• ಪ್ರಶಾಂತ್ ಎಸ್.
ನಾಗರಹೊಳೆ ರಾಷ್ಟ್ರೀಯ ಉದ್ಯಾ ನವನದ ಡಿ.ಬಿ.ಕುಪ್ಪೆ ಹಾಡಿಯ ಎಸ್. ಆ.ದಿವ್ಯಾ ಪಿಎಚ್.ಡಿ. ಪಡೆದ ಪಣಿ ಎರವ ಬುಡಕಟ್ಟು ಸಮುದಾಯದ ಹೆಣ್ಣುಮಗಳು.
ಡಿ.ಬಿ.ಕುಪ್ಪೆಯ ರಾಜು ಮತ್ತು ಲಕ್ಷ್ಮೀ ದಂಪತಿಯ ಪುತ್ರಿ ಡಿ.ಬಿ.ಕುಪೆ ಹಾಡಿಯ ದಿವ್ಯಾ ಹಂಪಿಯ ಕನ್ನಡ ವಿವಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ.ಮೇತ್ರಿ ಅವರ ಮಾರ್ಗದರ್ಶನದಲ್ಲಿ ‘ಪಣಿಯನ್ ಬುಡಕಟ್ಟು ಸಾಮಾಜಿಕ
ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಸಮುದಾಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊದಲಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.
ರಾಜು-ಲಕ್ಷ್ಮಿ ದಂಪತಿಗೆ ದಿವ್ಯಾ, ದೀಬು ಮತ್ತು ದೀಬ ಎಂಬ ಮೂವರು ಮಕ್ಕಳಿದ್ದು, ಬಡತನ, ಮೂಲ ಸೌಕರ್ಯಗಳ ಕೊರತೆಗಳ ನಡುವೆಯೂ ದಿನಕ್ಕೆ 75 ರೂ. ವೇತನದ ಕೂಲಿ ಕೆಲಸ ಮಾಡಿಕೊಂಡು ತಂದೆ ರಾಜು ಮಕ್ಕಳನ್ನು ಓದಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ದಿವ್ಯಾ ಅವರ ಸಹೋದರ ದೀಬು 10ನೇ ತರಗತಿಗೆ, ಸಹೋದರಿ ದೀಬ 7ನೇ ತರಗತಿಗೆ ಶಿಕ್ಷಣವನ್ನು ಮೊಟಕುಗೊಳಿಸಿ ತಮ್ಮ ತಂದೆ ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ತೆರಳ ಬೇಕಾಗಿ ಬಂತು. ಆದರೆ ಶಿಕ್ಷಣವನ್ನು ಮುಂದವರಿಸಿದೆ ದಿವ್ಯ 1ರಿಂದ ೨ನೇ ತರಗತಿಯವರೆಗೆ ಡಿ.ಬಿ.ಕುಪ್ಪೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿದ್ದರೂ ಹಾಡಿಗೆ ಒದಗಿಸಿರುವ ಬೀದಿ ದೀಪವನ್ನೇ ಆಸರೆಯಾಗಿ ಬಳಸಿಕೊಂಡು ಕಾಲೇಜು ಶಿಕ್ಷಣವನ್ನೂ ಮುಗಿಸಿದರು. ಈಗ ಹಂಪಿಯ ಕನ್ನಡ ವಿವಿಯಲ್ಲಿ ಪಿಎಚ್.ಡಿ. ಪದವಿ ಪಡೆದು ಎಚ್ .ಡಿ.ಕೋಟೆ ತಾಲ್ಲೂಕಿಗೆ ಹಾಗೂ ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.
ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಪ್ರೌಢಶಾಲೆ, ಪಿಯುಸಿ, ಪದವಿ ಶಿಕ್ಷಣವನ್ನು ಮುಗಿಸಿರುವ ಇವರು, ಮೈಸೂರಿನ ಛಾಯಾದೇವಿ ಬಿ.ಇಡಿ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಮುಗಿಸಿದರು. ನಂತರ ಹಂಪಿಯ ಕನ್ನಡ ವಿವಿಯಲ್ಲಿ ಎಂ.ಎ. ಸಮಾಜಶಾಸ್ತ್ರ ವಿಷಯದಲ್ಲಿ 4ನೇ ಬ್ಯಾಂಕ್ ಗಳಿಸಿ ಅಲ್ಲಿಯೇ ಪಿಎಚ್.ಡಿ. ಸಂಶೋಧನೆ ಪೂರ್ಣ ಗೊಳಿಸಿದ್ದಾರೆ, ಜತೆಗೆ ಕೆಎಸ್ ಒಯುನಲ್ಲಿ ಕನ್ನಡ ಎಂ.ಎ. ಪದವಿ ಕೂಡ ಪಡೆದಿದ್ದಾರೆ. ಮೂಲತಃ ಇವರದು ದ್ರಾವಿಡ ಉಪಭಾಷೆಯಾದ ಪಣಿಯನ್ ಮಾತೃಭಾಷೆಯಾಗಿದ್ದು, ಕನ್ನಡವನ್ನು ಸರಾಗವಾಗಿ ಮಾತನಾಡುತ್ತಾರೆ.
ನನ್ನ ಸಮುದಾಯವನ್ನು ನಿರ್ಲಕ್ಷ್ಯಮಾಡುತ್ತಿರುವವರಿಗೆ ನಮಗೂ ಅವಕಾಶ ನೀಡಿ ನಾವು ವಿದ್ಯಾವಂತರಾಗುತ್ತೇವೆ ಎಂಬುದನ್ನು ತೋರಿಸಿಕೊಟ್ಟಿದ್ದೇನೆ. ನಮ್ಮ ಪಣಿ ಎರವರ ಸಮುದಾಯಕ್ಕೆ ನಾನು ಏನಾದರೂ ಸೇವೆ ಮಾಡಬೇಕು ಎಂಬುದು ನನ್ನ ಉದ್ದೇಶ. ನಮ್ಮ ಜನರು ರಾಜಕೀಯವಾಗಿ, ಆರ್ಥಿಕವಾಗಿ ಮುಂದುವರಿದಿಲ್ಲ. ನಾನು ವಿದ್ಯಾವಂತಳಾಗಿ ಸಮುದಾಯಕ್ಕೆ ಏಳಿಗೆಗೆ ಶ್ರಮಿಸುತ್ತೇನೆ.
-ಎಸ್.ಆರ್.ದಿವ್ಯಾ, ಪಿಎಚ್.ಡಿ. ಪದವೀಧರೆ
(Prashanthsmysore@gmail.com)
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…