ಅಂಕಣಗಳು

ಡಿ.ಬಿ ಕುಪ್ಪೆ ಹಾಡಿಯ ದಿವ್ಯಾ ಈಗ ಡಾಕ್ಟರೇಟ್‌ ಪದವೀಧರೆ

• ಪ್ರಶಾಂತ್ ಎಸ್.

ನಾಗರಹೊಳೆ ರಾಷ್ಟ್ರೀಯ ಉದ್ಯಾ ನವನದ ಡಿ.ಬಿ.ಕುಪ್ಪೆ ಹಾಡಿಯ ಎಸ್. ಆ‌.ದಿವ್ಯಾ ಪಿಎಚ್‌.ಡಿ. ಪಡೆದ ಪಣಿ ಎರವ ಬುಡಕಟ್ಟು ಸಮುದಾಯದ ಹೆಣ್ಣುಮಗಳು.

ಡಿ.ಬಿ.ಕುಪ್ಪೆಯ ರಾಜು ಮತ್ತು ಲಕ್ಷ್ಮೀ ದಂಪತಿಯ ಪುತ್ರಿ ಡಿ.ಬಿ.ಕುಪೆ ಹಾಡಿಯ ದಿವ್ಯಾ ಹಂಪಿಯ ಕನ್ನಡ ವಿವಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ.ಮೇತ್ರಿ ಅವರ ಮಾರ್ಗದರ್ಶನದಲ್ಲಿ ‘ಪಣಿಯನ್ ಬುಡಕಟ್ಟು ಸಾಮಾಜಿಕ
ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ ನಡೆಸಿ ಪಿಎಚ್‌.ಡಿ. ಪಡೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಸಮುದಾಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊದಲಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ರಾಜು-ಲಕ್ಷ್ಮಿ ದಂಪತಿಗೆ ದಿವ್ಯಾ, ದೀಬು ಮತ್ತು ದೀಬ ಎಂಬ ಮೂವರು ಮಕ್ಕಳಿದ್ದು, ಬಡತನ, ಮೂಲ ಸೌಕರ್ಯಗಳ ಕೊರತೆಗಳ ನಡುವೆಯೂ ದಿನಕ್ಕೆ 75 ರೂ. ವೇತನದ ಕೂಲಿ ಕೆಲಸ ಮಾಡಿಕೊಂಡು ತಂದೆ ರಾಜು ಮಕ್ಕಳನ್ನು ಓದಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ದಿವ್ಯಾ ಅವರ ಸಹೋದರ ದೀಬು 10ನೇ ತರಗತಿಗೆ, ಸಹೋದರಿ ದೀಬ 7ನೇ ತರಗತಿಗೆ ಶಿಕ್ಷಣವನ್ನು ಮೊಟಕುಗೊಳಿಸಿ ತಮ್ಮ ತಂದೆ ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ತೆರಳ ಬೇಕಾಗಿ ಬಂತು. ಆದರೆ ಶಿಕ್ಷಣವನ್ನು ಮುಂದವರಿಸಿದೆ ದಿವ್ಯ 1ರಿಂದ ೨ನೇ ತರಗತಿಯವರೆಗೆ ಡಿ.ಬಿ.ಕುಪ್ಪೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಮನೆಯಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದಿದ್ದರೂ ಹಾಡಿಗೆ ಒದಗಿಸಿರುವ ಬೀದಿ ದೀಪವನ್ನೇ ಆಸರೆಯಾಗಿ ಬಳಸಿಕೊಂಡು ಕಾಲೇಜು ಶಿಕ್ಷಣವನ್ನೂ ಮುಗಿಸಿದರು. ಈಗ ಹಂಪಿಯ ಕನ್ನಡ ವಿವಿಯಲ್ಲಿ ಪಿಎಚ್‌.ಡಿ. ಪದವಿ ಪಡೆದು ಎಚ್ .ಡಿ.ಕೋಟೆ ತಾಲ್ಲೂಕಿಗೆ ಹಾಗೂ ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಪ್ರೌಢಶಾಲೆ, ಪಿಯುಸಿ, ಪದವಿ ಶಿಕ್ಷಣವನ್ನು ಮುಗಿಸಿರುವ ಇವರು, ಮೈಸೂರಿನ ಛಾಯಾದೇವಿ ಬಿ.ಇಡಿ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಮುಗಿಸಿದರು. ನಂತರ ಹಂಪಿಯ ಕನ್ನಡ ವಿವಿಯಲ್ಲಿ ಎಂ.ಎ. ಸಮಾಜಶಾಸ್ತ್ರ ವಿಷಯದಲ್ಲಿ 4ನೇ ಬ್ಯಾಂಕ್ ಗಳಿಸಿ ಅಲ್ಲಿಯೇ ಪಿಎಚ್.ಡಿ. ಸಂಶೋಧನೆ ಪೂರ್ಣ ಗೊಳಿಸಿದ್ದಾರೆ, ಜತೆಗೆ ಕೆಎಸ್‌ ಒಯುನಲ್ಲಿ ಕನ್ನಡ ಎಂ.ಎ. ಪದವಿ ಕೂಡ ಪಡೆದಿದ್ದಾರೆ. ಮೂಲತಃ ಇವರದು ದ್ರಾವಿಡ ಉಪಭಾಷೆಯಾದ ಪಣಿಯನ್ ಮಾತೃಭಾಷೆಯಾಗಿದ್ದು, ಕನ್ನಡವನ್ನು ಸರಾಗವಾಗಿ ಮಾತನಾಡುತ್ತಾರೆ.

ನನ್ನ ಸಮುದಾಯವನ್ನು ನಿರ್ಲಕ್ಷ್ಯಮಾಡುತ್ತಿರುವವರಿಗೆ ನಮಗೂ ಅವಕಾಶ ನೀಡಿ ನಾವು ವಿದ್ಯಾವಂತರಾಗುತ್ತೇವೆ ಎಂಬುದನ್ನು ತೋರಿಸಿಕೊಟ್ಟಿದ್ದೇನೆ. ನಮ್ಮ ಪಣಿ ಎರವರ ಸಮುದಾಯಕ್ಕೆ ನಾನು ಏನಾದರೂ ಸೇವೆ ಮಾಡಬೇಕು ಎಂಬುದು ನನ್ನ ಉದ್ದೇಶ. ನಮ್ಮ ಜನರು ರಾಜಕೀಯವಾಗಿ, ಆರ್ಥಿಕವಾಗಿ ಮುಂದುವರಿದಿಲ್ಲ. ನಾನು ವಿದ್ಯಾವಂತಳಾಗಿ ಸಮುದಾಯಕ್ಕೆ ಏಳಿಗೆಗೆ ಶ್ರಮಿಸುತ್ತೇನೆ.
-ಎಸ್.ಆರ್.ದಿವ್ಯಾ, ಪಿಎಚ್.ಡಿ. ಪದವೀಧರೆ

(Prashanthsmysore@gmail.com)

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago