ಅಂಕಣಗಳು

ಐಸ್‌ಕ್ರೀಮ್ ಅಂಗಡಿಯ ಮೋಹನ್ ಕುಮಾರ್,

ಇವರ ಹೆಸರು ಮೋಹನ್ ಕುಮಾರ್. ಮೈಸೂರಿನ ದೇವರಾಜ ಅರಸು ರಸ್ತೆಯ ಪಕ್ಕದಲ್ಲಿರುವ ಸಂಬಂಧಿಕರ ಐಸ್‌ಕ್ರೀಮ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಅದು, ಇದು ಎಂದು ಅಂದಾಜಿಸುತ್ತಿದ್ದರೆ, ಅವರಿಗೆ ಯಾವ ತರಹದ್ದು ಐಸ್‌ಕ್ರೀಮ್ ಇಷ್ಟವೆಂದು ಕೇಳಿ ಸೂಕ್ತವಾದದ್ದನ್ನು ಆರಿಸಿಕೊಡುತ್ತಾರೆ.

ಬದುಕಿರುವಷ್ಟು ದಿನ ಸುಮ್ಮನೆ ಕೂತು, ಸಮಯ ವ್ಯರ್ಥ ಮಾಡಬಾರದು ಎಂದು ಬುದ್ಧಿ ಹೇಳುವ ಮೋಹನ್ ಕುಮಾರ್ ಅವರು ಕಷ್ಟಕ್ಕೆ ಎದೆಗುಂದದೆ ಮುನ್ನುಗ್ಗುತ್ತಿರಬೇಕು ಎಂದು ಜೀವನ ಪಾಠವನ್ನೂ ಹೇಳುತ್ತಾರೆ.

ಇವರ ತಂದೆ ಪ್ರಾವಿಷನ್ ಸ್ಟೋ‌ರ್‌ ನಡೆಸುತ್ತಿದ್ದರು. ಹತ್ತನೇ ತರಗತಿ ಓದು ಮುಗಿಯುತ್ತಿದ್ದಂತೆ ಅಂಗಡಿಗೆ ಸೇರಿದರು. ಈಗಿವರಿಗೆ 65 ವರ್ಷ. ವ್ಯಾಪಾರ ಎಂದ ಮೇಲೆ ಲಾಭ, ನಷ್ಟ ಇದ್ದೇ ಇರುತ್ತದೆ ಎನ್ನುವ ಮೋಹನ್ ಕುಮಾರ್ ತಮ್ಮ ಪ್ರಾವಿಷನ್ ಅಂಗಡಿ ನಡೆಸಲು ಸಾಧ್ಯವಾಗುತ್ತಿಲ್ಲವೆಂದು ಐದು ವರ್ಷಗಳ ಈಚೆಗೆ ಮುಚ್ಚಿದ್ದಾರೆ. ಆದರೆ ಚಿಕ್ಕಂದಿನಿಂದ ದುಡಿದ ದೇಹ, ಕೆಲಸವಿಲ್ಲದೆ ಸುಮ್ಮನೆ ಕೂರ ಲಾಗಲಿಲ್ಲ. ಐಸ್‌ಕ್ರೀಮ್ ಅಂಗಡಿಯ ಮೇಲುಸ್ತುವಾರಿಕೆ ನೋಡಿ ಕೊಳ್ಳುವುದಾ ದರೂ ಸರಿ ಎಂದು ಕೆಲಸ ಮಾಡುತ್ತಲೇ ತಮ್ಮ ವಿಶ್ರಾಂತಿಯನ್ನು ಕಂಡುಕೊಳ್ಳುತ್ತಿ ದ್ದಾರೆ. ಜನರ ಜೊತೆ ಬೆರೆಯುವುದೇ ತಮಗೆ ಖುಷಿ ಎನ್ನುತ್ತಾರೆ ಮೋಹನ್ ಕುಮಾರ್‌ ಅವರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

3 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

3 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

3 hours ago