ್ಲವೂ ಎಲ್ಲರ ಮೇಲೂ, ಅದರಲ್ಲೂ ಮಕ್ಕಳ ಮೇಲೆ ಪ್ರಭಾವ ಬೀರಲಾರಂಭಿಸಿದೆ.

ಭಾರತದಲ್ಲಿಯೂ ಬದಲಾಗುತ್ತಿರುವ ಕಾಲವಾನ, ಪರಿಸ್ಥಿತಿಗಳ ಹಿನ್ನೆಲೆುಂಲ್ಲಿ, ಮಕ್ಕಳ ಹಕ್ಕುಗಳ ದೃಷ್ಟಿಕೋನದಿಂದ ಕೆಲವು ವಿಚಾರಗಳ ಕುರಿತು ವಿಶೇಷವಾಗಿ ಗಮನಹರಿಸಬೇಕಿದೆ. ಕೊರೊನಾ-19 ಸಾಂಕ್ರಾಮಿಕದ ಪಿಡುಗು ಕಡಿಮೆಯಾಗಿದ್ದರೂ ಅದರ ಪರಿಣಾಮಗಳು ಇನ್ನೂ ಇವೆ ಮತ್ತು ಅವುಗಳಿಂದ ಸುಧಾರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಿದೆ.

ವಿವಿಧ ಹಂತದ ಸರ್ಕಾರಗಳಲ್ಲಿ ಯೋಜನೆ, ಶಾಸನ ನಿರ್ಮಿಸುವವರು ಮತ್ತು ಆಡಳಿತದಲ್ಲಿರುವವರಿಗೆ ಇದು ದೊಡ್ಡ ಜವಾಬ್ದಾರಿ. ಎಂತಹ ಸಂದರ್ಭಗಳಲ್ಲಿಯೂ ಎದೆಗುಂದದೆ ನಮ್ಮ ಮಕ್ಕಳ ಪೌಷ್ಟಿಕತೆ, ಆರೋಗ್ಯ, ಶಿಕ್ಷಣ, ಕೌಶಲ ಹೆಚ್ಚಿಸುವ ದಿಶೆಯಲ್ಲಿ, ಹಾಗೆಯೇ ಯಾವ ಮಗುವೂ ಶೋಷಣೆಗೆ ಜಾರದಂತೆ, ಬೀಳದಂತೆ, ಸಾವಿಗೀಡಾಗದಂತೆ, ಅಂಗವಿಕಲವಾಗದಂತೆ, ವಾನಸಿಕ ಖಿನ್ನತೆಗೆ, ಸಮಸ್ಯೆಗಳಿಗೆ ಈಡಾಗದಂತೆ ಕಾಪಾಡುವುದು, ಪರಿಸರವನ್ನು ರಕ್ಷಿಸುವುದು, ಹವಾವಾನದಲ್ಲಾಗುವ ಏರುಪೇರುಗಳನ್ನು ಎದುರಿಸಲು ಕಲಿಯುವುದನ್ನು ಮಾಡಲೇಬೇಕಿದೆ. ಅದನ್ನೇ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು 2016-30 ಸ್ಪಷ್ಟವಾಗಿ ಹೇಳುತ್ತಿರುವುದು.

ಭಾರತದಲ್ಲಿ ಈಗಿರುವಂತೆ ಜನಸಂಖ್ಯೆ ಯಾವುದೇ ನಿುಂಂತ್ರಣವಿಲ್ಲದೆ ಹೀಗೇ ಬೆಳೆಯುತ್ತಲೇ ಹೋಗುತ್ತದೆ ಎಂದೇನೂ ನಾವು ಭಾವಿಸಬೇಕಿಲ್ಲ. ಈಗಾಗಲೇ ಭಾರತದ ಜನನ ಪ್ರಮಾಣ/ಫಲವತ್ತತೆ ಪ್ರಮಾಣ 2019-22ರಲ್ಲಿ 2.0ಕ್ಕೆ ಇಳಿದಿದೆ (ಈ ಪ್ರವಾಣ 2.1 ಇದ್ದರೆ ಆರೋಗ್ಯಕರ ಎನ್ನುವ ಲೆಕ್ಕಾಚಾರವಿದೆ).

ಜಾಗತಿಕವಾಗಿ 2022ರಲ್ಲಿ ಜಗತ್ತಿನ ಒಟ್ಟೂ ಜನಸಂಖ್ಯೆ 804.5 ಕೋಟಿ ಆಗಿದೆ (ವಿಶ್ವಸಂಸ್ಥೆ). ಈ ಜನಸಂಖ್ಯೆ 2050ರ ತನಕ ಹೆಚ್ಚಿ ನಂತರ ಕುಸಿತವನ್ನು ಕಾಣಬಹುದು. ಜಗತ್ತಿನಲ್ಲಿರುವ ಆಹಾರ ಉತ್ಪಾದನೆ ಸಾಮರ್ಥ್ಯ, ಕುಡಿಯುವ ನೀರಿನ ಲಭ್ಯತೆ ಹಾಗೂ ಇನ್ನಿತರ ಸಂಪನ್ಮೂಲಗಳಿಗೆ ಹೋಲಿಸಿದರೆ ಈ ಅಗಾಧ ಜನಸಂಖ್ಯೆ ಆತಂಕವನ್ನು ಉಂಟು ಮಾಡಿದೆ. ಆಹಾರಕ್ಕಾಗಿ ಮತ್ತು ಇತರ ಸಂಪನ್ಮೂಲಗಳಿಗಾಗಿ ಜಾಗತಿಕವಾಗಿ (ಆಂತರಿಕವಾಗಿ ದೇಶಗಳಲ್ಲಿ ಮತ್ತು ದೇಶದೇಶಗಳ ನಡುವೆ) ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಸ್ವಾತಂತ್ರ್ಯದ ಹರಣ, ಯುದ್ಧಗಳು, ಆಕ್ರಮಣಗಳು, ಅತ್ಯವಶ್ಯಕ ವಸ್ತುಗಳು, ಆಹಾರ, ಔಷಧಿಗಳ ಮುಕ್ತ ಓಡಾಟ/ವ್ಯಾಪಾರ, ವಿನಿಮಯಕ್ಕೆ ಅಡ್ಡಿ ಆಗುವ ಭಯ ಮತ್ತು ಅವು ಮಕ್ಕಳ ಮೇಲೆ ಅಗಾಧ ಪ್ರಭಾವ ಬೀರುವ ಸಾಧ್ಯತೆಗಳು ದಟ್ಟವಾಗಿ ಇವೆ.

ಮಕ್ಕಳ ಹಕ್ಕುಗಳು ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು ಎಂಬ ಉದಾತ್ತವಾದ ಕಲ್ಪನೆಗಳನ್ನು ಇಂದಿನ ಸಾವಾಜಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಗಮನಿಸಬೇಕಾಗಿದೆ. ಇವನ್ನು ಈಗ ನಿರ್ಲಕ್ಷಿಸಿದರೆ ದೀರ್ಘಕಾಲಿಕ ಋಣಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಈಗಿಂದೀಗಲೇ ಎಲ್ಲ ಹಂತಗಳಲ್ಲಿರುವ ಆಡಳಿತಗಾರರು ಮತ್ತು ಸಾಮಾನ್ಯ ಜನರು ಮಕ್ಕಳ ದೃಷ್ಟಿಕೋನದಲ್ಲಿ ಇವುಗಳನ್ನು ತುರ್ತಾಗಿ ಗಮನಿಸಬೇಕಿದೆ.

andolanait

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

14 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

33 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

56 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago