ಅಂಕಣಗಳು

ಶತಮಾನಗಳು ಕಳೆದಂತೆ ನಲುಗುತ್ತಿರುವ ಹಂಪಿ

• ಅನಿಲ್ ಅಂತರಸಂತೆ

6-7 ಶತಮಾನಗಳ ಹಿಂದೆ ವಿಶ್ವದ ಶ್ರೀಮಂತ ನಗರಗಳಲ್ಲಿ ಒಂದಾಗಿ ಮೆರೆದ ಹಂಪಿ ಈಗ ಹಾಳು ಕೊಂಪೆಯಂತಾಗಿದೆ. ಶತಮಾನಗಳ ಹಿಂದಿನ ವೈಭವ ಕುಂದಿದ್ದು, ಭವ್ಯ ಕಲಾಕೃತಿ, ವಾಸ್ತು ಶಿಲ್ಪ ಭಗ್ನವಾಗಿ ನಿಂತಿವೆ.

1336ರ ವಿದ್ಯಾರಣ್ಯರ ಕಾಲಘಟದಲ್ಲಿ ಮಾರ್ಗ ದರ್ಶನದಂತೆ ಹರಿಹರ, ಬುಕ್ಕರಾಯ ಕಟ್ಟಿ ಬೆಳೆಸಿದ ಸಾಮ್ರಾಜ್ಯವೇ ವಿಜಯನಗರ. ವಿಜಯನಗರದ 2-3 ಶತಮಾನಗಳ ಆಡಳಿತಾವಧಿಯಲ್ಲಿ ಹಂಪಿ ವಿಶ್ವದ ನಾನಾ ಸಾಮ್ರಾಜ್ಯಗಳ ಕಣ್ಣುಕುಕ್ಕುವಂತೆ ವೈಭವದಿಂದ ಮೆರೆದಿತ್ತು. 1565ರಲ್ಲಿ ವಿಜಯನಗರದ ಸುತ್ತಲಿನ ಶತ್ರು ಸುಲ್ತಾನ ಸಾಮ್ರಾಜ್ಯಗಳು ಒಟ್ಟಾಗಿ ನಡೆಸಿದ ತಾಳಿಕೋಟೆ ಕದನದಲ್ಲಿ ವಿಜಯನಗರ ಶರಣಾಗಬೇಕಾಯಿತು. ಯುದ್ಧದಲ್ಲಿ ಸೋತ ಬಳಿಕ
ಪತನದತ್ತ ಸಾಗಿತು. ಕೆಲ ಇತಿಹಾಸದ ದಾಖಲೆಗಳಂತೆ ಅಂದು ಹಂಪಿಯನ್ನು ಆಳಿದ ಮೊಘಲರು ಸುಮಾರು 6 ತಿಂಗಳುಗಳ ಕಾಲ ಹಂಪಿಯ ಸಂಪತ್ತನ್ನು ದೋಚಿದರು, ಹಂಪಿಯ ಕಲಾವೈಭವವನ್ನು ಭಗ್ನ ಮಾಡಿದರು, ಹಂಪಿಗೆ ಬೆಂಕಿಯಿಟ್ಟು ನಾಶ ಮಾಡಿದರು ಎಂಬುದಾಗಿದೆ.

ಕೃಷ್ಣದೇವರಾಯನ ಕಾಲ ದಲ್ಲಿ ಉತ್ತುಂಗದಲ್ಲಿದ್ದ ಹಂಪಿಯ ವೈಭವದ ಬೀದಿ ಬೀದಿಗಳಲ್ಲಿ ವಜ್ರಾಭರಣ ಗಳನ್ನು ತೂಕದ ಮಾದರಿಯಲ್ಲಿ ಮಾರಲಾ ಗುತ್ತಿತ್ತೆಂತೆ. ಅಷ್ಟು ಸಂಪತ್ತನ್ನು ಆರು ತಿಂಗಳುಗಳ ಕಾಲ ಶತ್ರುಗಳು ದೋಚಿದರು ಎಂದರೆ ಹಂಪಿಯ ಆ ವೈಭವವನ್ನು ಊಹಿಸಲು ಅಸಾಧ್ಯ.

ದಕ್ಷಿಣ ಭಾರತವನ್ನು ಒಗ್ಗೂಡಿಸಿ, ಉತ್ತರದ ತುಘಲಕ್, ದೆಹಲಿಯ ಸುಲ್ತಾನರು, ವಿದೇಶಿಯ ಸಾಮ್ರಾಜ್ಯಗಳು ದಕ್ಷಿಣ ಭಾರತದತ್ತ ದಂಡೆತ್ತಿ ಬಾರದಂತೆ ಯಶಸ್ವಿಯಾಗಿ ತಡೆಯುವಷ್ಟರ ಮಟ್ಟಗೆ ಇಲ್ಲಿನ ಆಡಳಿತ ಬಲಿಷ್ಠವಾಗಿತ್ತು. ಹೀಗೆ ದಕ್ಷಿಣ ಭಾರತವನ್ನೇ ಒಂದಾಗಿಸಿದ್ದ ಆಳಿದ ವಿಜಯನಗರ ಸಾಮ್ರಾಜ್ಯ (ಹಂಪಿ) ಪ್ರಸ್ತುತದ ರಾಜ ಕೀಯ ಕಾರಣ ಕ್ಕಾಗಿಯೋ, ಆಡಳಿತದ ಹಿತಕ್ಕಾಗಿ, ಜನರ ಅಭಿ ವೃದ್ಧಿಯ ದೃಷ್ಟಿಯಿಂದಲೋ ಕೊಪ್ಪಳ, ಬಳ್ಳಾರಿ ಎಂಬ ಜಿಲ್ಲೆಗಳಾಗಿ ಬೇಲ್ಪಟ್ಟಿತು. ಇತ್ತೀಚೆಗೆ ಬಳ್ಳಾರಿ ಯಿಂದ ಹೊಸ ಜಿಲ್ಲೆಯೊಂದನ್ನು ಸೃಜಿಸಿ ರಾಜ್ಯದ 31ನೇ ಜಿಲ್ಲೆಯಾಗಿ ಗುರುತಿಸಿ ‘ವಿಜಯನಗರ’ ಎಂಬ ಹೆಸರಿಡಲಾಗಿದೆ.

ಅಂದು ಕೃಷ್ಣಯಿಂದ ತುಂಗಾಭದ್ರಾ, ಕಾವೇರಿಯ ಜಲಾನಯನ ಪ್ರದೇಶದವರೆಗೂ ಹರಡಿದ್ದ ಹಂಪಿ ಈಗ 3 ಭಾಗವಾಗಿದೆ. ಅಂದು ವೈಭವದಿಂದ ಕಂಗೊಳಿಸಿದ್ದ ಈ ಸ್ಥಳ ಈಗ ಅಭಿವೃದ್ಧಿಗಾಗಿ ಹಾತೊರೆಯುತ್ತಿದೆ. ಅಂದು ಜನಸಂಖ್ಯೆಯಲ್ಲಿ ಬೀಜಿಂಗ್ ನಂತರದ ಎರಡನೇ ಸ್ಥಾನದಲ್ಲಿದ್ದ ವಿಜಯನಗರಕ್ಕೆ ಈಗ ಜನಸಂಖ್ಯೆಗೆ ಅನುಗುಣವಾಗುವಂತೆ ಅನುದಾನಗಳನ್ನು ತಂದು ಅಭಿವೃದ್ಧಿಪಡಿಸುವ ಜತೆಗೆ ಇಲ್ಲಿನ ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ ಮತ್ತು ಪ್ರತಿ ನಗರಗಳಲ್ಲಿಯೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಪ್ರವಾಸಿ ತಾಣಗಳಲ್ಲಿ ಅಲ್ಲಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯುವುದರೊಂದಿಗೆ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿ ಹಂಪಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಿದೆ.

ಇಲ್ಲಿನ ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತದ ಕಲ್ಲಿನ ಕಂಬಗಳು, ಕಲ್ಲಿನ ರಥ, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪತಿ, ಉಗ್ರನರಸಿಂಹ, ಕಮಲ ಮಹಲ್, ಬಡವಿ ಲಿಂಗ, ಆನೆ
ಲಾಯ ಸೇರಿದಂತೆ ಅನೇಕ ತಾಣಗಳು ಹಂಪಿಯ ಆ ದಿನಗಳ ಭವ್ಯ ಇತಿಹಾಸವನ್ನು ಸಾರುತ್ತಿವೆ. ಈ ಸ್ಥಳಗಳಲ್ಲಿ ಒಂದಿಷ್ಟು ಪ್ರವಾಸಿಗರಿಗೆ ಅನುಕೂಲಕರ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕಿದೆ.

ಒಟ್ಟಾರೆ ಕರ್ನಾಟಕದ ಭವ್ಯ ಪರಂಪರೆಯೊಂದು ದುರಂತ ಅಂತ್ಯ ಕಂಡಿದ್ದು, ಹಂಪಿಗೆ ಭೇಟಿ ನೀಡಿದ ಕನ್ನಡಿಗರ ಕಣ್ಣಂಚಲ್ಲಿ ನೀರು ತರಿಸುವುದಂತೂ ನಿಜ. ಸದ್ಯ ಉಳಿದಿರುವ ಹಾಳು ಹಂಪಿಯನ್ನಾದರೂ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಂಪಿ ಇತಿಹಾಸ ಹೇಳುವಂತಾಗಲಿ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

1 hour ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

15 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

16 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

16 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

17 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

18 hours ago