ಅಂಕಣಗಳು

ಡಿ.ಬಿ ಕುಪ್ಪೆ ಹಾಡಿಯ ದಿವ್ಯಾ ಈಗ ಡಾಕ್ಟರೇಟ್‌ ಪದವೀಧರೆ

• ಪ್ರಶಾಂತ್ ಎಸ್.

ನಾಗರಹೊಳೆ ರಾಷ್ಟ್ರೀಯ ಉದ್ಯಾ ನವನದ ಡಿ.ಬಿ.ಕುಪ್ಪೆ ಹಾಡಿಯ ಎಸ್. ಆ‌.ದಿವ್ಯಾ ಪಿಎಚ್‌.ಡಿ. ಪಡೆದ ಪಣಿ ಎರವ ಬುಡಕಟ್ಟು ಸಮುದಾಯದ ಹೆಣ್ಣುಮಗಳು.

ಡಿ.ಬಿ.ಕುಪ್ಪೆಯ ರಾಜು ಮತ್ತು ಲಕ್ಷ್ಮೀ ದಂಪತಿಯ ಪುತ್ರಿ ಡಿ.ಬಿ.ಕುಪೆ ಹಾಡಿಯ ದಿವ್ಯಾ ಹಂಪಿಯ ಕನ್ನಡ ವಿವಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ.ಮೇತ್ರಿ ಅವರ ಮಾರ್ಗದರ್ಶನದಲ್ಲಿ ‘ಪಣಿಯನ್ ಬುಡಕಟ್ಟು ಸಾಮಾಜಿಕ
ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ ನಡೆಸಿ ಪಿಎಚ್‌.ಡಿ. ಪಡೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಸಮುದಾಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊದಲಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ರಾಜು-ಲಕ್ಷ್ಮಿ ದಂಪತಿಗೆ ದಿವ್ಯಾ, ದೀಬು ಮತ್ತು ದೀಬ ಎಂಬ ಮೂವರು ಮಕ್ಕಳಿದ್ದು, ಬಡತನ, ಮೂಲ ಸೌಕರ್ಯಗಳ ಕೊರತೆಗಳ ನಡುವೆಯೂ ದಿನಕ್ಕೆ 75 ರೂ. ವೇತನದ ಕೂಲಿ ಕೆಲಸ ಮಾಡಿಕೊಂಡು ತಂದೆ ರಾಜು ಮಕ್ಕಳನ್ನು ಓದಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ದಿವ್ಯಾ ಅವರ ಸಹೋದರ ದೀಬು 10ನೇ ತರಗತಿಗೆ, ಸಹೋದರಿ ದೀಬ 7ನೇ ತರಗತಿಗೆ ಶಿಕ್ಷಣವನ್ನು ಮೊಟಕುಗೊಳಿಸಿ ತಮ್ಮ ತಂದೆ ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ತೆರಳ ಬೇಕಾಗಿ ಬಂತು. ಆದರೆ ಶಿಕ್ಷಣವನ್ನು ಮುಂದವರಿಸಿದೆ ದಿವ್ಯ 1ರಿಂದ ೨ನೇ ತರಗತಿಯವರೆಗೆ ಡಿ.ಬಿ.ಕುಪ್ಪೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಮನೆಯಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದಿದ್ದರೂ ಹಾಡಿಗೆ ಒದಗಿಸಿರುವ ಬೀದಿ ದೀಪವನ್ನೇ ಆಸರೆಯಾಗಿ ಬಳಸಿಕೊಂಡು ಕಾಲೇಜು ಶಿಕ್ಷಣವನ್ನೂ ಮುಗಿಸಿದರು. ಈಗ ಹಂಪಿಯ ಕನ್ನಡ ವಿವಿಯಲ್ಲಿ ಪಿಎಚ್‌.ಡಿ. ಪದವಿ ಪಡೆದು ಎಚ್ .ಡಿ.ಕೋಟೆ ತಾಲ್ಲೂಕಿಗೆ ಹಾಗೂ ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಪ್ರೌಢಶಾಲೆ, ಪಿಯುಸಿ, ಪದವಿ ಶಿಕ್ಷಣವನ್ನು ಮುಗಿಸಿರುವ ಇವರು, ಮೈಸೂರಿನ ಛಾಯಾದೇವಿ ಬಿ.ಇಡಿ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಮುಗಿಸಿದರು. ನಂತರ ಹಂಪಿಯ ಕನ್ನಡ ವಿವಿಯಲ್ಲಿ ಎಂ.ಎ. ಸಮಾಜಶಾಸ್ತ್ರ ವಿಷಯದಲ್ಲಿ 4ನೇ ಬ್ಯಾಂಕ್ ಗಳಿಸಿ ಅಲ್ಲಿಯೇ ಪಿಎಚ್.ಡಿ. ಸಂಶೋಧನೆ ಪೂರ್ಣ ಗೊಳಿಸಿದ್ದಾರೆ, ಜತೆಗೆ ಕೆಎಸ್‌ ಒಯುನಲ್ಲಿ ಕನ್ನಡ ಎಂ.ಎ. ಪದವಿ ಕೂಡ ಪಡೆದಿದ್ದಾರೆ. ಮೂಲತಃ ಇವರದು ದ್ರಾವಿಡ ಉಪಭಾಷೆಯಾದ ಪಣಿಯನ್ ಮಾತೃಭಾಷೆಯಾಗಿದ್ದು, ಕನ್ನಡವನ್ನು ಸರಾಗವಾಗಿ ಮಾತನಾಡುತ್ತಾರೆ.

ನನ್ನ ಸಮುದಾಯವನ್ನು ನಿರ್ಲಕ್ಷ್ಯಮಾಡುತ್ತಿರುವವರಿಗೆ ನಮಗೂ ಅವಕಾಶ ನೀಡಿ ನಾವು ವಿದ್ಯಾವಂತರಾಗುತ್ತೇವೆ ಎಂಬುದನ್ನು ತೋರಿಸಿಕೊಟ್ಟಿದ್ದೇನೆ. ನಮ್ಮ ಪಣಿ ಎರವರ ಸಮುದಾಯಕ್ಕೆ ನಾನು ಏನಾದರೂ ಸೇವೆ ಮಾಡಬೇಕು ಎಂಬುದು ನನ್ನ ಉದ್ದೇಶ. ನಮ್ಮ ಜನರು ರಾಜಕೀಯವಾಗಿ, ಆರ್ಥಿಕವಾಗಿ ಮುಂದುವರಿದಿಲ್ಲ. ನಾನು ವಿದ್ಯಾವಂತಳಾಗಿ ಸಮುದಾಯಕ್ಕೆ ಏಳಿಗೆಗೆ ಶ್ರಮಿಸುತ್ತೇನೆ.
-ಎಸ್.ಆರ್.ದಿವ್ಯಾ, ಪಿಎಚ್.ಡಿ. ಪದವೀಧರೆ

(Prashanthsmysore@gmail.com)

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

20 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago