ಅಂಕಣಗಳು

ಶಿಕ್ಷಣ ಮತ್ತು ಸ್ವಾವಲಂಬನೆ ನನ್ನ ಬದುಕಿನ ಎರಡು ಕಣ್ಣುಗಳು

  • ಡಾ.ಮಾಲ ಬಿ.ಎಂ.
ನಾನು ಹುಟ್ಟಿನಿಂದಲೇ ಅಂಧಳು. ಅಂಧಮಕ್ಕಳಿಗೂ ವಿಶೇಷ ಶಾಲೆಗಳಿವೆ ಎಂಬುದರ ಬಗ್ಗೆ ನಮ್ಮ ಮನೆಯಲ್ಲಿ ಮಾಹಿತಿ ಇರಲಿಲ್ಲ. ಇದರಿಂದಾಗಿಯೇ ಅವರು ನನ್ನನ್ನು ಶಾಲೆಗೆ ಸೇರಿಸಲು ತಡ ಮಾಡಿದರು. ಆದರೆ ನನ್ನಲ್ಲಿದ್ದ ಓದುವ ಹಂಬಲದಿಂದ ನಾನು 15 ವರ್ಷಗಳಾದ ಮೇಲೆ ಹತ್ತನೇ ತರಗತಿ ಪರೀಕ್ಷೆಯನ್ನು ತೆಗೆದುಕೊಂಡೆ. ನನ್ನ ಸಹೋದರಿಯರ ಸಹಾಯ ಪಡೆದು ವಿದ್ಯಾಭ್ಯಾಸ ಮುಂದುವರಿಸಿದೆ. ಓದುವುದನ್ನು ಮುಂದುವರಿಸಲು ವಯಸ್ಸಿನ ಪರಿಮಿತಿ ಇಲ್ಲ ಮನಸ್ಸು ಮಾಡಿದರೆ ಸಾಕು ಯಾವ ಸಮಸ್ಯೆಗಳೂ ಅಡ್ಡಿಯಾಗುವುದಿಲ್ಲ ಎಂಬುದು ನನ್ನ ಭಾವನೆ. 90 ವರ್ಷ ದಾಟಿದ ವಯೋವೃದ್ದೆ ಒಬ್ಬರು ಪಿಎಚ್‌.ಡಿ. ಪದವಿ ಪಡೆದ ಉದಾಹರಣೆಯು ನಮ್ಮಲ್ಲಿದೆ. ಅಷ್ಟೇ ಏಕೆ ನನ್ನ ವಿದ್ಯಾಭ್ಯಾಸವು ತಡವಾಗಿಯೇ ಶುರುವಾಯಿತು. ಕಾರಣ ನಾನು ಹುಟ್ಟಿನಿಂದಲೇ ಅಂಧಳಾಗಿದ್ದರಿಂದ, ನಮ್ಮ ಮನೆಯಲ್ಲಿ ವಿಶೇಷ ಶಾಲೆಗಳ ಬಗ್ಗೆ ಮಾಹಿತಿ ಇಲ್ಲದೆ ಇದ್ದುದ್ದರಿಂದ. ನಾನು ಶಾಲೆಯ ಮೆಟ್ಟಿಲನ್ನೇ ಹತ್ತಲು ಸಾಧ್ಯವಾಗಿರಲಿಲ್ಲ. ಆದರೂ ಓದುವ ಹಂಬಲದಿಂದ ನನಗೆ 15 ವರ್ಷಗಳಾದ ಮೇಲೆ ನಾನು ಹತ್ತನೇ ತರಗತಿ ಪರೀಕ್ಷೆಯನ್ನು ನೇರವಾಗಿ ಖಾಸಗಿ ವಿದ್ಯಾರ್ಥಿನಿಯಾಗಿ ತೆಗೆದುಕೊಂಡೆ. ನಂತರ ನನ್ನ ಸಹೋದರಿಯರ ಸಹಾಯ ಪಡೆದು ಮನೆಯಲ್ಲಿಯೇ ಪಾಠಗಳನ್ನು ಓದಿಸಿಕೊಂಡು ಅರ್ಥ ಮಾಡಿಕೊಳ್ಳ ತೊಡಗಿದೆ. ಪರಿಣಾಮವಾಗಿ ಹತ್ತನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾದೆ. ಅಲ್ಲಿಂದ ಪ್ರಾರಂಭವಾದ ನನ್ನ ವಿದ್ಯಾಭ್ಯಾಸವು ಇಲ್ಲಿಯವರೆಗೂ ಮುಂದುವರಿಯುತ್ತಾ ಬಂದಿದೆ. ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡ ವಿಷಯದಲ್ಲಿ ಪಿಎಚ್.ಡಿ ಪದವಿಯನ್ನೂ ಪಡೆದು ಕೊಂಡಿದ್ದೇನೆ. ಪ್ರಸ್ತುತ ಇತಿಹಾಸ ವಿಭಾಗದಲ್ಲಿ ಪಿಹೆಚ್.ಡಿ ಪದವಿಗಾಗಿ ಮಹಾ ಪ್ರಬಂಧವನ್ನು ಸಿದ್ಧಪಡಿಸುತ್ತಿದ್ದೇನೆ.
ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರಾಗಬೇಕಾದರೆ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಆಗ ಅದೆಷ್ಟೋ ಅವಕಾಶಗಳು ಅವರಿಗೆ ತೆರೆದುಕೊಳ್ಳುತ್ತವೆ. ಹತ್ತನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಖಾಸಗಿಯಾಗಿಯೇ ತೆಗೆದುಕೊಂಡು ಮನೆಯಲ್ಲೇ ಓದಿಕೊಳ್ಳಬಹುದು. ನಂತರ ಉನ್ನತ ಶಿಕ್ಷಣದ ಕೋರ್ಸ್‌ಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಸೇರಿದಂತೆ ಹಲವಾರು ವಿಶ್ವವಿದ್ಯಾಲಯಗಳಿಂದ ಪಡೆದುಕೊಳ್ಳಬಹುದು. ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಶಿಕ್ಷಣವೇ ಮೂಲ ಮಂತ್ರವಾಗಿದೆ. ಹಾಗಾಗಿ ಉನ್ನತ ಶಿಕ್ಷಣವನ್ನು ಪಡೆದುಕೊಂಡು ಒಳ್ಳೆಯ ಉದ್ಯೋಗ ಪಡೆದರೆ ಮಹಿಳೆಯರು ಉತ್ತಮ ಜೀವನ ನಡೆಸಬಹುದು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಪ್ರಸಿದ್ಧವಾದ ನಾಣ್ಣುಡಿಯಂತೆ, ಮಹಿಳೆಯರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದುವರಿದಾಗ ಮಾತ್ರ ಉತ್ತಮ ಕುಟುಂಬ, ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ.
ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದರೂ ನನ್ನನ್ನು ಸಾಕಷ್ಟು ಮಹಿಳೆಯರು ಕೇಳುವ ಪ್ರಶ್ನೆ, ‘ಮೇಡಂ ನನಗೆ ಓದುವ ಹಂಬಲವಿದೆ.
ಆದರೆ ನನಗೆ 18 ವರ್ಷಗಳು ತುಂಬಿ ಹೋಗಿದೆ. ನಾನು ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ. ನಾನು ಈಗಲೂ ಓದಬಹುದೇ?’ ಮತ್ತೆ ಕೆಲವರು ‘ತಮ್ಮ ವಿದ್ಯಾಭ್ಯಾಸವು ಅರ್ಧಕ್ಕೆ ನಿಂತುಹೋಗಿದೆ, ಈಗ ನಾನು ಓದನ್ನು ಮುಂದುವರಿಸಬಹುದೇ?’ ಎಂಬುದಾಗಿದೆ.
ಇದಕ್ಕೆಲ್ಲ ನಾನು ಹೇಳುವುದು ಒಂದೇ ಮಾತು, ಖಂಡಿತಗಿಯೂ ನಿಮ್ಮ ವಿದ್ಯಾಭ್ಯಾಸವನ್ನು ನೀವು ಈಗಲೂ ಮುಂದುವರಿಸಬಹುದು ಎಂದು.
ಓದನ್ನು ಮುಂದುವರಿಸಲು, ಶಿಕ್ಷಿತರಾಗಲು ವಯಸ್ಸಿನ ಪರಿಮಿತಿ ಇಲ್ಲ. ಮನಸ್ಸು ಮಾಡಿದರೆ ಸಾಕು ಯಾವ ಸಮಸ್ಯೆಗಳೂ ಅಡ್ಡಿಯಾಗುವುದಿಲ್ಲ ಎಂಬುದು ನನ್ನ ಭಾವನೆ.
alabm2014@gmail.com
lokesh

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

2 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

3 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

14 hours ago