ಕರ್ನಾಟಕದ ಕಸ್ತೂರಬಾ ಶ್ರೀಮತಿ ಯಶೋಧರ ದಾಸಪ್ಪ

ದಲಿತ ಮತ್ತು ಮಹಿಳಾ ಪರವಾದ ಧ್ವನಿಯಾಗಿದ್ದ ಯಶೋಧರಮ್ಮ ದಾಸಪ್ಪ ಅವರ 116ನೇ ಜನ್ಮ ಜಯಂತಿ ಸಂದರ್ಭ

 ಗಾಂಧಿ ತತ್ವಕ್ಕೆ ಮಾರು ಹೋಗಿದ್ದ ಯಶೋದರ ದಾಸಪ್ಪ ದಂಪತಿಗಳು ಸ್ವಾತಂತ್ರ್ಯ ಹಾಗೂ ಸೇವೆಯ ಬಗ್ಗೆ ಜನ ಜಾಗೃತಿ ಮೂಡಿಸುತ್ತಿದ್ದರು.ಇವರ ಸಮಾಜ ಸೇವಾ ಕೆಲಸಕ್ಕೆ ರಾಜದ್ರೋಹದ ಪಟ್ಟ ಕಟ್ಟಿದ್ದರು.

ಸತೀಶ್‌ ಗೌಡ ಬೀಡನಹಳ್ಳಿ ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್‌

ದೊಡ್ಡ ಬಳ್ಳಾಪುರ ತಾಲ್ಲೂಕಿನ ಕಲ್ಲುದೇವರಹಳ್ಳಿಯಲ್ಲಿ ಚಿಕ್ಕಣ್ಣೇಗೌಡರ ವಂಶದ ಮೇರು ಕಿರೀಟ ಎಂಬ ಖ್ಯಾತಿ ಪಡೆದ ಕೆ.ಹೆಚ್.ರಾಮಯ್ಯ ಹಾಗೂ ರೇವಮ್ಮ ದಂಪತಿಗೆ ೧೯೦೫ ರ ಮೇ ೨೮ ರಂದು ಮೊದಲ ಮಗುವಾಗಿ ಒಂದು ಹೆಣ್ಣು ಮಗು ಜನನವಾಗುತ್ತದೆ. ಆ ಮಗುವಿಗೆ ಸಾರ್ವಕಾಲಿಕ ಆದರ್ಶ ಮಹಿಳೆ ಭಗವಾನ್ ಬುದ್ಧರ ಆದರ್ಶ ಪತ್ನಿ ಯಶೋಧರೆಯ ನೆನಪಿಗೆ ಯಶೋಧರಾ ಎಂದು ನಾಮಕರಣ ಮಾಡುತ್ತಾರೆ. ಅವರೇ ಕರ್ನಾಟಕದ ಪ್ರಥಮ ಮಹಿಳಾ ಸಚಿವರು ಸ್ವಾತಂತ್ರ ಹೋರಾಟಗಾರರು ಆದ ಯಶೋಧರ ದಾಸಪ್ಪನವರು.

ಹೆಚ್. ಸಿ.ದಾಸಪ್ಪ ಹಾಗೂ ರಾಮಯ್ಯನವರ ಪುತ್ರಿ ಯಶೋಧರ ನಡುವೆ ೧೯೨೬ ರಲ್ಲಿ ವಿವಾಹ ಮಹೋತ್ಸವ ನಡೆಯುತ್ತದೆ. ದಾಸಪ್ಪ ದಂಪತಿಗಳು ಸೇವಾಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರು ದಲಿತ ಸಮುದಾಯದ ಅನಾಥ ಮಗುವೊಂದನ್ನು ಪೋಷಣೆಗೆ ನೀಡಿರುತ್ತಾರೆ. ಅದನ್ನು ಪ್ರಸಾದವೆಂಬಂತೆ ಸ್ವೀಕರಿಸುವ ದಂಪತಿ ಎರಡು ಮಕ್ಕಳ ಜತೆ ಮೂರನೆಯವರಾಗಿ ಕಂಡು ಸಾಕಿ ಮದುವೆ ಮಾಡುತ್ತಾರೆ. ತಮ್ಮ ಆಸ್ತಿಯನ್ನು ಸಹ ಕೊಟ್ಟ ಧೀಮಂತ ವ್ಯಕ್ತಿತ್ವ ದಾಸಪ್ಪ ದಂಪತಿಗಳದು. ೧೯೬೪ ರಲ್ಲಿ ದಾಸಪ್ಪನವರು ಹೃದಯಾಘಾತದಿಂದ ನಿಧನ ಹೊಂದುತ್ತಾರೆ.
ಮಂತ್ರಿಯಾಗಿ ಯಶೋದರ ದಾಸಪ್ಪ.

೧೯೬೨ ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗಂಡಸಿ ವಿಧಾನಸಭಾ ಕ್ಷೇತ್ರದಿಂದ ಮೈಸೂರು ರಾಜ್ಯದ ವಿಧಾನಸಭೆಗೆ ಸರಿ ಸುಮಾರು ೧೧,೪೯೮ ಮತಗಳ ಅಂತರದಿಂದ ಆ್ಂಕೆುಗೊಂಡು ಪ್ರಥಮವಾಗಿ ಪಾದಾರ್ಪಣೆ ಮಾಡುತ್ತಾರೆ. ಯಶೋದರ ದಾಸಪ್ಪ ನವರು ಎಸ್.ನಿಜಲಿಂಗಪ್ಪ ಅವರ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿರುತ್ತಾರೆ. ಅಧಿಕಾರ ಬಂದಾಗ ನಿಜಲಿಂಗಪ್ಪ ಅವರು ಬದಲಾದ ಪರಿ ಕಂಡು ಕೆಂಡಾಮಂಡಲರಾದರು. ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿ ಸ್ವಂತ ಕಾರಿನಲ್ಲಿ ಮಂತ್ರಿ ಮಂಡಲ ಸಭೆಗೆ ಹೋಗಿ ರಾಜೀನಾಮೆ ನೀಡಿದರು.

ನೊಂದು ಬೆಂದವರಿಗಾಗಿ ಸಾಮಾಜಿಕ ಸುಧಾರಣೆಗಾಗಿ ಅರಸೀಕೆರೆಯಲ್ಲಿ ಕಸ್ತೂರಬಾ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿರ್ಮಾಣ ಮಾಡಿ ಉಳಿದ ಜೀವಿತಾವಧಿಯನ್ನು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago