ಅಂಕಣಗಳು

ಹಿಟ್ ಅಂಡ್ ರನ್ ಹೊಸ ನಿಯಮ ಸಾಧಕ-ಬಾಧಕ

• ವಿವೇಕ ಕಾರಿಯಪ್ಪ, ಪ್ರಗತಿಪರ ರೈತ, ಚಿಂತಕ

ಹಿಟ್‌ ಅಂಡ್ ರನ್ ಅಪಘಾತ ಪ್ರಕರಣಗಳ ಸಂಬಂಧ ಕೇಂದ್ರ ಸರ್ಕಾರವು ಇತ್ತೀಚೆಗೆ ಹೊಸ ನಿಯಮವನ್ನು ಜಾರಿಗೊಳಿಸಿದ್ದು, ತಪ್ಪಿತಸ್ಥ ವಾಹನ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ. ಗಳವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಿದೆ. ಇದು ಬಹುತೇಕ ಟ್ರಕ್‌ಗಳು ಮತ್ತು ಲಾರಿ ಚಾಲಕರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲ್ಪಟ್ಟಿರುವ ನಿಯಮವಾಗಿದೆ. ಆದರೆ, ದ್ವಿಚಕ್ರ ವಾಹನ ಸೇರಿದಂತೆ ಎಲ್ಲ ಬಗೆಯ ಚಾಲಕರಿಗೂ ಈ ಹೊಸ ನಿಯಮ ಅನ್ವಯವಾಗುತ್ತದೆ. ಇದು ಚಾಲಕರ ಶೋಷಣೆಗೆ ಮತ್ತೊಂದು ದಾರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.

ಹಿಟ್ ಅಂಡ್ ರನ್ ಅಪಘಾತದ ಬಹಳಷ್ಟು ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯ ಇರುತ್ತದೆ. ಅದನ್ನು ಮೀರಿದ ಒಂದಿಷ್ಟು ನಿಜಾಂಶಗಳನ್ನು ಸಮಚಿತ್ತದಿಂದ ಅವಲೋಕಿಸುವುದು ಅಗತ್ಯ. ಹಾಗಾಗಿ ಆಟೊ ಮೊಬೈಲ್ಸ್ ಅಸೋಸಿಯೇಷನ್‌, ಈ ಹೊಸ ನಿಯಮವನ್ನು ವಿರೋಧಿಸುತ್ತಿರುವುದರ ಹಿಂದೆ ವಾಸ್ತವತೆ ಅರಿವು ಇದೆ ಎನ್ನಬಹುದು. ಪೊಲೀಸರು, ಹಿಟ್ ಅಂಡ್ ರನ್ ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿ ಚಾಲಕರಿಂದ ಲಂಚ ಪಡೆಯುವ ಸಾಧ್ಯತೆಯೂ ಇದೆ.

ಇದಕ್ಕೆ ಸಂಬಂಧಿಸಿದಂತೆ ನನ್ನದೇ ಅನುಭವ ಇದೆ. ಸುಮಾರು 25 ವರ್ಷಗಳ ಹಿಂದೆ ಮೈಸೂರಿನಲ್ಲಿ ನಾನು ರೈತರ ರಾಲಿಯೊಂದರಲ್ಲಿ ಪಾಲ್ಗೊಂಡ ಬಳಿಕ, ನನ್ನ ಜೀಪ್ ನಲ್ಲಿ ಊರಿಗೆ ಹಿಂದಿರುಗುತ್ತಿದ್ದೆ. ದಾರಿಯಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಕೆಳಗೆ ಬಿದ್ದುಬಿಟ್ಟ, ಸ್ವಲ್ಪ ದೊಡ್ಡ ಪ್ರಮಾಣದಲ್ಲೇ ಗಾಯಗೊಂಡಿದ್ದ. ಕೂಡಲೇ ಆತನನ್ನು ನಾನು, ಕೆ.ಆರ್.ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದೆ. ನಂತರ ಸಂಬಂಧಪಟ್ಟ ಪೊಲೀಸರಿಗೂ ವಿಷಯ ತಿಳಿಸಿದೆ. ಅವರು ಬಂದ ನಂತರ ನಾನು ಮನೆಗೆ ಹಿಂದಿರುಗಿದ್ದೆ.

ಮಾರನೇ ದಿನ ಬೆಳಿಗ್ಗೆ ಪೊಲೀಸರು, ನನಗೆ ಫೋನ್ ಮಾಡಿದರು. ನಿಮ್ಮ ವಾಹನ ತೆಗೆದುಕೊಂಡು ನ್ಯಾಯಾಲಯಕ್ಕೆ ಬರಬೇಕು. ನಿಮ್ಮ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಲಾಗಿದೆ ಎಂದರು.

ನಂತರ ಅದೇನೋ ಆಯಿತು ಬಿಡಿ. ಆದರೆ, ಹೊಸ ನಿಯಮದಿಂದ ಇಂತಹ ದುರುಪಯೋಗ ಹೆಚ್ಚಾಗುತ್ತವೆ ಎಂಬುದೇ ನನ್ನ ಆತಂಕ.

ವಾಹನಗಳ ಚಾಲಕರಿಗೂ ಕುಟುಂಬ ಇರುತ್ತದೆ. ಅದಕ್ಕಾಗಿ ಅವರು ಹಗಲಿರುಳು ಶ್ರಮಿಸುತ್ತಿರುತ್ತಾರೆ ಎಂಬುದನ್ನೂ ಗಮನಿಸಬೇಕು. ಹಾಗಾಗಿ ಯಾರೂ ಉದ್ದೇಶ ಪೂರ್ವಕವಾಗಿ ಅಪಘಾತ ಉಂಟು ಮಾಡು ವುದಿಲ್ಲ. ಕೆಲವೊಮ್ಮೆ ಅಪಘಾತ ನಡೆಸಿದ ಚಾಲಕರು, ಸ್ಥಳದಿಂದ ಸ್ವಲ್ಪ ದೂರ ಹೋಗಿ ವಾಹನ ನಿಲ್ಲಿಸುವ ಇರಾದೆ ಹೊಂದಿರುತ್ತಾರೆ. ಆದರೆ, ಅಲ್ಲಿ ಜಮಾಯಿಸುವ ಸಾರ್ವಜನಿಕರ ಅಬ್ಬರ, ಹಾರಾಟಗಳು ಅವರನ್ನು ಪಲಾಯನ ಮಾಡುವಂತೆ ಪ್ರೇರೇಪಿಸುವುದು ಸಹಜ. ಅಲ್ಲದೆ, ಇಂತಹ ಕಠಿಣ ನಿಯಮಗಳಿಂದ ಒಂದು ರಾಜ್ಯದ ವಾಹನ ಚಾಲಕರು, ಇನ್ನೊಂದು ರಾಜ್ಯಕ್ಕೆ ವಾಹನ ತೆಗೆದುಕೊಂಡು ಹೋಗುವುದಕ್ಕೆ ಹೆದರುವಂತಾಗುತ್ತದೆ. ಏಕೆಂದರೆ ಅಲ್ಲಿ ಅವರ ಪರ ಸಾಕ್ಷ್ಯಗ ಗಳು ಸಿಗುವುದೇ ಇಲ್ಲ.

ಇನ್ನು ಕುಟುಂಬ ಸಹಿತ ಪ್ರಯಾಣ ಮಾಡುವ ನಾಲ್ಕು ಚಕ್ರಗಳ ವಾಹನ ಚಾಲಕರ ಸ್ಥಿತಿ ಏನಾಗಬಹುದು ಎಂದು ಊಹಿಸುವುದೂ ಕಷ್ಟವಾಗುತ್ತದೆ. ಒಂದು ವೇಳೆ ಪ್ರಯಾಣದ ದಾರಿಯಲ್ಲಿ ಅಪಘಾತ ಸಂಭವಿಸಿ ಎದುರಿನವರಿಗೆ ಗಾಯವಾದರೆ, ವಾಹನ ಚಾಲಕ ಸ್ಥಳದಲ್ಲೇ ವಾಹನ ನಿಲ್ಲಿಸುವುದು ಸಾಧ್ಯವೇ? ಅಲ್ಲದೆ, ಆತ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಿ ಬರೋಣ ಎಂದುಕೊಂಡು ಮುಂದೆ ಹೋಗಿಬಿಟ್ಟರೆ, ವಾಪಸ್ ಬರುವಷ್ಟರಲ್ಲಿ ಹಿಟ್ ಅಂಡ್ ರನ್ ಪ್ರಕರಣ ಆತನ ವಿರುದ್ಧ ದಾಖಲಾಗಿಬಿಟ್ಟಿರುತ್ತದೆ. ಹಾಗಂತ ಸ್ಥಳದಲ್ಲೇ ವಾಹನ ನಿಲ್ಲಿಸಿದರೆ ಆತನ ಕುಟುಂಬಕ್ಕೆ ರಕ್ಷಣೆ ಸಿಗುವ ಯಾವುದೇ ಗ್ಯಾರಂಟಿಯೂ ಇರುವುದಿಲ್ಲ.

ಈ ಹೊಸ ಕಾನೂನಿಂದ ವಾಹನಗಳ ಚಾಲಕರು, ಸಾರ್ವಜನಿಕರಲ್ಲಿ ನಂಬಿಕೆ ಕಳೆದುಕೊಳ್ಳುವಂತಾಗುತ್ತದೆ. ಸೌಜನ್ಯಯುತವಾಗಿ ವರ್ತಿಸುವುದೂ ಅವರಿಗೆ ಸಾಧ್ಯವಾಗದಿರಬಹುದು. ಕೇಂದ್ರ ಸರ್ಕಾರ ಹಿಟ್ ಅಂಡ್ ರನ್ ಅಪಘಾತ ಪ್ರಕರಣಗಳಲ್ಲಿ ಸಾರ್ವಜನಿಕರನ್ನು ನಿಯಂತ್ರಿಸುವುದಕ್ಕೂ ಯಾವುದಾದರೂ ನಿಯಮ ತರಲೇಬೇಕು. ಅದು ಸಾಧ್ಯವಾಗದಿದ್ದರೆ ಹೊಸ ನಿಯಮವನ್ನು ವಾಪಸ್ ಪಡೆಯುವುದು ಸೂಕ್ತ ಅನಿಸುತ್ತದೆ.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

8 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

8 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

9 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

10 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

10 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

12 hours ago