ಕರ್ನಾಟಕದ ಕಸ್ತೂರಬಾ ಶ್ರೀಮತಿ ಯಶೋಧರ ದಾಸಪ್ಪ

ದಲಿತ ಮತ್ತು ಮಹಿಳಾ ಪರವಾದ ಧ್ವನಿಯಾಗಿದ್ದ ಯಶೋಧರಮ್ಮ ದಾಸಪ್ಪ ಅವರ 116ನೇ ಜನ್ಮ ಜಯಂತಿ ಸಂದರ್ಭ

 ಗಾಂಧಿ ತತ್ವಕ್ಕೆ ಮಾರು ಹೋಗಿದ್ದ ಯಶೋದರ ದಾಸಪ್ಪ ದಂಪತಿಗಳು ಸ್ವಾತಂತ್ರ್ಯ ಹಾಗೂ ಸೇವೆಯ ಬಗ್ಗೆ ಜನ ಜಾಗೃತಿ ಮೂಡಿಸುತ್ತಿದ್ದರು.ಇವರ ಸಮಾಜ ಸೇವಾ ಕೆಲಸಕ್ಕೆ ರಾಜದ್ರೋಹದ ಪಟ್ಟ ಕಟ್ಟಿದ್ದರು.

ಸತೀಶ್‌ ಗೌಡ ಬೀಡನಹಳ್ಳಿ ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್‌

ದೊಡ್ಡ ಬಳ್ಳಾಪುರ ತಾಲ್ಲೂಕಿನ ಕಲ್ಲುದೇವರಹಳ್ಳಿಯಲ್ಲಿ ಚಿಕ್ಕಣ್ಣೇಗೌಡರ ವಂಶದ ಮೇರು ಕಿರೀಟ ಎಂಬ ಖ್ಯಾತಿ ಪಡೆದ ಕೆ.ಹೆಚ್.ರಾಮಯ್ಯ ಹಾಗೂ ರೇವಮ್ಮ ದಂಪತಿಗೆ ೧೯೦೫ ರ ಮೇ ೨೮ ರಂದು ಮೊದಲ ಮಗುವಾಗಿ ಒಂದು ಹೆಣ್ಣು ಮಗು ಜನನವಾಗುತ್ತದೆ. ಆ ಮಗುವಿಗೆ ಸಾರ್ವಕಾಲಿಕ ಆದರ್ಶ ಮಹಿಳೆ ಭಗವಾನ್ ಬುದ್ಧರ ಆದರ್ಶ ಪತ್ನಿ ಯಶೋಧರೆಯ ನೆನಪಿಗೆ ಯಶೋಧರಾ ಎಂದು ನಾಮಕರಣ ಮಾಡುತ್ತಾರೆ. ಅವರೇ ಕರ್ನಾಟಕದ ಪ್ರಥಮ ಮಹಿಳಾ ಸಚಿವರು ಸ್ವಾತಂತ್ರ ಹೋರಾಟಗಾರರು ಆದ ಯಶೋಧರ ದಾಸಪ್ಪನವರು.

ಹೆಚ್. ಸಿ.ದಾಸಪ್ಪ ಹಾಗೂ ರಾಮಯ್ಯನವರ ಪುತ್ರಿ ಯಶೋಧರ ನಡುವೆ ೧೯೨೬ ರಲ್ಲಿ ವಿವಾಹ ಮಹೋತ್ಸವ ನಡೆಯುತ್ತದೆ. ದಾಸಪ್ಪ ದಂಪತಿಗಳು ಸೇವಾಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರು ದಲಿತ ಸಮುದಾಯದ ಅನಾಥ ಮಗುವೊಂದನ್ನು ಪೋಷಣೆಗೆ ನೀಡಿರುತ್ತಾರೆ. ಅದನ್ನು ಪ್ರಸಾದವೆಂಬಂತೆ ಸ್ವೀಕರಿಸುವ ದಂಪತಿ ಎರಡು ಮಕ್ಕಳ ಜತೆ ಮೂರನೆಯವರಾಗಿ ಕಂಡು ಸಾಕಿ ಮದುವೆ ಮಾಡುತ್ತಾರೆ. ತಮ್ಮ ಆಸ್ತಿಯನ್ನು ಸಹ ಕೊಟ್ಟ ಧೀಮಂತ ವ್ಯಕ್ತಿತ್ವ ದಾಸಪ್ಪ ದಂಪತಿಗಳದು. ೧೯೬೪ ರಲ್ಲಿ ದಾಸಪ್ಪನವರು ಹೃದಯಾಘಾತದಿಂದ ನಿಧನ ಹೊಂದುತ್ತಾರೆ.
ಮಂತ್ರಿಯಾಗಿ ಯಶೋದರ ದಾಸಪ್ಪ.

೧೯೬೨ ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗಂಡಸಿ ವಿಧಾನಸಭಾ ಕ್ಷೇತ್ರದಿಂದ ಮೈಸೂರು ರಾಜ್ಯದ ವಿಧಾನಸಭೆಗೆ ಸರಿ ಸುಮಾರು ೧೧,೪೯೮ ಮತಗಳ ಅಂತರದಿಂದ ಆ್ಂಕೆುಗೊಂಡು ಪ್ರಥಮವಾಗಿ ಪಾದಾರ್ಪಣೆ ಮಾಡುತ್ತಾರೆ. ಯಶೋದರ ದಾಸಪ್ಪ ನವರು ಎಸ್.ನಿಜಲಿಂಗಪ್ಪ ಅವರ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿರುತ್ತಾರೆ. ಅಧಿಕಾರ ಬಂದಾಗ ನಿಜಲಿಂಗಪ್ಪ ಅವರು ಬದಲಾದ ಪರಿ ಕಂಡು ಕೆಂಡಾಮಂಡಲರಾದರು. ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿ ಸ್ವಂತ ಕಾರಿನಲ್ಲಿ ಮಂತ್ರಿ ಮಂಡಲ ಸಭೆಗೆ ಹೋಗಿ ರಾಜೀನಾಮೆ ನೀಡಿದರು.

ನೊಂದು ಬೆಂದವರಿಗಾಗಿ ಸಾಮಾಜಿಕ ಸುಧಾರಣೆಗಾಗಿ ಅರಸೀಕೆರೆಯಲ್ಲಿ ಕಸ್ತೂರಬಾ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿರ್ಮಾಣ ಮಾಡಿ ಉಳಿದ ಜೀವಿತಾವಧಿಯನ್ನು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

andolana

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

4 mins ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

13 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

25 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

1 hour ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

1 hour ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

2 hours ago