ಅಂಕಣಗಳು

ಐಸ್‌ಕ್ರೀಮ್ ಅಂಗಡಿಯ ಮೋಹನ್ ಕುಮಾರ್,

ಇವರ ಹೆಸರು ಮೋಹನ್ ಕುಮಾರ್. ಮೈಸೂರಿನ ದೇವರಾಜ ಅರಸು ರಸ್ತೆಯ ಪಕ್ಕದಲ್ಲಿರುವ ಸಂಬಂಧಿಕರ ಐಸ್‌ಕ್ರೀಮ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಅದು, ಇದು ಎಂದು ಅಂದಾಜಿಸುತ್ತಿದ್ದರೆ, ಅವರಿಗೆ ಯಾವ ತರಹದ್ದು ಐಸ್‌ಕ್ರೀಮ್ ಇಷ್ಟವೆಂದು ಕೇಳಿ ಸೂಕ್ತವಾದದ್ದನ್ನು ಆರಿಸಿಕೊಡುತ್ತಾರೆ.

ಬದುಕಿರುವಷ್ಟು ದಿನ ಸುಮ್ಮನೆ ಕೂತು, ಸಮಯ ವ್ಯರ್ಥ ಮಾಡಬಾರದು ಎಂದು ಬುದ್ಧಿ ಹೇಳುವ ಮೋಹನ್ ಕುಮಾರ್ ಅವರು ಕಷ್ಟಕ್ಕೆ ಎದೆಗುಂದದೆ ಮುನ್ನುಗ್ಗುತ್ತಿರಬೇಕು ಎಂದು ಜೀವನ ಪಾಠವನ್ನೂ ಹೇಳುತ್ತಾರೆ.

ಇವರ ತಂದೆ ಪ್ರಾವಿಷನ್ ಸ್ಟೋ‌ರ್‌ ನಡೆಸುತ್ತಿದ್ದರು. ಹತ್ತನೇ ತರಗತಿ ಓದು ಮುಗಿಯುತ್ತಿದ್ದಂತೆ ಅಂಗಡಿಗೆ ಸೇರಿದರು. ಈಗಿವರಿಗೆ 65 ವರ್ಷ. ವ್ಯಾಪಾರ ಎಂದ ಮೇಲೆ ಲಾಭ, ನಷ್ಟ ಇದ್ದೇ ಇರುತ್ತದೆ ಎನ್ನುವ ಮೋಹನ್ ಕುಮಾರ್ ತಮ್ಮ ಪ್ರಾವಿಷನ್ ಅಂಗಡಿ ನಡೆಸಲು ಸಾಧ್ಯವಾಗುತ್ತಿಲ್ಲವೆಂದು ಐದು ವರ್ಷಗಳ ಈಚೆಗೆ ಮುಚ್ಚಿದ್ದಾರೆ. ಆದರೆ ಚಿಕ್ಕಂದಿನಿಂದ ದುಡಿದ ದೇಹ, ಕೆಲಸವಿಲ್ಲದೆ ಸುಮ್ಮನೆ ಕೂರ ಲಾಗಲಿಲ್ಲ. ಐಸ್‌ಕ್ರೀಮ್ ಅಂಗಡಿಯ ಮೇಲುಸ್ತುವಾರಿಕೆ ನೋಡಿ ಕೊಳ್ಳುವುದಾ ದರೂ ಸರಿ ಎಂದು ಕೆಲಸ ಮಾಡುತ್ತಲೇ ತಮ್ಮ ವಿಶ್ರಾಂತಿಯನ್ನು ಕಂಡುಕೊಳ್ಳುತ್ತಿ ದ್ದಾರೆ. ಜನರ ಜೊತೆ ಬೆರೆಯುವುದೇ ತಮಗೆ ಖುಷಿ ಎನ್ನುತ್ತಾರೆ ಮೋಹನ್ ಕುಮಾರ್‌ ಅವರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

34 mins ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

36 mins ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

38 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

41 mins ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

49 mins ago