ಅಂಕಣಗಳು

ಭಾರತ vs ನ್ಯೂಜಿಲೆಂಡ್‌ ಪ್ರಥಮ ಟೆಸ್ಟ್:‌ ಭಾರತದ ಹೀನಾಯ ಪ್ರದರ್ಶನ, ಕಿವೀಸ್‌ಗೆ 134 ರನ್‌ಗಳ ಮುನ್ನಡೆ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ.

ಮಳೆ ಕಾರಣದಿಂದಾಗಿ ಒಂದು ದಿನ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಕೇವಲ 46 ರನ್‌ಗಳಿಗೆ ಆಲ್‌ಔಟ್‌ ಆಗುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿತು. ತವರು ನೆಲದಲ್ಲಿ ಭಾರತ ಟೆಸ್ಟ್‌ ಇನ್ನಿಂಗ್ಸ್‌ವೊಂದರಲ್ಲಿ ಕಲೆಹಾಕಿದ ಕಡಿಮೆ ಮೊತ್ತ ಎಂಬ ಕೆಟ್ಟ ದಾಖಲೆಯನ್ನು ಬರೆಯಿತು. ಟೀಮ್‌ ಇಂಡಿಯಾ ವಿರುದ್ಧ ಬೌಲಿಂಗ್‌ನಲ್ಲಿ ಆಕ್ರಮಣಕಾರಿ ಆಟವನ್ನಾಡಿದ ನ್ಯೂಜಿಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದು ಎರಡನೇ ದಿನದಾಟದಂತ್ಯಕ್ಕೆ 50 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿದೆ.

ಭಾರತದ ಇನ್ನಿಂಗ್ಸ್:‌ ತಂಡದ ಪರ ರಿಷಬ್‌ ಪಂತ್‌ ಗಳಿಸಿದ 20 ರನ್‌ಗಳೇ ಇನ್ನಿಂಗ್ಸ್‌ನ ವೈಯಕ್ತಿಕ ಗರಿಷ್ಟ ಎನಿಸಿಕೊಂಡಿದೆ. ತಂಡದ ಯಾವುದೇ ಆಟಗಾರ ಸಹ ನ್ಯೂಜಿಲೆಂಡ್‌ ಬೌಲಿಂಗ್‌ ದಾಳಿಗೆ ಪ್ರತ್ಯುತ್ತರ ನೀಡುವಲ್ಲಿ ಯಶಸ್ವಿಯಾಗಲೇ ಇಲ್ಲ. ಯಶಸ್ವಿ ಜೈಸ್ವಾಲ್‌ 13, ನಾಯಕ ರೋಹಿತ್‌ ಶರ್ಮಾ 2, ವಿರಾಟ್ ಕೊಹ್ಲಿ 0, ಸರ್ಫರಾಜ್‌ ಖಾನ್‌ 0, ಪಂತ್‌ 20, ಕೆಎಲ್‌ ರಾಹುಲ್‌ 0, ರವೀಂದ್ರ ಜಡೇಜಾ 0, ರವಿಚಂದ್ರನ್‌ ಅಶ್ವಿನ್‌ 0, ಕುಲ್‌ದೀಪ್‌ ಯಾದವ್‌ 2, ಜಸ್‌ಪ್ರೀತ್‌ ಬುಮ್ರಾ 1 ಮತ್ತು ಮೊಹಮ್ಮದ್‌ ಸಿರಾಜ್‌ ಅಜೇಯ 4 ರನ್‌ ಗಳಿಸಿದರು.

ನ್ಯೂಜಿಲೆಂಡ್‌ ಪರ ಕೇವಲ ಮೂವರು ಮಾತ್ರ ಬೌಲಿಂಗ್‌ ಮಾಡಿದ್ದು ಈ ಪೈಕಿ ಮ್ಯಾಟ್‌ ಹೆನ್ರಿ 5 ವಿಕೆಟ್‌, ವಿಲಿಯಮ್ ಒರೌಕ್‌ 4 ವಿಕೆಟ್‌ ಮತ್ತು ಟಿಮ್‌ ಸೌದಿ 1 ವಿಕೆಟ್‌ ಪಡೆದರು.

ನ್ಯೂಜಿಲೆಂಡ್‌ ಇನ್ನಿಂಗ್ಸ್:‌ ನಾಯಕ ಟಾಮ್‌ ಲಾಥಮ್‌ 15, ಡಿವಾನ್‌ ಕಾನ್ವೆ 91, ವಿಲ್‌ ಯಂಗ್‌ 33, ರಚಿನ್‌ ರವೀಂದ್ರ ಅಜೇಯ 22 ಮತ್ತು ಡೆರಿಲ್‌ ಮಿಚೆಲ್‌ ಅಜೇಯ 14 ರನ್‌ ಗಳಿಸಿದರು.

ಭಾರತದ ಪರ ರವಿಚಂದ್ರನ್‌ ಅಶ್ವಿನ್‌, ಕುಲ್‌ದೀಪ್‌ ಯಾದವ್‌ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

3 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

6 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

6 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

6 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

7 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

9 hours ago