ಅಂಕಣಗಳು

ಭಾರತ vs ನ್ಯೂಜಿಲೆಂಡ್‌ ಪ್ರಥಮ ಟೆಸ್ಟ್:‌ ಭಾರತದ ಹೀನಾಯ ಪ್ರದರ್ಶನ, ಕಿವೀಸ್‌ಗೆ 134 ರನ್‌ಗಳ ಮುನ್ನಡೆ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ.

ಮಳೆ ಕಾರಣದಿಂದಾಗಿ ಒಂದು ದಿನ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಕೇವಲ 46 ರನ್‌ಗಳಿಗೆ ಆಲ್‌ಔಟ್‌ ಆಗುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿತು. ತವರು ನೆಲದಲ್ಲಿ ಭಾರತ ಟೆಸ್ಟ್‌ ಇನ್ನಿಂಗ್ಸ್‌ವೊಂದರಲ್ಲಿ ಕಲೆಹಾಕಿದ ಕಡಿಮೆ ಮೊತ್ತ ಎಂಬ ಕೆಟ್ಟ ದಾಖಲೆಯನ್ನು ಬರೆಯಿತು. ಟೀಮ್‌ ಇಂಡಿಯಾ ವಿರುದ್ಧ ಬೌಲಿಂಗ್‌ನಲ್ಲಿ ಆಕ್ರಮಣಕಾರಿ ಆಟವನ್ನಾಡಿದ ನ್ಯೂಜಿಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದು ಎರಡನೇ ದಿನದಾಟದಂತ್ಯಕ್ಕೆ 50 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿದೆ.

ಭಾರತದ ಇನ್ನಿಂಗ್ಸ್:‌ ತಂಡದ ಪರ ರಿಷಬ್‌ ಪಂತ್‌ ಗಳಿಸಿದ 20 ರನ್‌ಗಳೇ ಇನ್ನಿಂಗ್ಸ್‌ನ ವೈಯಕ್ತಿಕ ಗರಿಷ್ಟ ಎನಿಸಿಕೊಂಡಿದೆ. ತಂಡದ ಯಾವುದೇ ಆಟಗಾರ ಸಹ ನ್ಯೂಜಿಲೆಂಡ್‌ ಬೌಲಿಂಗ್‌ ದಾಳಿಗೆ ಪ್ರತ್ಯುತ್ತರ ನೀಡುವಲ್ಲಿ ಯಶಸ್ವಿಯಾಗಲೇ ಇಲ್ಲ. ಯಶಸ್ವಿ ಜೈಸ್ವಾಲ್‌ 13, ನಾಯಕ ರೋಹಿತ್‌ ಶರ್ಮಾ 2, ವಿರಾಟ್ ಕೊಹ್ಲಿ 0, ಸರ್ಫರಾಜ್‌ ಖಾನ್‌ 0, ಪಂತ್‌ 20, ಕೆಎಲ್‌ ರಾಹುಲ್‌ 0, ರವೀಂದ್ರ ಜಡೇಜಾ 0, ರವಿಚಂದ್ರನ್‌ ಅಶ್ವಿನ್‌ 0, ಕುಲ್‌ದೀಪ್‌ ಯಾದವ್‌ 2, ಜಸ್‌ಪ್ರೀತ್‌ ಬುಮ್ರಾ 1 ಮತ್ತು ಮೊಹಮ್ಮದ್‌ ಸಿರಾಜ್‌ ಅಜೇಯ 4 ರನ್‌ ಗಳಿಸಿದರು.

ನ್ಯೂಜಿಲೆಂಡ್‌ ಪರ ಕೇವಲ ಮೂವರು ಮಾತ್ರ ಬೌಲಿಂಗ್‌ ಮಾಡಿದ್ದು ಈ ಪೈಕಿ ಮ್ಯಾಟ್‌ ಹೆನ್ರಿ 5 ವಿಕೆಟ್‌, ವಿಲಿಯಮ್ ಒರೌಕ್‌ 4 ವಿಕೆಟ್‌ ಮತ್ತು ಟಿಮ್‌ ಸೌದಿ 1 ವಿಕೆಟ್‌ ಪಡೆದರು.

ನ್ಯೂಜಿಲೆಂಡ್‌ ಇನ್ನಿಂಗ್ಸ್:‌ ನಾಯಕ ಟಾಮ್‌ ಲಾಥಮ್‌ 15, ಡಿವಾನ್‌ ಕಾನ್ವೆ 91, ವಿಲ್‌ ಯಂಗ್‌ 33, ರಚಿನ್‌ ರವೀಂದ್ರ ಅಜೇಯ 22 ಮತ್ತು ಡೆರಿಲ್‌ ಮಿಚೆಲ್‌ ಅಜೇಯ 14 ರನ್‌ ಗಳಿಸಿದರು.

ಭಾರತದ ಪರ ರವಿಚಂದ್ರನ್‌ ಅಶ್ವಿನ್‌, ಕುಲ್‌ದೀಪ್‌ ಯಾದವ್‌ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

3 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

20 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

26 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

38 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

54 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

1 hour ago