ಅಂಕಣಗಳು

ಡಿ.ಬಿ ಕುಪ್ಪೆ ಹಾಡಿಯ ದಿವ್ಯಾ ಈಗ ಡಾಕ್ಟರೇಟ್‌ ಪದವೀಧರೆ

• ಪ್ರಶಾಂತ್ ಎಸ್.

ನಾಗರಹೊಳೆ ರಾಷ್ಟ್ರೀಯ ಉದ್ಯಾ ನವನದ ಡಿ.ಬಿ.ಕುಪ್ಪೆ ಹಾಡಿಯ ಎಸ್. ಆ‌.ದಿವ್ಯಾ ಪಿಎಚ್‌.ಡಿ. ಪಡೆದ ಪಣಿ ಎರವ ಬುಡಕಟ್ಟು ಸಮುದಾಯದ ಹೆಣ್ಣುಮಗಳು.

ಡಿ.ಬಿ.ಕುಪ್ಪೆಯ ರಾಜು ಮತ್ತು ಲಕ್ಷ್ಮೀ ದಂಪತಿಯ ಪುತ್ರಿ ಡಿ.ಬಿ.ಕುಪೆ ಹಾಡಿಯ ದಿವ್ಯಾ ಹಂಪಿಯ ಕನ್ನಡ ವಿವಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ.ಮೇತ್ರಿ ಅವರ ಮಾರ್ಗದರ್ಶನದಲ್ಲಿ ‘ಪಣಿಯನ್ ಬುಡಕಟ್ಟು ಸಾಮಾಜಿಕ
ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ ನಡೆಸಿ ಪಿಎಚ್‌.ಡಿ. ಪಡೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಸಮುದಾಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊದಲಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ರಾಜು-ಲಕ್ಷ್ಮಿ ದಂಪತಿಗೆ ದಿವ್ಯಾ, ದೀಬು ಮತ್ತು ದೀಬ ಎಂಬ ಮೂವರು ಮಕ್ಕಳಿದ್ದು, ಬಡತನ, ಮೂಲ ಸೌಕರ್ಯಗಳ ಕೊರತೆಗಳ ನಡುವೆಯೂ ದಿನಕ್ಕೆ 75 ರೂ. ವೇತನದ ಕೂಲಿ ಕೆಲಸ ಮಾಡಿಕೊಂಡು ತಂದೆ ರಾಜು ಮಕ್ಕಳನ್ನು ಓದಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ದಿವ್ಯಾ ಅವರ ಸಹೋದರ ದೀಬು 10ನೇ ತರಗತಿಗೆ, ಸಹೋದರಿ ದೀಬ 7ನೇ ತರಗತಿಗೆ ಶಿಕ್ಷಣವನ್ನು ಮೊಟಕುಗೊಳಿಸಿ ತಮ್ಮ ತಂದೆ ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ತೆರಳ ಬೇಕಾಗಿ ಬಂತು. ಆದರೆ ಶಿಕ್ಷಣವನ್ನು ಮುಂದವರಿಸಿದೆ ದಿವ್ಯ 1ರಿಂದ ೨ನೇ ತರಗತಿಯವರೆಗೆ ಡಿ.ಬಿ.ಕುಪ್ಪೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಮನೆಯಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದಿದ್ದರೂ ಹಾಡಿಗೆ ಒದಗಿಸಿರುವ ಬೀದಿ ದೀಪವನ್ನೇ ಆಸರೆಯಾಗಿ ಬಳಸಿಕೊಂಡು ಕಾಲೇಜು ಶಿಕ್ಷಣವನ್ನೂ ಮುಗಿಸಿದರು. ಈಗ ಹಂಪಿಯ ಕನ್ನಡ ವಿವಿಯಲ್ಲಿ ಪಿಎಚ್‌.ಡಿ. ಪದವಿ ಪಡೆದು ಎಚ್ .ಡಿ.ಕೋಟೆ ತಾಲ್ಲೂಕಿಗೆ ಹಾಗೂ ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಪ್ರೌಢಶಾಲೆ, ಪಿಯುಸಿ, ಪದವಿ ಶಿಕ್ಷಣವನ್ನು ಮುಗಿಸಿರುವ ಇವರು, ಮೈಸೂರಿನ ಛಾಯಾದೇವಿ ಬಿ.ಇಡಿ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಮುಗಿಸಿದರು. ನಂತರ ಹಂಪಿಯ ಕನ್ನಡ ವಿವಿಯಲ್ಲಿ ಎಂ.ಎ. ಸಮಾಜಶಾಸ್ತ್ರ ವಿಷಯದಲ್ಲಿ 4ನೇ ಬ್ಯಾಂಕ್ ಗಳಿಸಿ ಅಲ್ಲಿಯೇ ಪಿಎಚ್.ಡಿ. ಸಂಶೋಧನೆ ಪೂರ್ಣ ಗೊಳಿಸಿದ್ದಾರೆ, ಜತೆಗೆ ಕೆಎಸ್‌ ಒಯುನಲ್ಲಿ ಕನ್ನಡ ಎಂ.ಎ. ಪದವಿ ಕೂಡ ಪಡೆದಿದ್ದಾರೆ. ಮೂಲತಃ ಇವರದು ದ್ರಾವಿಡ ಉಪಭಾಷೆಯಾದ ಪಣಿಯನ್ ಮಾತೃಭಾಷೆಯಾಗಿದ್ದು, ಕನ್ನಡವನ್ನು ಸರಾಗವಾಗಿ ಮಾತನಾಡುತ್ತಾರೆ.

ನನ್ನ ಸಮುದಾಯವನ್ನು ನಿರ್ಲಕ್ಷ್ಯಮಾಡುತ್ತಿರುವವರಿಗೆ ನಮಗೂ ಅವಕಾಶ ನೀಡಿ ನಾವು ವಿದ್ಯಾವಂತರಾಗುತ್ತೇವೆ ಎಂಬುದನ್ನು ತೋರಿಸಿಕೊಟ್ಟಿದ್ದೇನೆ. ನಮ್ಮ ಪಣಿ ಎರವರ ಸಮುದಾಯಕ್ಕೆ ನಾನು ಏನಾದರೂ ಸೇವೆ ಮಾಡಬೇಕು ಎಂಬುದು ನನ್ನ ಉದ್ದೇಶ. ನಮ್ಮ ಜನರು ರಾಜಕೀಯವಾಗಿ, ಆರ್ಥಿಕವಾಗಿ ಮುಂದುವರಿದಿಲ್ಲ. ನಾನು ವಿದ್ಯಾವಂತಳಾಗಿ ಸಮುದಾಯಕ್ಕೆ ಏಳಿಗೆಗೆ ಶ್ರಮಿಸುತ್ತೇನೆ.
-ಎಸ್.ಆರ್.ದಿವ್ಯಾ, ಪಿಎಚ್.ಡಿ. ಪದವೀಧರೆ

(Prashanthsmysore@gmail.com)

andolanait

Recent Posts

ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ : ತುರ್ತು ಪರಿಹಾರಕ್ಕೆ ಮನವಿ

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

8 hours ago

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…

8 hours ago

ಫಿಟ್‌ ಮೈಸೂರು ವಾಕ್‌ಥಾನ್‌ಗೆ ಮೈಸೂರು ಸಜ್ಜು

 ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…

8 hours ago

ಹಿಮದಿಂದ ಆವೃತವಾದ ಕೇದರನಾಥ

ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…

8 hours ago

ಹುಲಿ ದಾಳಿಗೆ ಹಸು ಬಲಿ : ವ್ಯಾಘ್ರ ಸೆರೆಗೆ ಗ್ರಾಮಸ್ಥರ ಒತ್ತಾಯ

ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…

8 hours ago

ಹಂತ ಹಂತವಾಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ,ಟ್ರಾಮಾ ಸೆಂಟರ್ ಸ್ಥಾಪನೆ : ಸಿಎಂ ಭರವಸೆ

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…

8 hours ago