ಅಂಕಣಗಳು

ಕೊನೆಯ ದಿನಗಳ ಆಸೆಗಳನ್ನು ಈಡೇರಿಸಿ

ಸೌಮ್ಯ ಕೋಠಿ, ಮೈಸೂರು.

ಕೊನೆಗಾಲ ಎಂದಾಕ್ಷಣ ಎಲ್ಲರಿಗೂ ಕಣ್ಣಂಚಲ್ಲಿ ನೀರು ಬರುವುದು ಸಹಜ. ಸಾಮಾನ್ಯವಾಗಿ ಹಿರಿಯರಿಗೆ ಕೊನೆಗಾಲದಲ್ಲಿ ಸಾಕಷ್ಟು ಬಯಕೆಗಳಿರುತ್ತವೆ. ಅವುಗಳ ಈಡೇರಿಕೆಗಾಗಿ ಅವರು ಹಾತೊರೆಯುತ್ತಾರೆ. ಅವುಗಳನ್ನು ಅರ್ಥ ಮಾಡಿಕೊಂಡು ಈಡೇರಿಸುವುದು ನಮ್ಮ ಹೊಣೆಗಾರಿಕೆಯಾಗಬೇಕು.

ಆಸ್ತಿವಂತರಾಗಿದ್ದರೆ, ಹತ್ತಾರು ಎಕರೆ ಗದ್ದೆ ತೋಟಗಳಿದ್ದರೆ ಅವುಗಳನ್ನು ತಮ್ಮ ಮಕ್ಕಳಿಗೆ, ಕೊನೆಗಾಲದಲ್ಲಿ ತನ್ನ ಹೆಂಡತಿಗೂ ಆಸರೆಯಾಗಬೇಕು ಎಂಬ ದೃಷ್ಟಿಯನ್ನು ಮನದಲ್ಲಿಟ್ಟುಕೊಂಡು ಆಸ್ತಿಯನ್ನು ವಿಲ್ ಮಾಡಿಡುವವರಿದ್ದಾರೆ. ಇದರ ಬಗ್ಗೆ ಅವರು ಕೊನೆಯ ದಿನಗಳಲ್ಲಿ ಗಂಭೀರವಾಗಿ ಯೋಚಿಸುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರ ನಿರ್ಧಾರವನ್ನು ಗೌರವಿಸುವುದು ಮಕ್ಕಳ ಜವಾಬ್ದಾರಿಯಾಗಿರುತ್ತದೆ. ಅವರಿಗೆ ಕೊನೆಗಾಲದಲ್ಲಿ ಯಾವುದೇ ನೋವು ನೀಡುವುದು ಅಷ್ಟು ಸೂಕ್ತವಲ್ಲ.

ಇದೆಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಕಾಡುವುದು ಮರಣದ ನಂತರ ತಮ್ಮ ಅಂತ್ಯಕ್ರಿಯೆ ಎಷ್ಟು ಅಚ್ಚುಕಟ್ಟಾಗಿ ಪದ್ಧತಿಯನುಸಾರ ಜರುಗುತ್ತದೆ ಎಂಬುದು. ಜತೆಗೆ ಕೆಲವರಿಗೆ ತಮ್ಮ ದೇಹ ಮತ್ತೊಬ್ಬರಿಗೆ ಉಪಯೋಗವಾಗಬೇಕು ಎಂಬ ಬಯಕೆಯೂ ಇರುತ್ತದೆ. ಅದರ ಬಗ್ಗೆ ಅವರು ಮೊದಲೇ ತೀರ್ಮಾನಿಸಿ ಅಂಗಾಂಗ, ದೇಹದಾನ ಕುರಿತು ಕುಟುಂಬದ ಆಪ್ತರೊಡನೆ ಸಮಾಲೋಚನೆ ನಡೆಸುತ್ತಿರುತ್ತಾರೆ. ಅವುಗಳನ್ನು ಈಡೇರಿಸುವ ಜವಾಬ್ದಾರಿಯನ್ನು ಹೊರುವುದು ಮಕ್ಕಳಾದ ನಮ್ಮ ಕರ್ತವ್ಯ.

ಡಾ. ರಾಜ್ ಕುಮಾರ್‌ರಂತೆ ನಾವೂ ನೇತ್ರದಾನ ಮಾಡಬೇಕು ಎಂದುಕೊಳ್ಳುವ ಸಾಕಷ್ಟು ಹಿರಿಯರನ್ನು ನಾವು ನೋಡಿದ್ದೇವೆ. ಅಂಗಾಂಗಗಳನ್ನು ದಾನ ಮಾಡಬೇಕು ಎಂದುಕೊಂಡಿರುವವರು ಸಾಕಷ್ಟಿದ್ದಾರೆ. ಇದು ಸಾಕಷ್ಟು ಹಿರಿಯರ ಬಯಕೆಯಾಗಿದ್ದರೂ ಅದನ್ನು ಹಂಚಿಕೊಳ್ಳುವ ಧೈರ್ಯ ಅವರಿಗೆ ಕಡಿಮೆ. ಬದುಕಿನುದ್ದಕ್ಕೂ ಸವಾಲುಗಳನ್ನು ಎದುರಿಸಿ ಉತ್ತಮ ಬದುಕು ಕಟ್ಟಿಕೊಂಡ ಹಿರಿಯರಿಗೆ ಅವರ ಕಾಲಾನಂತರವೂ ಮತ್ತೊಬ್ಬರಿಗೆ ನೆರವಾಗಬೇಕು ಎಂಬ ಬಯಕೆ ಸದಾ ಇರುತ್ತದೆ.

ಈ ಸಂದರ್ಭದಲ್ಲಿ ಒಂದು ಘಟನೆಯನ್ನು ನೆನಪಿಸಲು ಇಚ್ಛಿಸುತ್ತೇನೆ. ನನಗೆ ತಿಳಿದ ಹಿರಿಯರೊಬ್ಬರು ತಮ್ಮ ಇಳಿವಯಸ್ಸಿನಲ್ಲಿ ಅವರ ಮಗ ನೋಡಿಕೊಳ್ಳಲಿಲ್ಲ ಎಂದು ಬೇಸರಗೊಂಡು ವೃದ್ಧಾಶ್ರಮವನ್ನು ಸೇರಿಕೊಂಡರು. ಅಲ್ಲಿಯೇ ಒಂದಿಷ್ಟು ವರ್ಷ ದೂಡಿದ ಅವರು, ಕೊನೆಗಾಲದಲ್ಲಿ ವೃದ್ಧಾಶ್ರಮದವರಿಗೆ ನನ್ನ ದೇಹವನ್ನು ದಯವಿಟ್ಟು ದಾನ ಮಾಡಿಬಿಡಿ. ನನ್ನ ಮಗ ಬಂದು ಕೇಳಿದರೆ ಕೊಡಬೇಡಿ ಎಂದು ಕೇಳಿಕೊಂಡಿದ್ದರು. ಆದರೂ ಅವರ ಆಸೆ ಈಡೇರದೆ ಹಠಕ್ಕೆ ಬಿದ್ದ ಮಗ ಅವರ ದೇಹವನ್ನು ಅಂತ್ಯಕ್ರಿಯೆ ಮಾಡಿದ. ಇರುವಾಗ ಒಂದು ತುತ್ತು ಅನ್ನ ಹಾಕದವರು, ಸತ್ತಾಗ ತಂದೆಯ ಆಸೆಯಂತಾದರೂ ದೇಹವನ್ನು ದಾನ ಮಾಡಲು ಬಿಡದೆ, ಅಂತ್ಯಸಂಸ್ಕಾರ ನೆರವೇರಿಸಿ ಅಪರ ಕಾರ್ಯವನ್ನು ಮಾಡುವುದು ಎಷ್ಟರಮಟ್ಟಿಗೆ ಸರಿ? ಈ ಬಗ್ಗೆ ನಾವು ಚಿಂತಿಸುವುದು ಅವಶ್ಯ.

ಭಗವದ್ಗೀತೆಯ ಉಲ್ಲೇಖದಂತೆ ಆತ್ಮ ಮತ್ತು ದೇಹ ಜೀವನದ ನಿಜವಾದ ಸಂಗಾತಿಗಳು. ಹಾಗಾಗಿ ನಮ್ಮ ದೇಹದ ಮೇಲೆ ನಮಗೆ ಅಧಿಕಾರವಿರುತ್ತದೆ. ನಾವು ಸತ್ತ ಮೇಲೂ ಆ ದೇಹ ಏನಾಗಬೇಕು ಎಂಬ ನಿರ್ಧಾರವನ್ನು ನಾವೇ ತೆಗೆದುಕೊಳ್ಳಬಹುದಾಗಿದೆ. ಹಾಗಾಗಿ ಹಿರಿಯರ ನಿರ್ಧಾರವನ್ನು ಗೌರವಿಸುವುದು, ಅವರ ಬಯಕೆಗಳನ್ನು ಈಡೇರಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಈ ಸಂದರ್ಭದಲ್ಲಿ ಡಾ. ರಾಜ್ ಕುಮಾರ್ ರವರನ್ನು ಸ್ಮರಿಸುವುದು ಅತ್ಯಗತ್ಯ. ಅವರ ಅಭಿಮಾನಿಯಾಗಿರುವ ಹಿರಿಜೀವಗಳು ಅವರಂತೆಯೇ ನೇತ್ರದಾನಕ್ಕೆ ಮುಂದಾಗಿರುವುದು ನಿಜಕ್ಕೂ ಮೆಚ್ಚುವ ಕೆಲಸ. ಹಿರಿಯರ ಆಸರೆಯಲ್ಲಿ ಕಿರಿಯರು ಬದುಕುತ್ತಾರೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ.

 

ಆಂದೋಲನ ಡೆಸ್ಕ್

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

22 mins ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

49 mins ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

1 hour ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

15 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

15 hours ago