ಅಂಕಣಗಳು

ಹಿರಿತನದ ಒಂಟಿತನ ನೀಗಿಸಿಕೊಳ್ಳುವುದು ಹೇಗೆ?

ಡಾ. ದುಷ್ಯಂತ್ ಪಿ.
ಪ್ರಸ್ತುತ ದಿನಗಳಲ್ಲಿ ಹಲವಾರು ಕಾರಣಗಳಿಂದಾಗಿ ವಯೋವೃದ್ಧರು ತಮ್ಮ ಕುಟುಂಬದವರೊಂದಿಗಿರದೆ ಒಂಟಿಯಾಗಿ ಜೀವನ ಸಾಗಿಸುತ್ತಿರುತ್ತಾರೆ. ವೃದ್ಧ ದಂಪತಿ ಮಕ್ಕಳಿಂದ ದೂರವಾಗಿ ಅಥವಾ ಒಂಟಿಯಾಗಿ ಜೀವನ ಸಾಗಿಸುವುದು ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ ಹಳ್ಳಿಗಳಲ್ಲಿಯೂ ಇತ್ತೀಚೆಗೆ ಸಾಮಾನ್ಯವಾಗಿ ಹೋಗಿದೆ.

ವೃದ್ಧರು ಒಂಟಿಯಾಗಿ ಜೀವನ ಸಾಗಿಸಲು ಹಲವು ಕಾರಣಗಳಿವೆ. ಅದರಲ್ಲಿ ಪ್ರಮುಖವಾಗಿ ಅವರಲ್ಲಿನ ಕೆಲವು ಆರೋಗ್ಯ ಸಮಸ್ಯೆಗಳು ಅವರನ್ನು ಒಂಟಿಯಾಗಿಸಬಹುದು.

ವೃದ್ಧರು ಒಂಟಿಯಾಗಿ ಬದುಕುವುದರಿಂದ ಅವರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ. ಅಲ್ಲದೆ ರಕ್ತದೊತ್ತಡ, ಮಾನಸಿಕ ಒತ್ತಡಗಳು ಹೆಚ್ಚಾಗಿ ಹೃದಯಾಘಾತ ಹಾಗೂ ಪಾರ್ಶ್ವವಾಯು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂಬುದು ಹಲವು ಅಧ್ಯಯನಗಳಿಂದ ದೃಢಪಟ್ಟಿದೆ.

ಇನ್ನು ವೃದ್ಧರು ಒಂಟಿಯಾಗಿರುವುದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತಗೊಳ್ಳುತ್ತದೆ. ಇದರಿಂದಾಗಿ ಅವರು ಬಹುಬೇಗನೆ ಹಲವಾರು ಸೋಂಕುಗಳಿಗೆ ತುತ್ತಾಗಬಹುದು. ಅಲ್ಲದೆ ವೈದ್ಯಕೀಯ ಆರೈಕೆ ನೀಡಿದ ಬಳಿಕವೂ ಮಕ್ಕಳ ಆರೈಕೆ ಸಿಗದೆ ಅವರು ಸೋಂಕಿನಿಂದ ಬೇಗ ಗುಣಮುಖರಾಗಲು ಕಷ್ಟವಾಗಬಹುದು. ಅಥವಾ ಗುಣವಾಗದೆಯೂ ಇರಬಹುದು. ವೃದ್ಧರು ಒಂಟಿಯಾಗುತ್ತಾ ಹೋದಂತೆ ಅವರಿಗೆ ತಮ್ಮ ದಿನನಿತ್ಯದ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಕಷ್ಟವಾಗುತ್ತದೆ. ಅವರಿಗೆ ಅಗತ್ಯಕ್ಕೆ ತಕ್ಕಂತೆ ಆಹಾರ ತಯಾರಿಸಿಕೊಳ್ಳಲು, ನಿಯಮಿತವಾಗಿ ಆಹಾರ ಸೇವಿಸಲು ಸಾಧ್ಯವಾಗದೆ ಇರಬಹುದು.

ಇದರಿಂದಾಗಿ ಅವರಲ್ಲಿ ಅಪೌಷ್ಟಿಕತೆ ಹೆಚ್ಚಾಗುತ್ತದೆ. ಅಲ್ಲದೆ ಅವರು ಸಕ್ಕರೆ ಕಾಯಿಲೆಯಂತಹ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರಂತೂ ಕಾಯಿಲೆಗಳಿಗೆ ಅನುಗುಣವಾಗಿ ಆಹಾರ ಪದ್ಧತಿಯನ್ನು ಪಾಲಿಸಲು ಕಷ್ಟವಾಗುತ್ತದೆ. ಇವುಗಳೊಂದಿಗೆ ವಯೋ ವೃದ್ಧರಿಗೆ ಹಲವು ಮಾನಸಿಕ ಸಮಸ್ಯೆಗಳು ಉಂಟಾಗಲೂ ಒಂಟಿತನ ಕಾರಣ ಎಂಬುದು ಹಲವು ವರದಿಗಳಿಂದ ಸಾಬೀತಾಗಿದೆ. ಅವುಗಳಲ್ಲಿ ಪ್ರಮುಖವಾಗಿ ಖಿನ್ನತೆ ಮತ್ತು ಆತಂಕ ಹೆಚ್ಚಾಗಿ ಕಾಡುತ್ತವೆ. ಅದರಲ್ಲಿಯೂ ಮರೆಗುಳಿತನ ಹೆಚ್ಚಾಗಬಹುದು. ಅಲ್ಲದೆ ತಮ್ಮ ದಿನಚರಿ ಮತ್ತು ದೈನಂದಿನ ಜೀವನ ನಡೆಸಲೂ ಅವರಿಗೆ ಕಷ್ಟವಾಗುತ್ತದೆ. ವೃದ್ಧರನ್ನು ಕಾಡುವ ಒಂಟಿತನದಿಂದ ಅವರನ್ನು ಮುಕ್ತಗೊಳಿಸುವುದರಲ್ಲಿ ಕುಟುಂಬದ ಸದಸ್ಯರು ಹಾಗೂ ಸಮಾಜದ ಪಾತ್ರ ಬಹಳ ಮುಖ್ಯವಾಗಿರುತ್ತದೆ.

ಕುಟುಂಬದವರು ವೃದ್ಧರನ್ನು ನಿರ್ಲಕ್ಷಿಸದೆ ಅವರೊಂದಿಗೆ ಉತ್ತಮ ಸಂಬಂಧ ಮತ್ತು ಒಡನಾಟವನ್ನು ಇಟ್ಟುಕೊಳ್ಳಬೇಕು. ಕುಟುಂಬದವರ ಆಸರೆ ಇಲ್ಲದ ವೃದ್ಧರಿಗೆ ಸಮಾಜದ ಜನರೇ ಬೆನ್ನೆಲುಬಾಗಿ ನಿಲ್ಲಬಹುದು. ಒಂಟಿಯಾಗಿ ಜೀವಿಸುತ್ತಿರುವ ವೃದ್ಧರೊಂದಿಗೆ ಉತ್ತಮ ಭಾವನಾತ್ಮಕ ಸಂಬಂಧ ಬೆಳೆಸಿಕೊಂಡು ಅವರಿಗೆ ಬೆಂಬಲವಾಗಿ ನಿಲ್ಲಬೇಕು. ಇದರಿಂದ ವೃದ್ಧರು ಆತ್ಮವಿಶ್ವಾಸವನು, ಹೆಚ್ಚಾಗಿ ಅವರ ಆರೋಗ್ಯವನ್ನು ಕಾಪಾಡಿಕೊಂಡು ತೃಪ್ತಿಕರ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ.

ವಯಸ್ಸಾದ ಮೇಲೆ ಆರೋಗ್ಯಯುತ ಜೀವನ ಸಾಗಿಸಬೇಕು ಎಂದರೆ ಮೊದಲು ವೃದ್ಧರು ಒಂಟಿತನದಿಂದ ಹೊರಬರಬೇಕು. ಅದಕ್ಕಾಗಿ ಅವರು ಹಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು.

೧.  ವೃದ್ಧರು ತಮ್ಮ ಸುತ್ತಲಿನ ಸಮಾಜದೊಂದಿಗೆ ಹೆಚ್ಚು ಬೆರೆಯಲು ಪ್ರಯತ್ನಿಸಬೇಕು. ಸಮಾನ ವಯಸ್ಕ ಗುಂಪಿನವರೊಂದಿಗೆ ಒಡನಾಟವನ್ನಿಟ್ಟುಕೊಂಡು ಅವರೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು, ಕುಟುಂಬದ ಸದಸ್ಯರೊಡನೆ ಸಂಪರ್ಕ ಹೊಂದಬೇಕು. ಜತೆಗೆ ಅವರೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಬೇಕು.

೨.  ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮೊಬೈಲ್, ಇಂಟರ್ನೆಟ್ ಮುಖಾಂತರ ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಒಡನಾಟ ಹೆಚ್ಚಿಸಿಕೊಳ್ಳಬಹುದು. ತುರ್ತು ಪರಿಸ್ಥಿತಿಗಳಲ್ಲೂ ತಂತ್ರಜ್ಞಾನದ ಬಳಕೆ ಸಹಾಯವಾಗುತ್ತದೆ.

೩. ಹೊಸ ಹೊಸ ಹವ್ಯಾಸಗಳನ್ನು ರೂಢಿಸಿಕೊಳ್ಳುವುದು, ಸಂಗೀತ ಆಲಿಸುವುದು, ಓದುವುದು, ತೋಟಗಾರಿಕೆ ಮುಂತಾದ ಚಟುವಟಿಕೆಗಳನ್ನು ರೂಢಿಸಿಕೊಂಡರೆ ಒಂಟಿತನ ದೂರವಾಗುತ್ತದೆ.

೪. ದೈಹಿಕ ವ್ಯಾಯಾಮ ಮತ್ತು ಚಟುವಟಿಕೆ ಅಭ್ಯಾಸ ಮಾಡಿಕೊಳ್ಳುವುದು, ಯೋಗ, ನಡಿಗೆ, ಪ್ರಾಣಾಯಾಮ ಹೀಗೆ ಹಲವು ರೀತಿಯ ಅಭ್ಯಾಸಗಳು ಉತ್ತಮ ಜೀವನಕ್ಕೆ ಸಹಕಾರಿಯಾಗಿರುತ್ತವೆ.

೫. ಸಾಕು ಪ್ರಾಣಿಗಳ ಜೊತೆ ಒಡನಾಟ, ಸಾಕು ಪ್ರಾಣಿಗಳ ಜೊತೆಗಿನ ಭಾವನಾತ್ಮಕ ಸಂಬಂಧದಿಂದ ವೃದ್ಧರಲ್ಲಿ ಒಂಟಿತನ ದೂರವಾಗುತ್ತ.

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

4 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

7 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

8 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

8 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

8 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

8 hours ago