ಅಂಕಣಗಳು

ಭಾರತ vs ನ್ಯೂಜಿಲೆಂಡ್‌ ಪ್ರಥಮ ಟೆಸ್ಟ್:‌ ಭಾರತದ ಹೀನಾಯ ಪ್ರದರ್ಶನ, ಕಿವೀಸ್‌ಗೆ 134 ರನ್‌ಗಳ ಮುನ್ನಡೆ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ.

ಮಳೆ ಕಾರಣದಿಂದಾಗಿ ಒಂದು ದಿನ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಕೇವಲ 46 ರನ್‌ಗಳಿಗೆ ಆಲ್‌ಔಟ್‌ ಆಗುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿತು. ತವರು ನೆಲದಲ್ಲಿ ಭಾರತ ಟೆಸ್ಟ್‌ ಇನ್ನಿಂಗ್ಸ್‌ವೊಂದರಲ್ಲಿ ಕಲೆಹಾಕಿದ ಕಡಿಮೆ ಮೊತ್ತ ಎಂಬ ಕೆಟ್ಟ ದಾಖಲೆಯನ್ನು ಬರೆಯಿತು. ಟೀಮ್‌ ಇಂಡಿಯಾ ವಿರುದ್ಧ ಬೌಲಿಂಗ್‌ನಲ್ಲಿ ಆಕ್ರಮಣಕಾರಿ ಆಟವನ್ನಾಡಿದ ನ್ಯೂಜಿಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದು ಎರಡನೇ ದಿನದಾಟದಂತ್ಯಕ್ಕೆ 50 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿದೆ.

ಭಾರತದ ಇನ್ನಿಂಗ್ಸ್:‌ ತಂಡದ ಪರ ರಿಷಬ್‌ ಪಂತ್‌ ಗಳಿಸಿದ 20 ರನ್‌ಗಳೇ ಇನ್ನಿಂಗ್ಸ್‌ನ ವೈಯಕ್ತಿಕ ಗರಿಷ್ಟ ಎನಿಸಿಕೊಂಡಿದೆ. ತಂಡದ ಯಾವುದೇ ಆಟಗಾರ ಸಹ ನ್ಯೂಜಿಲೆಂಡ್‌ ಬೌಲಿಂಗ್‌ ದಾಳಿಗೆ ಪ್ರತ್ಯುತ್ತರ ನೀಡುವಲ್ಲಿ ಯಶಸ್ವಿಯಾಗಲೇ ಇಲ್ಲ. ಯಶಸ್ವಿ ಜೈಸ್ವಾಲ್‌ 13, ನಾಯಕ ರೋಹಿತ್‌ ಶರ್ಮಾ 2, ವಿರಾಟ್ ಕೊಹ್ಲಿ 0, ಸರ್ಫರಾಜ್‌ ಖಾನ್‌ 0, ಪಂತ್‌ 20, ಕೆಎಲ್‌ ರಾಹುಲ್‌ 0, ರವೀಂದ್ರ ಜಡೇಜಾ 0, ರವಿಚಂದ್ರನ್‌ ಅಶ್ವಿನ್‌ 0, ಕುಲ್‌ದೀಪ್‌ ಯಾದವ್‌ 2, ಜಸ್‌ಪ್ರೀತ್‌ ಬುಮ್ರಾ 1 ಮತ್ತು ಮೊಹಮ್ಮದ್‌ ಸಿರಾಜ್‌ ಅಜೇಯ 4 ರನ್‌ ಗಳಿಸಿದರು.

ನ್ಯೂಜಿಲೆಂಡ್‌ ಪರ ಕೇವಲ ಮೂವರು ಮಾತ್ರ ಬೌಲಿಂಗ್‌ ಮಾಡಿದ್ದು ಈ ಪೈಕಿ ಮ್ಯಾಟ್‌ ಹೆನ್ರಿ 5 ವಿಕೆಟ್‌, ವಿಲಿಯಮ್ ಒರೌಕ್‌ 4 ವಿಕೆಟ್‌ ಮತ್ತು ಟಿಮ್‌ ಸೌದಿ 1 ವಿಕೆಟ್‌ ಪಡೆದರು.

ನ್ಯೂಜಿಲೆಂಡ್‌ ಇನ್ನಿಂಗ್ಸ್:‌ ನಾಯಕ ಟಾಮ್‌ ಲಾಥಮ್‌ 15, ಡಿವಾನ್‌ ಕಾನ್ವೆ 91, ವಿಲ್‌ ಯಂಗ್‌ 33, ರಚಿನ್‌ ರವೀಂದ್ರ ಅಜೇಯ 22 ಮತ್ತು ಡೆರಿಲ್‌ ಮಿಚೆಲ್‌ ಅಜೇಯ 14 ರನ್‌ ಗಳಿಸಿದರು.

ಭಾರತದ ಪರ ರವಿಚಂದ್ರನ್‌ ಅಶ್ವಿನ್‌, ಕುಲ್‌ದೀಪ್‌ ಯಾದವ್‌ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

5 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

6 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

6 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

7 hours ago