• ಎಸ್.ಹರ್ಷಿತಾ
ನನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜತೆಗೆ ಆರೋಗ್ಯವನ್ನು ಕಾಪಾಡಿಕೊಂಡು ನನ್ನ ಚರ್ಮದ ಕಾಂತಿಯನ್ನೂ ಹೆಚ್ಚಿಸಿಕೊಳ್ಳಲು ಪ್ರತಿದಿನ ಮುಂಜಾನೆ ಒಂದು ಲೋಟ ಬಿಸಿ ನೀರಿಗೆ ಒಂದು ಚಿಟಿಕಿ ಅರಿಶಿನ ಜೊತೆಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿಯುತ್ತೇನೆ. ಅರಿಶಿನ ಮಿಶ್ರಿತ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜತೆಗೆ ದೇಹದಲ್ಲಿನ ಕಲ್ಮಶವನ್ನೂ ಹೊರಹಾಕಲು ಸಹಾಯ ಮಾಡುತ್ತದೆ. ಶೀತ, ಜ್ವರದಿಂದ ನಿಮ್ಮನ್ನು ದೂರವಿರಿಸುತ್ತದೆ. ಅಲ್ಲದೆ ಕೀಲು ನೋವಗಳನ್ನೂ ನಿವಾರಿಸುತ್ತದೆ.
ಇದರೊಂದಿಗೆ ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಅರಿಶಿನದಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣವು ಒಟ್ಟಾರೆ ದೇಹದ ಆರೋಗ್ಯಕ್ಕೆ ಒಳ್ಳೆಯದು. ಇದರೊಂದಿಗೆ ಅರಿಶಿನ ಮಿಶ್ರಿತ ನೀರು ತೂಕ ನಷ್ಟಕ್ಕೆ ಸಹಾಯಕವಾಗುತ್ತದೆ. ಗಮನಿಸ ಬೇಕಾದ ವಿಷಯವೆಂದರೆ ಜೀರ್ಣಾಂಗ ವ್ಯವಸ್ಥೆಯನ್ನು ಇದು ಸುಧಾರಿಸುತ್ತದೆ. ಇದರೊಂದಿಗೆ ನಮ್ಮ ಚರ್ಮಕ್ಕೂ ಇದು ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವಿಸುವ ಮೂಲಕ ಅಲರ್ಜಿಯಂತಹ ಸಮಸ್ಯೆಗಳಿಂದ ದೂರವಿರಬಹುದು. (ಹರ್ಷಿತಾ ಅವರು ಮೈಸೂರಿನಲ್ಲಿ ಜಿಮ್ ನಡೆಸುತ್ತಿದ್ದಾರೆ)
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…