ಅಂಕಣಗಳು

ಕಾಡು ಪ್ರಾಣಿಗಳ ಹಾವಳಿಗೆ ಇಲ್ಲೊಂದು ಪರ್ಯಾಯ ಬೆಳೆ

ಕಾಡು ಪ್ರಾಣಿಗಳ ಹಾವಳಿಯಿಂದ ನಿರಂತರವಾಗಿ ಬೆಳೆಹಾನಿ, ಪ್ರಾಣಹಾನಿಯನ್ನು ಅನುಭವಿಸುತ್ತಲೇ ಬಂದಿರುವ ಕಾಡಂಚಿನ ಗ್ರಾಮಗಳ ರೈತರು ಇದೀಗ ಪರ್ಯಾಯ ಬೆಳೆಗಳತ್ತ ದೃಷ್ಟಿ ಹಾಯಿಸಿದ್ದು, ಕಾಡುಪ್ರಾಣಿಗಳಿಂದ ಪಾರಾಗುವ ಆಶಾಭಾವನೆ ಮೂಡಿದೆ.

ಕಾಡಂಚಿನ ರೈತರು ಈಗ ‘ಚಿಯಾ’ ಎಂಬ ದಕ್ಷಿಣ ಮೆಕ್ಸಿಕೋ ಮೂಲದ ಬೆಳೆ ಬೆಳೆಯುವತ್ತ ಗಮನಹರಿಸಿ ದ್ದಾರೆ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳು, ಚಾಮರಾಜನಗರ ಜಿಲ್ಲೆಯ ಕಾಡಂಚಿನ ಪ್ರದೇಶಗಳಲ್ಲಿ ಮಿತಿಮೀರಿದ ಕಾಡಾನೆ ಹಾಗೂ ಕಾಗ ಹಂದಿಗಳು ಜಮೀನಿಗೆ ನುಗ್ಗಿ ಜೋಳ, ರಾಗಿ, ಬಾಳೆ ಬೆಳೆಗಳನ್ನು ನಾಶಪಡಿಸುತ್ತಿವೆ. ಇದರಿಂದ ರೈತರು ವಾರ್ಷಿಕ ಲಕ್ಷಾಂತರ ರೂ. ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಬೇಸತ್ತ ಅನ್ನದಾತರು ಪರ್ಯಾಯ ಬೆಳೆಗಳತ್ತ ಗಮನ ಹರಿಸುತ್ತಿದ್ದಾರೆ. ಮೈಸೂರಿನಲ್ಲಿರುವ ಕೇಂದ್ರಿಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್ ಟಿಆ‌ರ್ಐ) ಅಧಿಕಾರಿಗಳು ಎಚ್.ಡಿ.ಕೋಟೆ ವ್ಯಾಪ್ತಿಯಲ್ಲಿ ಚಿಯಾ ಬೆಳೆಗೆ ಉತ್ತೇಜನ ನೀಡಿದ್ದರು. ಅಲ್ಲಿ ಯೋಜನೆ ಸಫಲತೆ ಕಂಡ ಬಳಿಕ ಚಾಮರಾಜನಗರದ ರೈತರೂ ಮಾಹಿತಿ ಪಡೆದು ‘ಚಿಯಾ’ ಬೆಳೆಯತ್ತ ಮುಖ ಮಾಡಿದ್ದಾರೆ. ‘ಚಿಯಾ’ ಎಳ್ಳು ಮಾದರಿಯಲ್ಲಿರುವುದರಿಂದ ಕಾಡು ಪ್ರಾಣಿಗಳು ಇದನ್ನು ತಿನ್ನಲು ಬರುವುದಿಲ್ಲ. ಹೀಗಾಗಿ ಅವುಗಳಿಂದ ಈ ಬೆಳೆಗೆ ಯಾವುದೇ ಹಾನಿಯಾಗುವುದಿಲ್ಲ.

ಎಲ್ಲೆಲ್ಲಿ ಬೆಳೆದಿದ್ದಾರೆ?

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ಹುಣಸೂರು, ನಂಜನಗೂಡು ತಾಲ್ಲೂಕುಗಳ ಕಾಡಂಚಿನ ಗ್ರಾಮಗಳು, ಚಾಮರಾಜನಗರದ ಕಾಡಂಚಿನ ಗ್ರಾಮಗಳಾದ ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿಪಡಗ (ರಂಗಸಂದ್ರ), ದೊಡ್ಡ ಮೂಡಳ್ಳಿ, ಚಿಕ್ಕ ಮೂಡಳ್ಳಿ, ಕೋಳಿಪಾಳ್ಯ, ವೀರಯ್ಯನ ಪುರ, ಮೂಕನ ಪಾಳ್ಯ, ಅಟ್ಟುಗೂಳಿಪುರ * ಅಖಂ ವ್ಯಾಪ್ತಿಯ ಕುಳ್ಳೂರು ಸೇರಿದಂತೆ ಸುಮಾರು 20 ರಿಂದ 25 ಹೆಕ್ಟೇರ್ ಪ್ರದೇಶದಲ್ಲಿ ರೈತರು ‘ಚಿಯಾ’ ಬೇಸಾಯ ಮಾಡುತ್ತಿದ್ದಾರೆ.

ಕಡಿಮೆ ಖರ್ಚು, ಆದಾಯ ಹೆಚ್ಚು: ‘ಚಿಯಾ’ ಬೆಳೆಗೆ ಕಡಿಮೆ ವೆಚ್ಚ ತಗುಲುತ್ತಿದ್ದು, ರೈತರಿಗೆ ಹೊರೆಯಾಗುವುದಿಲ್ಲ. ಅಲ್ಲದೇ ಇದರಿಂದ ಆದಾಯವೂ ಹೆಚ್ಚಾಗಿದೆ. ಔಷಧಿ ಗುಣಲಕ್ಷಣ ಗಳು ಹಾಗೂ ಪೌಷ್ಟಿಕಾಂಶ ಹೊಂದಿರುವ ‘ಚಿಯಾ’ ಬೆಳೆಯನ್ನು ಕಾಡುಪ್ರಾಣಿಗಳ ಹಾವಳಿ ಇಲ್ಲದೆ ನೆಮ್ಮದಿ ಯಿಂದ ಬೆಳೆಯಬಹುದಾಗಿದೆ. ಜಿಲ್ಲೆಯ ಯುವ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಚಿಯಾ ಬೆಳೆ ಕುರಿತು ಮಾಹಿತಿ ಪಡೆದು ಬೆಳೆ ಬೆಳೆಯಲು ಮುಂದಾಗಿದ್ದಾರೆ. ಅತಿಯಾದ ನೀರಿನ ಅವಲಂಬನೆ ಇಲ್ಲದ ಬೆಳೆಯುವ ಬೆಳೆ ಇದಾಗಿದ್ದು, ವೈಜ್ಞಾನಿಕವಾಗಿ ‘ಚಿಯಾ’ ಎಂದು ಕರೆಸಿಕೊಳ್ಳುವ ಈ ಬೆಳೆಗೆ ಸ್ಥಳೀಯರು ‘ಗೇಲ್’ ಎಂದು ಹೆಸರಿಟ್ಟಿದ್ದಾರೆ.

ಚಿಯಾ ಗುಣಲಕ್ಷಣಗಳು: ಚಿಯಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಬೇಡಿಕೆ ಇರುವ ಸಿರಿಧಾನ್ಯವಾಗಿದ್ದು, ವಾರಕ್ಕೊಂದು ಬಾರಿ ತುಂತುರು ನೀರಾವರಿ ನೀಡಿದರೆ ಸಾಕು. ಒಂದು ಎಕರೆ ಪ್ರದೇಶಕ್ಕೆ 3 ರಿಂದ 4 ಸಾವಿರ ರೂ. ವೆಚ್ಚ ತಗುಲಲಿದೆ. ಪೈರು ಬೆಳೆಸಿ ನಾಟಿ ಅಥವಾ ಬೀಜವನ್ನು ನೇರವಾಗಿ ಸಾಲು ಬಿಟ್ಟು ಬೆಳೆಯಬಹುದು. ಒಮ್ಮೆ ಮಾತ್ರ ರಾಸಾಯನಿಕ ಗೊಬ್ಬರ ನೀಡಿದರೆ ಸಾಕು, ದಟ್ಟ ಹಸಿರು ಬಣ್ಣದ ಗಿಡದಲ್ಲಿ ಬೀಜಗಳಾಗುತ್ತವೆ. ನಂತರ ಬೀಜಗಳನ್ನು ಬೇರ್ಪಡಿಸಿ ಮಾರಾಟ ಮಾಡಲಾಗುತ್ತದೆ. ನಾಟಿ ಮಾಡಿದ ನಂತರ 90ರಿಂದ 100 ದಿನಗಳಲ್ಲಿ ಕೊಯ್ಲಿಗೆ ಬೆಳೆ ಸಿದ್ಧವಾಗುತ್ತದೆ. ಎಕರೆಗೆ 3 ರಿಂದ 4 ಕ್ವಿಂಟಾಲ್ ಇಳುವರಿ ಸಿಗಲಿದೆ. ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ಗೆ 10ರಿಂದ 35 ಸಾವಿರ ರೂ. ವರೆಗೂ ಮಾರಾಟವಾಗುತ್ತದೆ. ಜಿಲ್ಲೆಯಲ್ಲಿ ಅಂದಾಜು 200 ಎಕರೆ ವ್ಯಾಪ್ತಿಯಲ್ಲಿ ‘ಚಿಯಾ’ ಬೆಳೆ ಬೆಳೆಯಲಾಗಿದ್ದು, ಮುಂದಿನ ದಿನಗಳಲ್ಲಿ ಇದರ ವ್ಯಾಪ್ತಿ ಹೆಚ್ಚಾಗುವ ಸಾಧ್ಯತೆಯಿದೆ.

 

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

39 mins ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

40 mins ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

43 mins ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

45 mins ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

46 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

49 mins ago