ಅಂಕಣಗಳು

ಕೊನೆಯ ದಿನಗಳ ಆಸೆಗಳನ್ನು ಈಡೇರಿಸಿ

ಸೌಮ್ಯ ಕೋಠಿ, ಮೈಸೂರು.

ಕೊನೆಗಾಲ ಎಂದಾಕ್ಷಣ ಎಲ್ಲರಿಗೂ ಕಣ್ಣಂಚಲ್ಲಿ ನೀರು ಬರುವುದು ಸಹಜ. ಸಾಮಾನ್ಯವಾಗಿ ಹಿರಿಯರಿಗೆ ಕೊನೆಗಾಲದಲ್ಲಿ ಸಾಕಷ್ಟು ಬಯಕೆಗಳಿರುತ್ತವೆ. ಅವುಗಳ ಈಡೇರಿಕೆಗಾಗಿ ಅವರು ಹಾತೊರೆಯುತ್ತಾರೆ. ಅವುಗಳನ್ನು ಅರ್ಥ ಮಾಡಿಕೊಂಡು ಈಡೇರಿಸುವುದು ನಮ್ಮ ಹೊಣೆಗಾರಿಕೆಯಾಗಬೇಕು.

ಆಸ್ತಿವಂತರಾಗಿದ್ದರೆ, ಹತ್ತಾರು ಎಕರೆ ಗದ್ದೆ ತೋಟಗಳಿದ್ದರೆ ಅವುಗಳನ್ನು ತಮ್ಮ ಮಕ್ಕಳಿಗೆ, ಕೊನೆಗಾಲದಲ್ಲಿ ತನ್ನ ಹೆಂಡತಿಗೂ ಆಸರೆಯಾಗಬೇಕು ಎಂಬ ದೃಷ್ಟಿಯನ್ನು ಮನದಲ್ಲಿಟ್ಟುಕೊಂಡು ಆಸ್ತಿಯನ್ನು ವಿಲ್ ಮಾಡಿಡುವವರಿದ್ದಾರೆ. ಇದರ ಬಗ್ಗೆ ಅವರು ಕೊನೆಯ ದಿನಗಳಲ್ಲಿ ಗಂಭೀರವಾಗಿ ಯೋಚಿಸುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರ ನಿರ್ಧಾರವನ್ನು ಗೌರವಿಸುವುದು ಮಕ್ಕಳ ಜವಾಬ್ದಾರಿಯಾಗಿರುತ್ತದೆ. ಅವರಿಗೆ ಕೊನೆಗಾಲದಲ್ಲಿ ಯಾವುದೇ ನೋವು ನೀಡುವುದು ಅಷ್ಟು ಸೂಕ್ತವಲ್ಲ.

ಇದೆಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಕಾಡುವುದು ಮರಣದ ನಂತರ ತಮ್ಮ ಅಂತ್ಯಕ್ರಿಯೆ ಎಷ್ಟು ಅಚ್ಚುಕಟ್ಟಾಗಿ ಪದ್ಧತಿಯನುಸಾರ ಜರುಗುತ್ತದೆ ಎಂಬುದು. ಜತೆಗೆ ಕೆಲವರಿಗೆ ತಮ್ಮ ದೇಹ ಮತ್ತೊಬ್ಬರಿಗೆ ಉಪಯೋಗವಾಗಬೇಕು ಎಂಬ ಬಯಕೆಯೂ ಇರುತ್ತದೆ. ಅದರ ಬಗ್ಗೆ ಅವರು ಮೊದಲೇ ತೀರ್ಮಾನಿಸಿ ಅಂಗಾಂಗ, ದೇಹದಾನ ಕುರಿತು ಕುಟುಂಬದ ಆಪ್ತರೊಡನೆ ಸಮಾಲೋಚನೆ ನಡೆಸುತ್ತಿರುತ್ತಾರೆ. ಅವುಗಳನ್ನು ಈಡೇರಿಸುವ ಜವಾಬ್ದಾರಿಯನ್ನು ಹೊರುವುದು ಮಕ್ಕಳಾದ ನಮ್ಮ ಕರ್ತವ್ಯ.

ಡಾ. ರಾಜ್ ಕುಮಾರ್‌ರಂತೆ ನಾವೂ ನೇತ್ರದಾನ ಮಾಡಬೇಕು ಎಂದುಕೊಳ್ಳುವ ಸಾಕಷ್ಟು ಹಿರಿಯರನ್ನು ನಾವು ನೋಡಿದ್ದೇವೆ. ಅಂಗಾಂಗಗಳನ್ನು ದಾನ ಮಾಡಬೇಕು ಎಂದುಕೊಂಡಿರುವವರು ಸಾಕಷ್ಟಿದ್ದಾರೆ. ಇದು ಸಾಕಷ್ಟು ಹಿರಿಯರ ಬಯಕೆಯಾಗಿದ್ದರೂ ಅದನ್ನು ಹಂಚಿಕೊಳ್ಳುವ ಧೈರ್ಯ ಅವರಿಗೆ ಕಡಿಮೆ. ಬದುಕಿನುದ್ದಕ್ಕೂ ಸವಾಲುಗಳನ್ನು ಎದುರಿಸಿ ಉತ್ತಮ ಬದುಕು ಕಟ್ಟಿಕೊಂಡ ಹಿರಿಯರಿಗೆ ಅವರ ಕಾಲಾನಂತರವೂ ಮತ್ತೊಬ್ಬರಿಗೆ ನೆರವಾಗಬೇಕು ಎಂಬ ಬಯಕೆ ಸದಾ ಇರುತ್ತದೆ.

ಈ ಸಂದರ್ಭದಲ್ಲಿ ಒಂದು ಘಟನೆಯನ್ನು ನೆನಪಿಸಲು ಇಚ್ಛಿಸುತ್ತೇನೆ. ನನಗೆ ತಿಳಿದ ಹಿರಿಯರೊಬ್ಬರು ತಮ್ಮ ಇಳಿವಯಸ್ಸಿನಲ್ಲಿ ಅವರ ಮಗ ನೋಡಿಕೊಳ್ಳಲಿಲ್ಲ ಎಂದು ಬೇಸರಗೊಂಡು ವೃದ್ಧಾಶ್ರಮವನ್ನು ಸೇರಿಕೊಂಡರು. ಅಲ್ಲಿಯೇ ಒಂದಿಷ್ಟು ವರ್ಷ ದೂಡಿದ ಅವರು, ಕೊನೆಗಾಲದಲ್ಲಿ ವೃದ್ಧಾಶ್ರಮದವರಿಗೆ ನನ್ನ ದೇಹವನ್ನು ದಯವಿಟ್ಟು ದಾನ ಮಾಡಿಬಿಡಿ. ನನ್ನ ಮಗ ಬಂದು ಕೇಳಿದರೆ ಕೊಡಬೇಡಿ ಎಂದು ಕೇಳಿಕೊಂಡಿದ್ದರು. ಆದರೂ ಅವರ ಆಸೆ ಈಡೇರದೆ ಹಠಕ್ಕೆ ಬಿದ್ದ ಮಗ ಅವರ ದೇಹವನ್ನು ಅಂತ್ಯಕ್ರಿಯೆ ಮಾಡಿದ. ಇರುವಾಗ ಒಂದು ತುತ್ತು ಅನ್ನ ಹಾಕದವರು, ಸತ್ತಾಗ ತಂದೆಯ ಆಸೆಯಂತಾದರೂ ದೇಹವನ್ನು ದಾನ ಮಾಡಲು ಬಿಡದೆ, ಅಂತ್ಯಸಂಸ್ಕಾರ ನೆರವೇರಿಸಿ ಅಪರ ಕಾರ್ಯವನ್ನು ಮಾಡುವುದು ಎಷ್ಟರಮಟ್ಟಿಗೆ ಸರಿ? ಈ ಬಗ್ಗೆ ನಾವು ಚಿಂತಿಸುವುದು ಅವಶ್ಯ.

ಭಗವದ್ಗೀತೆಯ ಉಲ್ಲೇಖದಂತೆ ಆತ್ಮ ಮತ್ತು ದೇಹ ಜೀವನದ ನಿಜವಾದ ಸಂಗಾತಿಗಳು. ಹಾಗಾಗಿ ನಮ್ಮ ದೇಹದ ಮೇಲೆ ನಮಗೆ ಅಧಿಕಾರವಿರುತ್ತದೆ. ನಾವು ಸತ್ತ ಮೇಲೂ ಆ ದೇಹ ಏನಾಗಬೇಕು ಎಂಬ ನಿರ್ಧಾರವನ್ನು ನಾವೇ ತೆಗೆದುಕೊಳ್ಳಬಹುದಾಗಿದೆ. ಹಾಗಾಗಿ ಹಿರಿಯರ ನಿರ್ಧಾರವನ್ನು ಗೌರವಿಸುವುದು, ಅವರ ಬಯಕೆಗಳನ್ನು ಈಡೇರಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಈ ಸಂದರ್ಭದಲ್ಲಿ ಡಾ. ರಾಜ್ ಕುಮಾರ್ ರವರನ್ನು ಸ್ಮರಿಸುವುದು ಅತ್ಯಗತ್ಯ. ಅವರ ಅಭಿಮಾನಿಯಾಗಿರುವ ಹಿರಿಜೀವಗಳು ಅವರಂತೆಯೇ ನೇತ್ರದಾನಕ್ಕೆ ಮುಂದಾಗಿರುವುದು ನಿಜಕ್ಕೂ ಮೆಚ್ಚುವ ಕೆಲಸ. ಹಿರಿಯರ ಆಸರೆಯಲ್ಲಿ ಕಿರಿಯರು ಬದುಕುತ್ತಾರೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ.

 

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

8 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

8 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

9 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

10 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

10 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

11 hours ago