ಅಂಕಣಗಳು

ಇಸ್ರೋದಲ್ಲಿ ಛಾಪು ಮೂಡಿಸಿದ ಕಸ್ತೂರಿ ರಂಗನ್; ಶೈಕ್ಷಣಿಕ ಸುಧಾರಣೆಗಳ ಹರಿಕಾರ

ಬೆಂಗಳೂರು: ಕೇರಳ ಮೂಲದ ಬಾಹ್ಯಾಕಾಶ ವಿಜ್ಞಾನಿ, ಪರಿಸರ ತಜ್ಞ ಡಾ. ಕೆ. ಕಸ್ತೂರಿರಂಗನ್ ಅವರು ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.

1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಕೃಷ್ಣಸ್ವಾಮಿ ಅಯ್ಯರ್ ಮತ್ತು ವಿಶಾಲಾಕ್ಷಿ ದಂಪತಿಯ ಪುತ್ರರಾಗಿ ಕಸ್ತೂರಿ ರಂಗನ್ ಜನಿಸಿದರು. ಕಸ್ತೂರಿ ರಂಗನ್ ಅವರ ಪೋಷಕರು ತಮಿಳುನಾಡಿನಿಂದ ಕೇರಳಕ್ಕೆ ಸ್ಥಳಾಂತರಗೊಂಡಾಗ ಪಾಲ್ಕಾಡ್ ಜಿಲ್ಲೆಯ ನಲ್ಲೆಪಲ್ಲಿ ಅಗ್ರಹಾರಂನಲ್ಲಿ ನೆಲೆಸಿದ್ದರು. ಇಸ್ರೋ ನಿವೃತ್ತಿ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದರು.

ಕಸ್ತೂರಿರಂಗನ್ 2003ರವರೆಗೆ ೯ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದರು. 2003-2009ರವೆಗೆ ರಾಜ್ಯಸಭಾ ಸದಸ್ಯರಾಗಿ ದ್ದರು. ದೇಶದ ಅತ್ಯುನ್ಯತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ (1982), ಪದ್ಮಭೂಷಣ (1992) ಮತ್ತು ಪದ್ಮ ವಿಭೂಷಣ (2000) ಪಡೆದುಕೊಂಡಿದ್ದರು.

ಕಸ್ತೂರಿ ರಂಗನ್ ಪ್ರಮುಖ ಕೊಡುಗೆಗಳು: ಈ ಹಿಂದೆ ಅವರು ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕರಾಗಿದ್ದರು ಮತ್ತು ಆಧುನಿಕ ಯುಗದ ಬಾಹ್ಯಾಕಾಶ ನೌಕೆ, ಭಾರತೀಯ ರಾಷ್ಟ್ರೀಯ ಉಪ ಗ್ರಹ (ಇನ್ಸಾಟ್-2) ಮತ್ತು ಭಾರತೀಯ ದೂರ ಗ್ರಾಹಿ ಉಪಗ್ರಹಗಳು (ಐಆರ್‌ಎಸ್-1ಎ ಮತ್ತು 1ಬಿ) ಜೊತೆಗೆ ವೈಜ್ಞಾನಿಕ ಉಪಗ್ರಹಗಳ ಅಭಿವೃದ್ಧಿ ಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿದ್ದರು. ಇವರ ನಾಯಕತ್ವದಲ್ಲಿ, ಭಾರತದ ಹೆಸರಾಂತ ಉಡಾವಣಾ ವಾಹನಗಳಾದ ಪೋಲಾರ್ ಉಪಗ್ರಹ ಉಡಾವಣಾ ವಾಹನ ಮತ್ತು ಜಿಯೋಸಿಂ ಕ್ರೋನಸ್ ಉಪಗ್ರಹ ಉಡಾವಣಾ ವಾಹನದ ಉಡಾವಣೆ ಮತ್ತು ಕಾರ್ಯನಿರ್ವಹಣೆಯನ್ನು ಒಳಗೊಂಡು ಹಲವು ಪ್ರಮುಖ ಸಾಧನೆಗಳನ್ನು ಕೈಗೊಳ್ಳಲಾಗಿತ್ತು. ಜಿಎಸ್‌ಎಲ್‌ವಿ, ಜಿಎಸ್‌ಎಲ್‌ವಿಎಂಕೆ ಸುಧಾರಿತ ಆವೃತ್ತಿ ಮತ್ತು ಅದರ ಸಂಪೂರ್ಣ ವಿನ್ಯಾಸಗಳ ವ್ಯಾಖ್ಯಾನಗಳ ಅಧ್ಯಯನಗಳನ್ನು ಕೂಡ ಪೂರ್ಣಗೊಳಿಸಲಾಗಿತ್ತು.

ಶಿಕ್ಷಣ ಮತ್ತು ಸಂಶೋಧನೆ ಡಾ. ಕೆ. ಕಸ್ತೂರಿ ರಂಗನ್ ಅವರು ವಿಜ್ಞಾನದಲ್ಲಿ ವಿಶೇಷ ಪದವಿ ಯನ್ನು ಪಡೆದರು ಮತ್ತು ಬಾಂಬೆ ವಿಶ್ವ ವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ವಿಜ್ಞಾನ ಪದವಿಯನ್ನು ಪಡೆದಿದ್ದರು. ಫಿಸಿಕಲ್ ರಿಸರ್ಜ್ ಲ್ಯಾಬೋರೇಟರಿ ಅಹಮದಾಬಾದ್ ನಲ್ಲಿ ಕಾರ್ಯನಿರ್ವಹಿಸುತ್ತಾ 1971ರಲ್ಲಿ ಎಕ್ಸ್ ಪರಿಮೆಂಟಲ್ ಹೈ ಎನರ್ಜಿಯಲ್ಲಿ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದ್ದರು.

ಭೌತ ವಿಜ್ಞಾನಿಯಾಗಿ, ಕಸ್ತೂರಿ ರಂಗನ್ ಅವರ ಸಂಶೋಧನಾ ಆಸಕ್ತಿಗಳಲ್ಲಿ ಹೆಚ್ಚು ಸಾಮಥ್ರ್ಯದ ಎಕ್ಸ್-ರೇ ಮತ್ತು ಗಾಮಾ ಕಿರಣಗಳ ಖಗೋಳ ವಿಜ್ಞಾನ ಹಾಗೂ ಆಪ್ಟಿಕಲ್ ಖಗೋಳ ವಿಜ್ಞಾನಗಳು ಸೇರಿವೆ. ಇವರು ಖಗೋಳ ವಿಜ್ಞಾನ, ಬಾಹ್ಯಾಕಾಶ ವಿಜ್ಞಾನ ಮತ್ತು ಬಾಹ್ಯಾಕಾಶ ಅನ್ವಯಿಸುವಿಕೆಗಳಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪತ್ರಿಕೆಗಳಲ್ಲಿ 224 ಕ್ಕೂ ಹೆಚ್ಚು ಪ್ರಬಂಧಗಳನ್ನು ಪ್ರಕಟಿಸಿದ್ದರು. ಕಸ್ತೂರಿ ರಂಗನ್ ಅವರು 16 ವಿಶ್ವವಿದ್ಯಾನಿಲಯಗಳಿಂದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದರು. ಫ್ರಾನ್ಸ್‌ನ ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಿಂದ ‘ಆಫೀಸರ್ ಆಫ್ ದಿ ಲೀಜನ್ ದಿ ಹಾನರ್’ (2002) ಪ್ರಶಸ್ತಿ ಒಲಿದಿತ್ತು.

ಶೈಕ್ಷಣಿಕ ಸುಧಾರಣೆಗಳ ಹರಿಕಾರ: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಟ್ಟಿ ಮಾಡಲಾದ ಶೈಕ್ಷಣಿಕ ಸುಧಾರಣೆಗಳ ಹಿಂದಿನ ವ್ಯಕ್ತಿ ಕಸ್ತೂರಿ ರಂಗನ್. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2003ರಿಂದ 2009ರವರೆಗೆ ರಾಜ್ಯಸಭೆಯ ಸದಸ್ಯರಾಗಿ ಮತ್ತು ಅಂದಿನ ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ಅವರು ಅಧ್ಯಯನ ನಡೆಸಿದ್ದ ನೀಡಿದ್ದ ವರದಿ ಸಾಕಷ್ಟು ಚರ್ಚೆಯಾಗಿತ್ತು. ಪರ- ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.

ಆಂದೋಲನ ಡೆಸ್ಕ್

Recent Posts

ಹನೂರು| ಭೈರನತ್ತ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…

19 mins ago

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

4 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

4 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

4 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

4 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

4 hours ago