ಅಂಕಣಗಳು

ಇಂದು ಅಲ್ಲಿಗೆ ಹೋದರೆ ತೋಪು ಬಿಕೋ ಎನ್ನುತ್ತಿತ್ತು

• ಮಧುಕರ ಮಳವಳ್ಳಿ

ನಮ್ಮೂರು ಮಳವಳ್ಳಿಯಿಂದ ಸುಮಾರು 4 ರಿಂದ 5 ಮೈಲಿ ಇರುವ ಮಾರೇಹಳ್ಳಿ ಲಕ್ಷ್ಮೀ ನರಸಿಂಹ ದೇವಸ್ಥಾನದ ತೋಪಿಗೆ ಹೋಗಿದ್ದೆ.

ನನ್ನ ಬಾಲ್ಯದಲ್ಲಿ ಮದುವೆಯ ಸುಗ್ಗಿ ಅಂತ ಮಾರ್ಚಿನಿಂದ ಜೂನ್‌ವರೆಗೆ ಕರೆಯುತ್ತಿದ್ದರು. ಆ ಹಿಪ್ಪೆಮರಗಳ ನೆರಳಿನಲ್ಲಿ ಅದೆಷ್ಟು ಗಂಡು-ಹೆಣ್ಣು ದಂಪತಿಗಳಾಗಿದ್ದಾರೆ. ಹಿಂದೆ ಈಗಿನಂತೆ ಮದುವೆಗೆ ಛತ್ರಗಳು, ಕಲ್ಯಾಣಮಂಟಪಗಳು ಇರಲಿಲ್ಲ. ದಲಿತ ವರ್ಗದವರಿಗೆ ಅದು ವರವಾಗಿತ್ತು. ಮಕ್ಕಳಾದ ನಾವು ಶನಿವಾರ, ಭಾನುವಾರ ಮತ್ತು ಬೇರೆ ದಿನಗಳಲ್ಲಿ ಕದ್ದು ಅಲ್ಲಿಗೆ ಹೋಗುತ್ತಿದ್ದೆವು. ಕಾರಣ ಮದುವೆಯ ಊಟ. ವಿಶೇಷವಾಗಿ ಬೂಂದಿ, ರವೆ ಪಾಯಸ ಮತ್ತು ಶಾವಿಗೆ ಪಾಯಸ, ಯಾರಾದರೂ ಲಡ್ಡು ಮಾಡಿದ್ದರೆ, ಅದೇ ನಮ್ಮ ಮೊದಲ ಆದಕ್ಕೆ ಆಗಿತ್ತು… ಪಲಾವ್ ಮಾಡಿರುವ ಮದುವೆಯಲ್ಲಿ ನಮ್ಮ ಕೊನೆಯ ಊಟವೆಂದು ಫಿಕ್ಸ್ ಮಾಡುತ್ತಿದ್ದವು. ನಮ್ಮನ್ನು ಗಮನಿಸಿ, ನಮ್ಮ ಬಟ್ಟೆಗಳನ್ನು ನೋಡಿ, ಯಾವ ಜಾತಿ ಅಂತ ಕೇಳಿ, ನಾವು ಥಟ್ ಅಂತ ನಮ್ಮ ಜಾತಿ ಹೇಳಿದರೆ, ಅವರು ‘ಈಗ ಎದ್ದು ಹೋಗಿ ಆಮೇಲೆ ಬನ್ನಿ’ ಎನ್ನುವಾಗ ಆ ಪಲಾವ್ ಮೇಲೆಯೇ ನಮ್ಮ ಕಣ್ಣು. ಇದರ ನಡುವೆ ನಮ್ಮ ಕೇರಿಯ ಮದುವೆ ಆದರೆ ಮಜಾನೇ ಬೇರೆ. ಮಕ್ಕಳಾದ ನಮಗೆ ಆ ಪೆಟ್ರೋಮ್ಯಾಕ್ಸ್ ಬೆಳಕು ಅಚ್ಚರಿ ಉಂಟು ಮಾಡ್ತಾ ಇತ್ತು. ಆ ಹಿಪ್ಪೆಮರಗಳು ಸುಂದರತೆ ಮತ್ತು ಭಯ ಉಂಟುಮಾಡಿದರೆ, ಬ್ಯಾಟರಿಯನ್ನು ಬಳಸಿ ಹಾಕುತ್ತಿದ್ದ ಮೈಕ್‌ಸೆಟ್‌ನ ಹಾಡುಗಳು ನಮ್ಮನ್ನು ಪುಳಕಗೊಳಿಸುತ್ತಿದ್ದವು.

ಹಾಗೆ ಮುಂಜಾನೆ ಹೊತ್ತಿಗೆ ಸುತ್ತ ಮುತ್ತಲಿನ ಹಳ್ಳಿಯ ಜನರು ಎತ್ತಿನಗಾಡಿಯಲ್ಲಿ ಬಂದು ತಮಗೆ ಬೇಕಾದ ಜಾಗ ಗುರುತಿಸಿಕೊಂಡು, ಅಡುಗೆ ಶುರು ಮಾಡುತ್ತಿದ್ದರು. ಮತ್ತೆ ನಾವು ಗೆಳೆಯರು ಅವತ್ತಿನ ಮದುವೆಗಳನ್ನು ಲೆಕ್ಕಹಾಕಿ, ಸಂಜೆಗೆ ಆ ಒಲೆಗಳ ಇದ್ದಿಲು ನಮಗೆ ಎಂದು ಭಾಗಮಾಡಿಕೊಳ್ಳತ್ತಿದ್ದೆವು. ಎಲ್ಲ ಮುಗಿದು ಹೊರಟ ಮೇಲೆ ಆ ಕೆಂಡಗಳಿಗೆ, ಮಣ್ಣುಹಾಕಿ ಕೆಂಡ ಆರಿದ ನಂತರ ಇದ್ದಿಲನ್ನು ಚೀಲಗಳಲ್ಲಿ ತುಂಬಿಕೊಂಡು ಮಾಮೂಲಿ ಸಾಬರಿಗೆ ಮಾರಿ ಪಿಚ್ಚರ್ ನೋಡಲು ಹಣ ಹೊಂದಿಸಿಕೊಳ್ಳುತ್ತಿದ್ದೆವು. ಮತ್ತೆ, ಆ ಹಿಪ್ಪೆಬೀಜಗಳು ಕೂಡ ನಮ್ಮದೇ ಆಗಿತ್ತು.

ಮತ್ತೆ ಶ್ರಾವಣ ಶನಿವಾರಗಳಂದು ದೇವಸ್ಥಾನದಲ್ಲಿ ಕೊಡುವ ಪ್ರಸಾದದ ಕಡೆ ನಮ್ಮ ನಡೆ. ಆ ಪುಳಿಯೋಗರೆ, ಸಿಹಿ ಪೊಂಗಲ್, ಮೊಸರನ್ನದ ರುಚಿಯೇ ಬೇರೆ, ನವೆಂಬರ್ ಕಾಲದ ಕಾರ್ತಿಕ ಹುಣ್ಣಿಮೆಯಲ್ಲಿ ವಾರದಲ್ಲಿ ಒಂದೋ ಎರಡೋ ಮದುವೆಗಳು ಆಗುತ್ತಿದ್ದವು. ಹಿಪ್ಪೆ ಬೀಜಗಳನ್ನು ಆಯ್ದುಕೊಳ್ಳಲು ಹೋಗುತ್ತಿದ್ದ ನಾನು, ಗೆಳೆಯರಿಗೆ ವಿಷಯ ತಿಳಿಸಿ ಶಾಲೆಗೆ ಚಕ್ಕರ್ ಹಾಕಿ ಅಲ್ಲಿ ಊಟಕ್ಕೆ ಹಾಜರಾಗುತ್ತಿದ್ದೆವು. ಹಾಗೆಯೇ ಈ ತೋಪಿನಲ್ಲಿ ನಡೆಯುವ ಮತ್ತೊಂದು ವಿಶೇಷವೆಂದರೆ ಜೂನ್-ಜುಲೈ ತಿಂಗಳಿನಲ್ಲಿ ಜಾತ್ರೆ. ಇಡೀ ಜಾತ್ರೆಯ ಜನ ಒಟ್ಟಿಗೆ ಅ ಹಿಪ್ಪೆ ತೋಪಿನಲ್ಲಿ ಕುಳಿತು ಊಟ ಮಾಡುವುದೇ ಚಂದವಾಗಿತ್ತು. ಹೊಸ ಮದುವೆಯ ಜೋಡಿಗಳ ತಿರುಗಾಟ, ಮುಂದಿನ ಬಾರಿ ಮದುವೆ ಆಗಲು ಹವಣಿಸುತ್ತಿರುವ ಗಂಡು-ಹೆಣ್ಣುಗಳ ಕಳ್ಳ ಕಣೋಟಗಳು, ಮಕ್ಕಳು ಊಟ ಮುಗಿಸಿ ತಮಗೆ ಬೇಕಾದ ಆಟದ ಸಾಮಾನು ಖರೀದಿಗೆ ಕಾಯುವುದು ನಡೆದಿರುತ್ತಿತ್ತು.

ಆದರೆ ಆ ತೋಪು ಈಗ ಬದಲಾಗಿದೆ. ಸರ್ಕಾರದ ರೀತಿ-ನೀತಿಗಳಿಂದ ಈ ದೇವಸ್ಥಾನ ಪುರಾತತ್ವ ಇಲಾಖೆ ಸೇರಿ ಆ ತೋಪಿನಲ್ಲಿ ಯಾವುದೇ ಮದುವೆಗಳು ನಡೆಯುತ್ತಿಲ್ಲ. ಜಾತ್ರೆ ಕೂಡ ಆಕರ್ಷಣೆ ಕಳೆದುಕೊಂಡಿದೆ. ಆ ತೋಪಿನ ಸುತ್ತಲೂ ಕಬ್ಬಿಣದ ಬೇಲಿ ಹಾಕಲಾಗಿದೆ.
madhukaramalavalli@gmail.

andolanait

Recent Posts

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

2 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

6 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

6 hours ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

6 hours ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

6 hours ago