ಅಂಕಣಗಳು

ಪ್ರೀತಿಯ ಖಜಾನೆ ಇದ್ದರೆ  ಹಣ, ಆಸ್ತಿ ಸಂಪಾದನೆ ಯಾಕೆ

ಸೌಮ್ಯಕೋಠಿ, ಮೈಸೂರು

‘ಮಾಡಿದ್ದುಣ್ಣೋ ಮಹಾ ರಾಯ’ ಎನ್ನುವ ಗಾದೆ ಮಾತಿನಂತೆ ನಾವು ವಯಸ್ಸಿದ್ದಾಗ ಹೇಗೆ ನಡೆದುಕೊಳ್ಳುತ್ತೇವೋ ಹಾಗೆ ವಯಸ್ಸಾದ ಮೇಲೆ ಅದರ ಫಲ ಇರುತ್ತದೆ. ಜಾತಕದಲ್ಲಿ ಏನು ಬರೆದಿದೆ ಎನ್ನುವುದಕ್ಕಿಂತ , ನಮ್ಮ ಕರ್ಮದ ಫಲ ನಮಗೆ ದೊರೆಯುತ್ತದೆ ಎನ್ನುವುದು ನೂರಕ್ಕೆ ನೂರು ಸತ್ಯವಾದ ಮಾತು. ಜೇನುತುಪ್ಪವನ್ನು ಇಷ್ಟಪಡುವ ಜನ ಜೇನು ನೊಣವನ್ನು ಇಷ್ಟಪಡುವುದಿಲ್ಲ . ನಾವು ಹಾಗೆ ಜೇನು ತುಪ್ಪದ ಹಾಗೆ ನಮ್ಮ ನುಡಿ ಎಷ್ಟು ಸಿಹಿಯಾಗಿರುತ್ತದೆ ನಮ್ಮನ್ನು ಜನ ಅಷ್ಟು ಪ್ರೀತಿಸುತ್ತಾರೆ. ಇವರು ಇರುವುದೇ ಹಾಗೆ ಎಂದು ಬೇರೆಯವರು ಬೇಸರ ಪಡುವ ರೀತಿ ಇರುವುದಕ್ಕಿಂತ ಇದ್ದರೆ ಇವರ ಹಾಗೆ ಇರಬೇಕು ಎನ್ನುವಂತೆ ನಾವು ಆದರ್ಶ ಪ್ರಾಯವಾಗಿ ಇರಬೇಕು.

ಆದರ್ಶ ಅಂದರೆ ಶ್ರೇಷ್ಠತೆ, ಮಾರ್ಗದರ್ಶನ ಅನ್ನುವ ಅರ್ಥ ಬರುವ ಹಾಗೆ ಕನ್ನಡಿಯ ಹಾಗೆ ಅಂತ ಹೇಳುತ್ತಾ ಹೋಗುತ್ತಾರೆ. ರಾಮನ ಹಾಗೆ ನಡೆ , ಅಂದರೆ ಅದರ ಅರ್ಥ ನಾನು ಹೇಗೆ ಕಾಣುತ್ತೇನೆ, ನಾವು ಕನ್ನಡಿಯ ಮುಂದೆ ನಿಂತು ಬೇರೆಯವರನ್ನು ಸರಿಪಡಿಸಲು ಆಗುವುದಿಲ್ಲ,  ಕನ್ನಡಿಯ ಮುಂದೆ ನಿಲ್ಲುವುದು ನನ್ನನ್ನು ನಾನು ಸಿಂಗರಿಸಿಕೊಳ್ಳಲು. ನನ್ನನ್ನು ನಾನು ಸರಿಪಡಿಸಿಕೊಳ್ಳಲು. ಹಾಗೆಯೇ ನಾವೂ ಕೂಡ ನಮ್ಮ ಜೀವನದಲ್ಲಿ ನಮ್ಮನ್ನ ನಾವು ಸುಂದರ ಮಾಡಿಕೊಳ್ಳುವ ಹಾಗೆ ನಡೆದುಕೊಳ್ಳಬೇಕು.

ಆಗಿದ್ದೆಲ್ಲಾ ಆಯಿತು ಎಂದು ಒಮ್ಮೆ ಎಲ್ಲವನ್ನ್ನೂ ಕ್ಷಮಿಸಿ, ಭೂತಕಾಲಕ್ಕೆ ಹೋಗಿ ಯಾವುದನ್ನು ಸರಿಪಡಿಸಲು ಆಗುವುದಿಲ್ಲ. ಆದರೆ ಇದೇ ತಪ್ಪನ್ನು ನಾವು ಮುಂದುವರಿಸಿದಾಗ ಮುಂದಿನ ಜೀವನವೂ   ಹಾಳಾಗುತ್ತದೆ ಎನ್ನುವ ಕಲ್ಪನೆ ನಮಗಿರಬೇಕು.

ಎಲ್ಲವನ್ನೂ ಎಲ್ಲರನ್ನೂ  ಕ್ಷಮಿಸಿ ಒಮ್ಮೆ ನಿಮ್ಮ ಸಂಬಂಧವನ್ನು ನೋಡಿದಾಗ ನಿಮ್ಮ ಸಂಬಂಧಗಳು ಜೀವಂತವಾಗುವ ಸಾಧ್ಯತೆಗಳಿರುತ್ತದೆ . ನೀವು ಬದುಕಿದ್ದಾಗ ಎಷ್ಟು ಆಸ್ತಿ ಮಾಡಿದ್ದೀರಿ, ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣವಿದೆ ಎನ್ನುವುದಕ್ಕಿಂತ ನೀವು ಜನರೊಂದಿಗೆ ಹೇಗೆ ನಡೆದುಕೊಂಡಿದ್ದೀರಿ ಎಂಬುದು ಅವರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ.

ಮಗಳು- ಅಳಿಯ,  ಮಗ -ಸೊಸೆ ,  ಮೊಮ್ಮಕ್ಕಳು,  ಸ್ನೇಹಿತರು ಸಂಬಂಽಗಳು ಅವರನ್ನೆಲ್ಲ ನೀವು ಎಷ್ಟು ಕ್ಷಮಿಸಿದ್ದೀರಿ, ಅವರ ಕಷ್ಟಕ್ಕೆ ಹೇಗೆ ಆದಿರಿ ಎಂಬುದೇ ಅವರ ಮನಸ್ಸಿನಲ್ಲಿ ಉಳಿಯುವ ನೆನಪುಗಳು. ಹಣ,  ಆಸ್ತಿ ಎನ್ನುವುದಕ್ಕಿಂತ ಪ್ರೀತಿಯ ಖಜಾನೆಯೇ ನೀವಾಗುವ ಮಾರ್ಗದಲ್ಲಿ ಒಮ್ಮೆ ನಡೆದು ನೋಡಿ,  ಪ್ರೀತಿಯ ಹಸಿರಿನ ಮಾರ್ಗ ನಿಮ್ಮದಾಗುತ್ತದೆ. ನಿಮ್ಮ ಮನಸ್ಸಿನಲ್ಲಿರುವ ಆ ಇಗೋವನ್ನು ಒಮ್ಮೆ ಹೊರಹಾಕಿ ನೋಡಿದಾಗ ಎಲ್ಲವೂ ಸುಂದರವಾಗಿ ಕಾಣುತ್ತದೆ.

ಹೌದು ಇಷ್ಟು ದಿನ ನೀವು ನಡೆದ ದಾರಿಯಲ್ಲಿ ಹೊಸ ಮಾರ್ಗದಲ್ಲಿ ನಡೆಯುವುದು ಕಷ್ಟ ಆದರೆ ಖಂಡಿತವಾಗಿಯೂ ಅಸಾಧ್ಯವಾದ ಮಾರ್ಗವನ್ನು .  ಸಾಧ್ಯವಾಗಿಸಬಹುದು.ಮಾವಿನ ಬೀಜ ನೆಟ್ಟಾಗ ಮಾತ್ರ ಮಾವು ಬರಲು ಸಾಧ್ಯ, ಬೇವಿನ ಬೀಜವನ್ನು ಬಿತ್ತಿ ಮಾವನ್ನು ಅಪೇಕ್ಷಿಸುವುದು ಮೂರ್ಖತನ. ಅವರು ಬದಲಾಗಲಿ, ಇವರು ಬದಲಾಗಲಿ ಎನ್ನುವುದಕ್ಕಿಂತ ಆ ಬದಲಾವಣೆ ನಿಮ್ಮಿಂದ ಆರಂಭವಾಗಬೇಕು. ಮನೆಯ ಹಿರಿಯರಾಗಿ ಆ ಕೆಲಸವನ್ನು ಒಮ್ಮೆ ಆರಂಭಿಸಿ ನೋಡಿ,  ನಿಮ್ಮ ಮುಂದಿನ ಪೀಳಿಗೆಗೆ ಪ್ರೀತಿಯೆಂಬ ಆಸ್ತಿಯನ್ನು ಹಂಚಿ ಹೋಗಿ ಅವರು ಇರುವವರೆಗೂ ನಿಮ್ಮನ್ನು ನೆನೆಯುತ್ತಾರೆ, ಹೊಸ ದೃಷ್ಟಿಕೋನದಲ್ಲಿ ಯೋಚಿಸಿ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

59 mins ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

1 hour ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

1 hour ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

1 hour ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

1 hour ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

1 hour ago