ಅಂಕಣಗಳು

ಡಿ.ಬಿ ಕುಪ್ಪೆ ಹಾಡಿಯ ದಿವ್ಯಾ ಈಗ ಡಾಕ್ಟರೇಟ್‌ ಪದವೀಧರೆ

• ಪ್ರಶಾಂತ್ ಎಸ್.

ನಾಗರಹೊಳೆ ರಾಷ್ಟ್ರೀಯ ಉದ್ಯಾ ನವನದ ಡಿ.ಬಿ.ಕುಪ್ಪೆ ಹಾಡಿಯ ಎಸ್. ಆ‌.ದಿವ್ಯಾ ಪಿಎಚ್‌.ಡಿ. ಪಡೆದ ಪಣಿ ಎರವ ಬುಡಕಟ್ಟು ಸಮುದಾಯದ ಹೆಣ್ಣುಮಗಳು.

ಡಿ.ಬಿ.ಕುಪ್ಪೆಯ ರಾಜು ಮತ್ತು ಲಕ್ಷ್ಮೀ ದಂಪತಿಯ ಪುತ್ರಿ ಡಿ.ಬಿ.ಕುಪೆ ಹಾಡಿಯ ದಿವ್ಯಾ ಹಂಪಿಯ ಕನ್ನಡ ವಿವಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ.ಮೇತ್ರಿ ಅವರ ಮಾರ್ಗದರ್ಶನದಲ್ಲಿ ‘ಪಣಿಯನ್ ಬುಡಕಟ್ಟು ಸಾಮಾಜಿಕ
ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ ನಡೆಸಿ ಪಿಎಚ್‌.ಡಿ. ಪಡೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಸಮುದಾಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊದಲಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ರಾಜು-ಲಕ್ಷ್ಮಿ ದಂಪತಿಗೆ ದಿವ್ಯಾ, ದೀಬು ಮತ್ತು ದೀಬ ಎಂಬ ಮೂವರು ಮಕ್ಕಳಿದ್ದು, ಬಡತನ, ಮೂಲ ಸೌಕರ್ಯಗಳ ಕೊರತೆಗಳ ನಡುವೆಯೂ ದಿನಕ್ಕೆ 75 ರೂ. ವೇತನದ ಕೂಲಿ ಕೆಲಸ ಮಾಡಿಕೊಂಡು ತಂದೆ ರಾಜು ಮಕ್ಕಳನ್ನು ಓದಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ದಿವ್ಯಾ ಅವರ ಸಹೋದರ ದೀಬು 10ನೇ ತರಗತಿಗೆ, ಸಹೋದರಿ ದೀಬ 7ನೇ ತರಗತಿಗೆ ಶಿಕ್ಷಣವನ್ನು ಮೊಟಕುಗೊಳಿಸಿ ತಮ್ಮ ತಂದೆ ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ತೆರಳ ಬೇಕಾಗಿ ಬಂತು. ಆದರೆ ಶಿಕ್ಷಣವನ್ನು ಮುಂದವರಿಸಿದೆ ದಿವ್ಯ 1ರಿಂದ ೨ನೇ ತರಗತಿಯವರೆಗೆ ಡಿ.ಬಿ.ಕುಪ್ಪೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಮನೆಯಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದಿದ್ದರೂ ಹಾಡಿಗೆ ಒದಗಿಸಿರುವ ಬೀದಿ ದೀಪವನ್ನೇ ಆಸರೆಯಾಗಿ ಬಳಸಿಕೊಂಡು ಕಾಲೇಜು ಶಿಕ್ಷಣವನ್ನೂ ಮುಗಿಸಿದರು. ಈಗ ಹಂಪಿಯ ಕನ್ನಡ ವಿವಿಯಲ್ಲಿ ಪಿಎಚ್‌.ಡಿ. ಪದವಿ ಪಡೆದು ಎಚ್ .ಡಿ.ಕೋಟೆ ತಾಲ್ಲೂಕಿಗೆ ಹಾಗೂ ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಪ್ರೌಢಶಾಲೆ, ಪಿಯುಸಿ, ಪದವಿ ಶಿಕ್ಷಣವನ್ನು ಮುಗಿಸಿರುವ ಇವರು, ಮೈಸೂರಿನ ಛಾಯಾದೇವಿ ಬಿ.ಇಡಿ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಮುಗಿಸಿದರು. ನಂತರ ಹಂಪಿಯ ಕನ್ನಡ ವಿವಿಯಲ್ಲಿ ಎಂ.ಎ. ಸಮಾಜಶಾಸ್ತ್ರ ವಿಷಯದಲ್ಲಿ 4ನೇ ಬ್ಯಾಂಕ್ ಗಳಿಸಿ ಅಲ್ಲಿಯೇ ಪಿಎಚ್.ಡಿ. ಸಂಶೋಧನೆ ಪೂರ್ಣ ಗೊಳಿಸಿದ್ದಾರೆ, ಜತೆಗೆ ಕೆಎಸ್‌ ಒಯುನಲ್ಲಿ ಕನ್ನಡ ಎಂ.ಎ. ಪದವಿ ಕೂಡ ಪಡೆದಿದ್ದಾರೆ. ಮೂಲತಃ ಇವರದು ದ್ರಾವಿಡ ಉಪಭಾಷೆಯಾದ ಪಣಿಯನ್ ಮಾತೃಭಾಷೆಯಾಗಿದ್ದು, ಕನ್ನಡವನ್ನು ಸರಾಗವಾಗಿ ಮಾತನಾಡುತ್ತಾರೆ.

ನನ್ನ ಸಮುದಾಯವನ್ನು ನಿರ್ಲಕ್ಷ್ಯಮಾಡುತ್ತಿರುವವರಿಗೆ ನಮಗೂ ಅವಕಾಶ ನೀಡಿ ನಾವು ವಿದ್ಯಾವಂತರಾಗುತ್ತೇವೆ ಎಂಬುದನ್ನು ತೋರಿಸಿಕೊಟ್ಟಿದ್ದೇನೆ. ನಮ್ಮ ಪಣಿ ಎರವರ ಸಮುದಾಯಕ್ಕೆ ನಾನು ಏನಾದರೂ ಸೇವೆ ಮಾಡಬೇಕು ಎಂಬುದು ನನ್ನ ಉದ್ದೇಶ. ನಮ್ಮ ಜನರು ರಾಜಕೀಯವಾಗಿ, ಆರ್ಥಿಕವಾಗಿ ಮುಂದುವರಿದಿಲ್ಲ. ನಾನು ವಿದ್ಯಾವಂತಳಾಗಿ ಸಮುದಾಯಕ್ಕೆ ಏಳಿಗೆಗೆ ಶ್ರಮಿಸುತ್ತೇನೆ.
-ಎಸ್.ಆರ್.ದಿವ್ಯಾ, ಪಿಎಚ್.ಡಿ. ಪದವೀಧರೆ

(Prashanthsmysore@gmail.com)

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago