ಭೂ ದಿಕ್ಸೂಚಿಯಾಗಿ ಕಪ್ಪೆಗಳು

ಡಾ.ಅಭಿಜಿತ್, ಮೈಸೂರು

ಕಪ್ಪೆ ಅನ್ನುವ ಉಭಯವಾಸಿ ಭೂಮಿಯಲ್ಲಿ ಯಾಕಿದೆ ಎಂದು ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ಕಪ್ಪೆ ಅಂದರೆ ಕಪ್ಪೆ ಅಷ್ಟೇ! ಉಭಯವಾಸಿ ಎಂಬ ಉತ್ತರಕ್ಕಿಂತ ಹೆಚ್ಚಿನದ್ದನ್ನು ಹೆಚ್ಚಿನವರಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಪ್ರಸ್ತುತ ಅಧ್ಯಯನಗಳ ಪ್ರಕಾರ ಕಪ್ಪೆಗಳ ಸಂಖ್ಯೆ ಮತ್ತು ಕಪ್ಪೆಗಳ ಪ್ರಭೇದಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ.

ಕೃಷಿಗೆ ಫಲವತ್ತತೆ ಹೆಚ್ಚಿಸಲು ಬಳಸುತ್ತಿರುವ ರಸಗೊಬ್ಬರಗಳು ಮತ್ತು ಕೀಟನಾಶಕಗಳು, ನಗರ-ಪಟ್ಟಣದಲ್ಲಿ ಉತ್ಪಾದನೆಯಾಗುತ್ತಿರುವ ರಾಸಾಯನಿಕ ಅನಿಲಗಳ ಕಾರಣದಿಂದಾಗಿ ಓಜೋನ್ ಪದರದ ನಾಶ. ಪರಿಣಾಮ ಅತಿನೇರಳೆ ಕಿರಣಗಳು ಭೂಮಿಗೆ ನೇರವಾಗಿ ಬೀಳುತ್ತಿರುವುದು. ಇಷೆಲ್ಲ ಕಾರಣಗಳಿಂದಾಗಿ ಕಪ್ಪೆಗಳ ಅಂಗಾಂಗಗಳು ಅನಾರೋಗ್ಯಕ್ಕೀಡಾಗುತ್ತಾ ಕಡೆಗೆ ಕಪ್ಪೆಗಳ ಸಂತತಿಯೇ ನಾಶದ ಕಡೆಗೆ ಚಲಿಸುತ್ತಿದೆ.

ವಿನಾಶದ ಅಂಚಿನಲ್ಲರಿವ ಕಪ್ಪೆಗಳ ಸಂಬಂಧ ಕರ್ನಾಟಕ ಜೀವವೈವಿಧ್ಯ ಮಂಡಲಿ ಕಳೆದ ವರ್ಷ ಪಟ್ಟಿ ಮಾಡಿ, ಈರಿಡಿಚಿಡಿಥಿಚಿ ಡಿಣ, ಟಿಜಡಿಚಿಟಿಚಿ ಟಿಜಥಿಚಿ, ಟಿಜಡಿಚಿಟಿಚಿ ಠಿಡಿಟಿಜಡಿಚಿ ಎಂಬ ಈ ಮೂರೂ ಪ್ರಬೇಧದ ಕಪ್ಪೆಗಳು ಅಳಿವಿನಂಚಿನಲ್ಲಿವೆ ಎಂದು ಹೇಳಿತ್ತು.

ನಮ್ಮ ಪ್ರಕೃತಿಗೆ ಕಪ್ಪೆಗಳಿಂದ ಆಗುವ ಅನುಕೂಲವಾದರೂ ಏನು? ಕೂಪ ಮಂಡೂಕರಾಗಿರುವ ನಾವುಗಳು, ಬಾವಿಯಿಂದ ಆಚೆಗೆ ಬಂದು, ಅನುಕೂಲಗಳೇನು? ಪ್ರಕೃತಿ ಉಳಿಸಲು ನಾವು ಮಾಡಬೇಕಾದ ಕೆಲಸಗಳೇನು ಎಂಬುದನ್ನು ಆಲೋಚಿಸಬೇಕಿದೆ.ಭೂ ದಿಕ್ಸೂಚಿಯಾಗಿ ಕಪ್ಪೆಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ? ಎಂಬುದರ ಬಗ್ಗೆ ಮುಂದಿನ ಭಾಗದಲ್ಲಿ ಮಾತನಾಡುತ್ತೇನೆ..

‘ಕಪ್ಪೆಗಳ ಮದುವೆ’ ಎಂಬ ಸುದ್ದಿ ಪ್ರಕಟವಾದಾಗ ಕಪ್ಪೆಗಳ ನೆನಪಾಗುವುದುಂಟು. ಮದುವೆ ಮಾಡಿಸಿದರೆ ಮಳೆ ಬರುತ್ತದೆ ಎಂದು ವಿಮರ್ಶಿಸುವುದನ್ನು ಬಿಟ್ಟರೆ, ನಮಗೆ ಕಪ್ಪೆಗಳ ಕುರಿತು ಏನುಗೊತ್ತಿಲ್ಲ ಮತ್ತು ಆ ಕುರಿತು ಹೆಚ್ಚಿನವರೂ ಕೂಪ ಮಂಡೂಕರೇ!

andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

3 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

4 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

4 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

4 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

4 hours ago