ಕಪ್ಪೆ ಅನ್ನುವ ಉಭಯವಾಸಿ ಭೂಮಿಯಲ್ಲಿ ಯಾಕಿದೆ ಎಂದು ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ಕಪ್ಪೆ ಅಂದರೆ ಕಪ್ಪೆ ಅಷ್ಟೇ! ಉಭಯವಾಸಿ ಎಂಬ ಉತ್ತರಕ್ಕಿಂತ ಹೆಚ್ಚಿನದ್ದನ್ನು ಹೆಚ್ಚಿನವರಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಪ್ರಸ್ತುತ ಅಧ್ಯಯನಗಳ ಪ್ರಕಾರ ಕಪ್ಪೆಗಳ ಸಂಖ್ಯೆ ಮತ್ತು ಕಪ್ಪೆಗಳ ಪ್ರಭೇದಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ.
ಕೃಷಿಗೆ ಫಲವತ್ತತೆ ಹೆಚ್ಚಿಸಲು ಬಳಸುತ್ತಿರುವ ರಸಗೊಬ್ಬರಗಳು ಮತ್ತು ಕೀಟನಾಶಕಗಳು, ನಗರ-ಪಟ್ಟಣದಲ್ಲಿ ಉತ್ಪಾದನೆಯಾಗುತ್ತಿರುವ ರಾಸಾಯನಿಕ ಅನಿಲಗಳ ಕಾರಣದಿಂದಾಗಿ ಓಜೋನ್ ಪದರದ ನಾಶ. ಪರಿಣಾಮ ಅತಿನೇರಳೆ ಕಿರಣಗಳು ಭೂಮಿಗೆ ನೇರವಾಗಿ ಬೀಳುತ್ತಿರುವುದು. ಇಷೆಲ್ಲ ಕಾರಣಗಳಿಂದಾಗಿ ಕಪ್ಪೆಗಳ ಅಂಗಾಂಗಗಳು ಅನಾರೋಗ್ಯಕ್ಕೀಡಾಗುತ್ತಾ ಕಡೆಗೆ ಕಪ್ಪೆಗಳ ಸಂತತಿಯೇ ನಾಶದ ಕಡೆಗೆ ಚಲಿಸುತ್ತಿದೆ.
ವಿನಾಶದ ಅಂಚಿನಲ್ಲರಿವ ಕಪ್ಪೆಗಳ ಸಂಬಂಧ ಕರ್ನಾಟಕ ಜೀವವೈವಿಧ್ಯ ಮಂಡಲಿ ಕಳೆದ ವರ್ಷ ಪಟ್ಟಿ ಮಾಡಿ, ಈರಿಡಿಚಿಡಿಥಿಚಿ ಡಿಣ, ಟಿಜಡಿಚಿಟಿಚಿ ಟಿಜಥಿಚಿ, ಟಿಜಡಿಚಿಟಿಚಿ ಠಿಡಿಟಿಜಡಿಚಿ ಎಂಬ ಈ ಮೂರೂ ಪ್ರಬೇಧದ ಕಪ್ಪೆಗಳು ಅಳಿವಿನಂಚಿನಲ್ಲಿವೆ ಎಂದು ಹೇಳಿತ್ತು.
ನಮ್ಮ ಪ್ರಕೃತಿಗೆ ಕಪ್ಪೆಗಳಿಂದ ಆಗುವ ಅನುಕೂಲವಾದರೂ ಏನು? ಕೂಪ ಮಂಡೂಕರಾಗಿರುವ ನಾವುಗಳು, ಬಾವಿಯಿಂದ ಆಚೆಗೆ ಬಂದು, ಅನುಕೂಲಗಳೇನು? ಪ್ರಕೃತಿ ಉಳಿಸಲು ನಾವು ಮಾಡಬೇಕಾದ ಕೆಲಸಗಳೇನು ಎಂಬುದನ್ನು ಆಲೋಚಿಸಬೇಕಿದೆ.ಭೂ ದಿಕ್ಸೂಚಿಯಾಗಿ ಕಪ್ಪೆಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ? ಎಂಬುದರ ಬಗ್ಗೆ ಮುಂದಿನ ಭಾಗದಲ್ಲಿ ಮಾತನಾಡುತ್ತೇನೆ..
‘ಕಪ್ಪೆಗಳ ಮದುವೆ’ ಎಂಬ ಸುದ್ದಿ ಪ್ರಕಟವಾದಾಗ ಕಪ್ಪೆಗಳ ನೆನಪಾಗುವುದುಂಟು. ಮದುವೆ ಮಾಡಿಸಿದರೆ ಮಳೆ ಬರುತ್ತದೆ ಎಂದು ವಿಮರ್ಶಿಸುವುದನ್ನು ಬಿಟ್ಟರೆ, ನಮಗೆ ಕಪ್ಪೆಗಳ ಕುರಿತು ಏನುಗೊತ್ತಿಲ್ಲ ಮತ್ತು ಆ ಕುರಿತು ಹೆಚ್ಚಿನವರೂ ಕೂಪ ಮಂಡೂಕರೇ!
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…