ಅಂಕಣಗಳು

ಕೊನೆಯ ದಿನಗಳ ಆಸೆಗಳನ್ನು ಈಡೇರಿಸಿ

ಸೌಮ್ಯ ಕೋಠಿ, ಮೈಸೂರು.

ಕೊನೆಗಾಲ ಎಂದಾಕ್ಷಣ ಎಲ್ಲರಿಗೂ ಕಣ್ಣಂಚಲ್ಲಿ ನೀರು ಬರುವುದು ಸಹಜ. ಸಾಮಾನ್ಯವಾಗಿ ಹಿರಿಯರಿಗೆ ಕೊನೆಗಾಲದಲ್ಲಿ ಸಾಕಷ್ಟು ಬಯಕೆಗಳಿರುತ್ತವೆ. ಅವುಗಳ ಈಡೇರಿಕೆಗಾಗಿ ಅವರು ಹಾತೊರೆಯುತ್ತಾರೆ. ಅವುಗಳನ್ನು ಅರ್ಥ ಮಾಡಿಕೊಂಡು ಈಡೇರಿಸುವುದು ನಮ್ಮ ಹೊಣೆಗಾರಿಕೆಯಾಗಬೇಕು.

ಆಸ್ತಿವಂತರಾಗಿದ್ದರೆ, ಹತ್ತಾರು ಎಕರೆ ಗದ್ದೆ ತೋಟಗಳಿದ್ದರೆ ಅವುಗಳನ್ನು ತಮ್ಮ ಮಕ್ಕಳಿಗೆ, ಕೊನೆಗಾಲದಲ್ಲಿ ತನ್ನ ಹೆಂಡತಿಗೂ ಆಸರೆಯಾಗಬೇಕು ಎಂಬ ದೃಷ್ಟಿಯನ್ನು ಮನದಲ್ಲಿಟ್ಟುಕೊಂಡು ಆಸ್ತಿಯನ್ನು ವಿಲ್ ಮಾಡಿಡುವವರಿದ್ದಾರೆ. ಇದರ ಬಗ್ಗೆ ಅವರು ಕೊನೆಯ ದಿನಗಳಲ್ಲಿ ಗಂಭೀರವಾಗಿ ಯೋಚಿಸುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರ ನಿರ್ಧಾರವನ್ನು ಗೌರವಿಸುವುದು ಮಕ್ಕಳ ಜವಾಬ್ದಾರಿಯಾಗಿರುತ್ತದೆ. ಅವರಿಗೆ ಕೊನೆಗಾಲದಲ್ಲಿ ಯಾವುದೇ ನೋವು ನೀಡುವುದು ಅಷ್ಟು ಸೂಕ್ತವಲ್ಲ.

ಇದೆಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಕಾಡುವುದು ಮರಣದ ನಂತರ ತಮ್ಮ ಅಂತ್ಯಕ್ರಿಯೆ ಎಷ್ಟು ಅಚ್ಚುಕಟ್ಟಾಗಿ ಪದ್ಧತಿಯನುಸಾರ ಜರುಗುತ್ತದೆ ಎಂಬುದು. ಜತೆಗೆ ಕೆಲವರಿಗೆ ತಮ್ಮ ದೇಹ ಮತ್ತೊಬ್ಬರಿಗೆ ಉಪಯೋಗವಾಗಬೇಕು ಎಂಬ ಬಯಕೆಯೂ ಇರುತ್ತದೆ. ಅದರ ಬಗ್ಗೆ ಅವರು ಮೊದಲೇ ತೀರ್ಮಾನಿಸಿ ಅಂಗಾಂಗ, ದೇಹದಾನ ಕುರಿತು ಕುಟುಂಬದ ಆಪ್ತರೊಡನೆ ಸಮಾಲೋಚನೆ ನಡೆಸುತ್ತಿರುತ್ತಾರೆ. ಅವುಗಳನ್ನು ಈಡೇರಿಸುವ ಜವಾಬ್ದಾರಿಯನ್ನು ಹೊರುವುದು ಮಕ್ಕಳಾದ ನಮ್ಮ ಕರ್ತವ್ಯ.

ಡಾ. ರಾಜ್ ಕುಮಾರ್‌ರಂತೆ ನಾವೂ ನೇತ್ರದಾನ ಮಾಡಬೇಕು ಎಂದುಕೊಳ್ಳುವ ಸಾಕಷ್ಟು ಹಿರಿಯರನ್ನು ನಾವು ನೋಡಿದ್ದೇವೆ. ಅಂಗಾಂಗಗಳನ್ನು ದಾನ ಮಾಡಬೇಕು ಎಂದುಕೊಂಡಿರುವವರು ಸಾಕಷ್ಟಿದ್ದಾರೆ. ಇದು ಸಾಕಷ್ಟು ಹಿರಿಯರ ಬಯಕೆಯಾಗಿದ್ದರೂ ಅದನ್ನು ಹಂಚಿಕೊಳ್ಳುವ ಧೈರ್ಯ ಅವರಿಗೆ ಕಡಿಮೆ. ಬದುಕಿನುದ್ದಕ್ಕೂ ಸವಾಲುಗಳನ್ನು ಎದುರಿಸಿ ಉತ್ತಮ ಬದುಕು ಕಟ್ಟಿಕೊಂಡ ಹಿರಿಯರಿಗೆ ಅವರ ಕಾಲಾನಂತರವೂ ಮತ್ತೊಬ್ಬರಿಗೆ ನೆರವಾಗಬೇಕು ಎಂಬ ಬಯಕೆ ಸದಾ ಇರುತ್ತದೆ.

ಈ ಸಂದರ್ಭದಲ್ಲಿ ಒಂದು ಘಟನೆಯನ್ನು ನೆನಪಿಸಲು ಇಚ್ಛಿಸುತ್ತೇನೆ. ನನಗೆ ತಿಳಿದ ಹಿರಿಯರೊಬ್ಬರು ತಮ್ಮ ಇಳಿವಯಸ್ಸಿನಲ್ಲಿ ಅವರ ಮಗ ನೋಡಿಕೊಳ್ಳಲಿಲ್ಲ ಎಂದು ಬೇಸರಗೊಂಡು ವೃದ್ಧಾಶ್ರಮವನ್ನು ಸೇರಿಕೊಂಡರು. ಅಲ್ಲಿಯೇ ಒಂದಿಷ್ಟು ವರ್ಷ ದೂಡಿದ ಅವರು, ಕೊನೆಗಾಲದಲ್ಲಿ ವೃದ್ಧಾಶ್ರಮದವರಿಗೆ ನನ್ನ ದೇಹವನ್ನು ದಯವಿಟ್ಟು ದಾನ ಮಾಡಿಬಿಡಿ. ನನ್ನ ಮಗ ಬಂದು ಕೇಳಿದರೆ ಕೊಡಬೇಡಿ ಎಂದು ಕೇಳಿಕೊಂಡಿದ್ದರು. ಆದರೂ ಅವರ ಆಸೆ ಈಡೇರದೆ ಹಠಕ್ಕೆ ಬಿದ್ದ ಮಗ ಅವರ ದೇಹವನ್ನು ಅಂತ್ಯಕ್ರಿಯೆ ಮಾಡಿದ. ಇರುವಾಗ ಒಂದು ತುತ್ತು ಅನ್ನ ಹಾಕದವರು, ಸತ್ತಾಗ ತಂದೆಯ ಆಸೆಯಂತಾದರೂ ದೇಹವನ್ನು ದಾನ ಮಾಡಲು ಬಿಡದೆ, ಅಂತ್ಯಸಂಸ್ಕಾರ ನೆರವೇರಿಸಿ ಅಪರ ಕಾರ್ಯವನ್ನು ಮಾಡುವುದು ಎಷ್ಟರಮಟ್ಟಿಗೆ ಸರಿ? ಈ ಬಗ್ಗೆ ನಾವು ಚಿಂತಿಸುವುದು ಅವಶ್ಯ.

ಭಗವದ್ಗೀತೆಯ ಉಲ್ಲೇಖದಂತೆ ಆತ್ಮ ಮತ್ತು ದೇಹ ಜೀವನದ ನಿಜವಾದ ಸಂಗಾತಿಗಳು. ಹಾಗಾಗಿ ನಮ್ಮ ದೇಹದ ಮೇಲೆ ನಮಗೆ ಅಧಿಕಾರವಿರುತ್ತದೆ. ನಾವು ಸತ್ತ ಮೇಲೂ ಆ ದೇಹ ಏನಾಗಬೇಕು ಎಂಬ ನಿರ್ಧಾರವನ್ನು ನಾವೇ ತೆಗೆದುಕೊಳ್ಳಬಹುದಾಗಿದೆ. ಹಾಗಾಗಿ ಹಿರಿಯರ ನಿರ್ಧಾರವನ್ನು ಗೌರವಿಸುವುದು, ಅವರ ಬಯಕೆಗಳನ್ನು ಈಡೇರಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಈ ಸಂದರ್ಭದಲ್ಲಿ ಡಾ. ರಾಜ್ ಕುಮಾರ್ ರವರನ್ನು ಸ್ಮರಿಸುವುದು ಅತ್ಯಗತ್ಯ. ಅವರ ಅಭಿಮಾನಿಯಾಗಿರುವ ಹಿರಿಜೀವಗಳು ಅವರಂತೆಯೇ ನೇತ್ರದಾನಕ್ಕೆ ಮುಂದಾಗಿರುವುದು ನಿಜಕ್ಕೂ ಮೆಚ್ಚುವ ಕೆಲಸ. ಹಿರಿಯರ ಆಸರೆಯಲ್ಲಿ ಕಿರಿಯರು ಬದುಕುತ್ತಾರೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ.

 

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

3 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

3 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

3 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

4 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

4 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

4 hours ago