ಅಂಕಣಗಳು

ನಾನು ಸಹನಾ, ಮೈಸೂರಿನ ಜನಪ್ರಿಯ ರೇಡಿಯೋ ಧ್ವನಿ!

ನಾನು ಸಹನಾ, ರೇಡಿಯೋ ಜಾಕಿ. ಚಿಕ್ಕ ವಯಸ್ಸಿನಿಂದಲೂ ಸಂಗೀತದ ಮೇಲಿನ ಆಸಕ್ತಿಯಿಂದ ನನಗೆ ರೇಡಿಯೋವೊಂದರಲ್ಲಿ ಜಾಕಿಯಾಗಿ ಕೆಲಸ ಮಾಡುವ ಅವಕಾಶ ಒದಗಿಬಂತು. ಆ ಮೂಲಕ ನನ್ನ ಹವ್ಯಾಸ ವೃತ್ತಿಯಾಯಿತು. ನಾವು ಯಾರೊಂದಿಗಾದರೂ ಸಂವಹಿಸಬೇಕು, ಅವರೊಂದಿಗೆ ಆತ್ಮೀಯತೆ ಬೆಳೆಯಬೇಕು ಎಂದರೆ ನಮ್ಮ ಮಾತಿನಲ್ಲಿ ಸ್ಪಷ್ಟತೆ, ಪ್ರೀತಿ, ಮಧುರವಾದ ಧ್ವನಿ ಇರಬೇಕು ಎಂಬುದು ನಾನು ಕಂಡುಕೊಂಡ ಸತ್ಯ. ನಮ್ಮ ಮಾತು ಮತ್ತೊಬ್ಬರನ್ನು ಆಕರ್ಷಿಸಿದಾಗ ಮಾತ್ರ ಅವರ ಸ್ನೇಹ ಸಂಪಾದಿಸಲು ಸಾಧ್ಯ. ನಾನು ರೇಡಿಯೋದಲ್ಲಿ ನನ್ನ ವೃತ್ತಿ ಬದುಕು ಆರಂಭಿಸಿದ್ದು, 93.5 ರೆಡ್ ಎಫ್‌ಎಂ ನಲ್ಲೇ. ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ನನಗೆ ಸಂಗೀತದ ಹೆಚ್ಚು ಆಸಕ್ತಿ. ಸಂಗೀತ ಅಭ್ಯಾಸವನ್ನೂ ಮಾಡಿದ್ದೆ. ಪತ್ರಿಕೋದ್ಯಮದ ವ್ಯಾಸಂಗದ ನಡುವೆ ಹವ್ಯಾಸವಾಗಿ ಒಂದಿಷ್ಟು ಡಬ್ಬಿಂಗ್, ವಾಯ್ಸ್ ಓವರ್‌ಗಳನ್ನು ನೀಡಿದ್ದೇನೆ.

ಇವೆಲ್ಲದರ ಅನುಭವ ಈಗ ವಿದ್ಯಾಭ್ಯಾಸ ಮುಗಿಸಿದ ತಕ್ಷಣವೇ Radio Jockey ಆಗುವ ಅವಕಾಶ ದೊರಕಿಸಿದೆ. ರೇಡಿಯೋ ಜಾಕಿ ಎಂದರೆ ಕರೆ ಮಾಡಿ ಮಾತನಾಡುತ್ತಾರೆ, ನೆಚ್ಚಿನ ಗೀತೆಗಳನ್ನು ಪ್ರಸಾರ ಮಾಡುತ್ತಾರೆ, ಒಂದಿಷ್ಟು ಮಾತುಗಳು, ಒಂದಿಷ್ಟು ಪ್ರಶ್ನೆಗಳು, ಒಂದಿಷ್ಟು ಹಾಸ್ಯ ಮಾತ್ರವಲ್ಲ. ಕೇಳುಗರಿಗೆ ಒಬ್ಬ ರೇಡಿಯೋ ಜಾಕಿಯ ಕೆಲಸ ಸಾಧಾರಣವೆನಿಸಬಹುದು. ಆದರೆ, ಅದರ ಹಿಂದಿನ ಶ್ರಮ ಅಗೋಚರವಾದದ್ದು. ಕಾರ್ಯಕ್ರಮಕ್ಕೂ ಮುನ್ನ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು. ಕೇಳುಗರಿಗೆ ಎಲ್ಲಿಯೂ ಬೇಸರವಾಗದಂತೆ ಮಾತನಾಡಬೇಕು, ಕರೆಯಲ್ಲಿಯೂ ಅವರನ್ನು ಆತ್ಮೀಯವಾಗಿ ಮಾತನಾಡಿಸಬೇಕು. ಇದೆಲ್ಲದರ ನಡುವೆ ನಾವು ನಮ್ಮ ಉತ್ಸಾಹವನ್ನು ಕಳೆದುಕೊಳ್ಳದೆ ಸುಲಲಿತವಾಗಿ ಕಾರ್ಯಕ್ರಮದ ಆರಂಭದಲ್ಲಿದ್ದ ಜೋಶ್‌ ಅನ್ನೇ ಕೊನೆಯವರೆಗೂ ಮುಂದುವರಿಸಬೇಕು. ಇಷ್ಟೆಲ್ಲ ಕಸರತ್ತುಗಳನ್ನು ನಾವೂ ಮಾಡಬೇಕಾಗುತ್ತದೆ. ನಾನು ನಿತ್ಯ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ RED JUNCTION’ ಎನ್ನುವ ಕಾರ್ಯಕ್ರಮವನ್ನು ನಡೆಸಿಕೊಡುತ್ತೇನೆ.

ಇದರಲ್ಲಿ ಮಹಿಳೆಯರು, ಹಿರಿಯರು, ಸಣ್ಣಪುಟ್ಟ ವ್ಯಾಪಾರಸ್ಥರು, ಒಂದೇ ಸ್ಥಳದಲ್ಲಿ ಕುಳಿತು ದಿನವಿಡೀ ಕೆಲಸ ಮಾಡುವವರು ಈ ಕಾರ್ಯಕ್ರಮವನ್ನು ಕೇಳುತ್ತಾ ತಮ್ಮ ಕೆಲಸಗಳನ್ನು ಮಾಡುವುದರಿಂದ ಆ ಸಮಯದಲ್ಲಿ ಮಹಿಳಾ ಆಧಾರಿತ ವಿಚಾರಗಳ ಕುರಿತು ಕಾರ್ಯಕ್ರಮದಲ್ಲಿ ಮಾತನಾಡುತ್ತೇನೆ. ಕೆಲ ಬಾರಿ ಮಹಿಳಾ ಸಾಧಕರ ಸಂದರ್ಶನವೂ ಇರುತ್ತದೆ. ಇದು ಸಾಕಷ್ಟು ಮಹಿಳೆಯರಿಗೆ, ಸಾಧಿಸಬೇಕು ಎಂಬ ಹಂಬಲವಿರುವವರಿಗೆ ಒಂದಿಷ್ಟು ಉತ್ಸಾಹ ತುಂಬಬೇಕು ಎಂಬುದೇ ನಮ್ಮ ಬಯಕೆ. ಇದರೊಂದಿಗೆ ಪ್ರತಿ ಶನಿವಾರ SING WITH SAHANA’ ಎನ್ನುವ ಕಾರ್ಯಕ್ರಮ ಪ್ರಸಾರವಾಗಲಿದ್ದು, ಇದರಲ್ಲಿ ಕೇಳುಗರ ವಿನಂತಿ ಮೇರೆಗೆ ಸಿನಿಮಾ ಹಾಡುಗಳನ್ನು ನಾನೇ ಹಾಡುತ್ತೇನೆ. ಇದೆಲ್ಲದ್ದಕೂ ಸಿದ್ಧವಾಗುವುದು, ಉತ್ಸಾಹವನ್ನು ಕಾಪಿಟ್ಟುಕೊಳ್ಳುವುದು, ರೇಡಿಯೋ ಜಾಕಿಯ ಪ್ರಮುಖ ಗುಣಲಕ್ಷಣ.

ಯಾವುದೇ ಕಾರ್ಯಕ್ರಮವನ್ನು ಪ್ರಸ್ತುತಪಡಿಸುವ ಮುನ್ನ ಹಿಂದಿನ ದಿನವೇ ಕಾರ್ಯಕ್ರಮದ ವಿಷಯ ವಸ್ತುವಿನ ಕುರಿತು ಅಧ್ಯಯನ ಮಾಡಿಕೊಳ್ಳಬೇಕು. ಕಾರ್ಯಕ್ರಮದ ಪ್ರಾಯೋಜಕರೊಂದಿಗೆ ಚರ್ಚಿಸಿ, ಅಗತ್ಯ ಮಾಹಿತಿಗಳ ಸಿದ್ಧತೆ ಮಾಡಿಕೊಳ್ಳಬೇಕು. ಅಷ್ಟೇ ಅಲ್ಲದೆ ರೇಡಿಯೋನಲ್ಲಿ ಬರುವ ಜಾಹೀರಾತುಗಳಿಗೂ ಸ್ಕ್ರಿಪ್ಟ್ ಬರೆಯುವುದೂ ತಿಳಿದಿರಬೇಕು. ಹಾಗೆಯೇ ಜಾಹೀರಾತುಗಳಿಗೆ ಧ್ವನಿ ನೀಡುವುದು, ನಿರೂಪಣೆ ಮಾಡುವುದು ಹೀಗೆ ಹಲವಾರು ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಎಲ್ಲ ಹಂತದಲ್ಲಿಯೂ ಉತ್ಸಾಹವನ್ನು ಕಾಪಾಡಿಕೊಂಡು ಧ್ವನಿಯಲ್ಲಿ ಆಕರ್ಷಣೆಯನ್ನು ದೀರ್ಘ ಕಾಲದವರೆಗೆ ಉಳಿಸಿಕೊಳ್ಳುವಂತಿದ್ದರೆ ಮಾತ್ರ ರೇಡಿಯೋ ಜಾಕಿಯಾಗಿ ಮುಂದುವರಿಯಲು ಸಾಧ್ಯ. ಇವೆಲ್ಲವುಗಳ ಜತೆಗೆ ಸಾಮಾಜಿಕ ಜಾಲತಾಣದ ಮೇಲೆ ನಿಗಾವಿರಬೇಕು. ಅಲ್ಲಿಯೂ ಕೇಳುಗರು ಪ್ರತಿಕ್ರಿಯಿಸುವುದರಿಂದ ಅವರಿಗೆ ಉತ್ತರಿಸುವ ಜವಾಬ್ದಾರಿಯೂ ನಮ್ಮ ಮೇಲಿರುತ್ತದೆ. ದಿನವಿಡಿಯ ಇಷ್ಟೆಲ್ಲಾ ಸಾಹಸದ ಮಧ್ಯೆ ನಾವು ನಮ್ಮ ಆರೋಗ್ಯ, ಕುಟುಂಬ, ಸ್ನೇಹಿತರು, ನಮ್ಮ ವೈಯಕ್ತಿಕ ಕೆಲಸಗಳಿಗೆ ಸಮಯ ಮೀಸಲಿಡುವುದು ಸವಾಲಿನ ಕೆಲಸವೇ ಸರಿ. ಕೊನೆಯದಾಗಿ ಒಂದು ಮಾತು. ಹವ್ಯಾಸವನ್ನು ವೃತ್ತಿ ಮಾಡಿಕೊಳ್ಳುವುದು ಅಷ್ಟು ಸುಲಭವಲ್ಲ. ಹವ್ಯಾಸದ ಮೇಲೆ ಅತಿಯಾದ ಪ್ರೀತಿ ಮತ್ತು ಶಿಸ್ತು ಮುಂದೆ ಅದನ್ನು ವೃತ್ತಿ ಮಾಡಿಕೊಳ್ಳಲು ಸಹಕಾರಿ.
sahanar1998@gmail.com

andolanait

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

45 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

53 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

59 mins ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

1 hour ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 hours ago