ಅಂಕಣಗಳು

ಅಣ್ಣನ ನೋಡುವ ನೆಪದಲ್ಲಿ ಬಂದಿದ್ದ ಕಿರಾತಕ

• ಕೀರ್ತನ ಎಂ.

ತಾರಾ, ಹೊಳೆಯುವ ಮೊಗದವಳು. ಚಂದಿರನ ನಗು, ಮುಗಿಲಿನ ಶುಭ್ರ ಬಿಳುಪಿನ ಚೆಲುವೆ. ತನ್ನ ಪುಟ್ಟ ಕುಟುಂಬವೇ ಅವಳ ಪ್ರಪಂಚ, ಆ ಪ್ರಪಂಚದಲ್ಲಿ ಅಣ್ಣನ ಸ್ನೇಹಿತನ ಆಗಮನವಾಗಿತ್ತು. ಏಳು ವರ್ಷಗಳು ಇರುವವಳು ಅವನನ್ನು ಬಾಯಿ ತುಂಬಾ ಅಣ್ಣ ಎಂದು ಕರೆಯುತ್ತಿದ್ದಳು. ಏಷ್ಟು ವರ್ಷ… ಅಂದು ಅವಳು ಮೈನೆರೆದು ಸರಿಯಾಗಿ ಎರಡು ತಿಂಗಳುಗಳು ಕಳೆದಿತ್ತು. ಶಾಲೆಯಲ್ಲಿ ಕಾಡಿ ಬೇಡಿ ಮೂರು ವಾರ ರಜೆ ಗಿಟ್ಟಿಸಿ ಅದ್ಧೂರಿಯಾಗಿ ಆರತಿ ಶಾಸ್ತ್ರವನ್ನೂ ಮಾಡಿ ಮುಗಿಸಿದ್ದರು. ಆ ದಿನ ಕಾರ್ಯಕ್ರಮಕ್ಕೆ ಬಂದವನು ಮರಳಿ ಗೆಳೆಯನನ್ನು ಭೇಟಿ ಆಗುವ ನೆಪದಲ್ಲಿ ಮನೆಗೆ ಬಂದಿದ್ದ. ಅದೂ ತಾರ ಒಬ್ಬಳೇ ಇದ್ದ ಹೊತ್ತಲ್ಲಿ! ‘ಅಣ್ಣ…’ಬಾಗಿಲು ತೆಗೆದವಳು ಖುಷಿಯಿಂದ ಅವನ ಬಳಿ ಬಂದಳು.

ಮನೆಯಲ್ಲಿ ಯಾರೂ ಇಲ್ಲದ ಹೊತ್ತು ಎಲ್ಲಿ ನಿನ್ನ ಅಣ್ಣ? ಆಂಟಿ ಅಂಕಲ್‌ ಇಲ್ವಾ?’ ಎಂದು ಕೇಳುತ್ತ ಅವಳ ಹೆಗಲು ಬಳಸುತ್ತಾ ಒಳ ಬಂದ.

‘ಇಲ್ಲ ಅಪ್ಪ ಕೆಲಸಕ್ಕೆ ಹೋಗಿದ್ದಾರೆ ಅಮ್ಮ ಸಂತೆಗೆ ಹೋಗಿದ್ದಾರೆ. ಅಣ್ಣ ಇನ್ನೇನು ಬರಬಹುದು’ ಎಂದವಳ ಮಾತು ಕೇಳುತ್ತ ಅವಳನ್ನು ಪಕ್ಕದಲ್ಲಿ ಕೂರಿಸಿಕೊಂಡು ತಾನು ಅಂಟಿಕೊಂಡು ಕುಳಿತ. ಹೆಗಲು ಬಳಸಿದ ಕೈ ನಿಧಾನವಾಗಿ ಕೆಳಜಾರಲು ಇರುಸುಮುರಿಸು ಅವಳಿಗೆ.

‘ಅಣ್ಣ ಇರು ಕಾಫಿ ತರ್ತಿನಿ’ ನಾಜೂಕಾಗಿ ಬಿಡಿಸಿಕೊಂಡು ಅಲ್ಲಿಂದ ಎದ್ದು ಬಂದವಳಿಗೆ ಮೊದಲ ಬಾರಿ ಅವನ ಸ್ಪರ್ಶ ಅಹಿತವಾಯಿತು.
ತಪ್ಪಿಸಿಕೊಂಡೆ ಎಂದುಕೊಳ್ಳುವಾಗ ಹಿಂದೆ ಬಂದವನು ತಪ್ಪಿಸಿಕೊಳ್ಳಲು ಆಗದಂತೆ ಕಚಗುಳಿ ಕೊಡುವ ನೆಪದಲ್ಲಿ ಅವಳ ಮೈ ಪೂರಾ ಸ್ಪರ್ಶಿಸುತ್ತಿದ್ದ. ಅವಳಿಗೂ ಏನೋ ಸರಿಯಿಲ್ಲ ಎನ್ನುವುದು ಅರ್ಥವಾಗಲು ‘ಅಣ್ಣ ಬಿಡಿ’ ಎಂದು ಕೂಗುತ್ತ ಹೇಗೋ ಬಿಡಿಸಿಕೊಂಡಳು.

ಮತ್ತೊಮ್ಮೆ ಅವಳ ಬಳಿ ಬರುವವನ ತಡೆದಿದ್ದು ಅಷ್ಟರಲ್ಲಿ ಹೊರಗೆ ಕೇಳಿದ ಅವಳ ತಾಯಿಯ ಸದ್ದು. ಅವನು ಹೊರ ನಡೆದ ತಕ್ಷಣ ದೀರ್ಘವಾಗಿ ಉಸಿರೆಳೆದುಕೊಂಡ ತಾರಾ ಏನೂ ನಡೆದಿಲ್ಲ ಎನ್ನುವಂತೆ ಇಬ್ಬರಿಗೂ ಕಾಫಿ ನೀಡಿದಳು. ಆದಷ್ಟು ಅವನಿಂದ ಅಂತರ ಕಾಯ್ದುಕೊಳ್ಳುತ್ತಾ ಇದ್ದಳು. ಆದರೆ ಅವನು ಎಲ್ಲರ ಕಣ್ಣಪ್ಪಿಸಿ ತನ್ನ ಚಪಲ ತೀರಿಸಿಕೊಳ್ಳುತ್ತಾ ಇದ್ದ. ಅವಳ ಕುಟುಂಬದವರು ಅವನ ಮೇಲಿಟ್ಟಿದ್ದ ನಂಬಿಕೆಯೇ ಅವನಿಗೆ ಅಸ್ತವಾಗಿತ್ತು. ಅವಳಿಗೂ ಮನೆಯಲ್ಲಿ ಹೇಳುವ ಧೈರ್ಯವಿಲ್ಲ. ದಿನೇ ದಿನೇ ಅವನ ಉಪಟಳ ಹೆಚ್ಚಾಗಿ ಒಮ್ಮೆಯಂತೂ ಅತಿಯಾಗಿ ವರ್ತಿಸಿ ಪೂರ್ತಿಯಾಗಿ ಹೆದರುವಂತೆ ಮಾಡಿದ್ದ.

ಇನ್ನು ಸುಮ್ಮನಿದ್ದರೆ ಆಗದು ಎಂದು ಯೋಚಿಸಿದ ತಾರ ವರ್ಷಗಳಿಂದ ಸಹಿಸಿದ್ದ ಅವನ ಕಾಟವನ್ನು ತಾನು ಪಿಯುಸಿ ಸೇರಿದಾಗ ಮನೆಯಲ್ಲಿ ಹೇಳುವ ನಿರ್ಧಾರ ಮಾಡಿ ತಾಯಿಗೆ ಭಯದಲ್ಲೇ ಎಲ್ಲವನ್ನೂ ಹೇಳಿದಳು.
‘ಮೊದಲೇ ಏಕೆ ಹೇಳಲಿಲ್ಲ ನೀನು? ಇನ್ನು ಅವನ ಹತ್ತಿರ ಹೋಗಬೇಡ’ ಎಂದು ಅವನಿಗೆ ಬೈದುಕೊಳ್ಳುತ್ತಾ ಇವಳಿಗೂ ಗದರಿದರು ಅಮ್ಮ. ಅದಾದ ಮೇಲೆ ಅವಳು ಓದಿನ ಸಲುವಾಗಿ ಬೇರೆ ಊರಿಗೆ ತೆರಳಿದಳು. ಅವನ ಕಾಟ ತಪ್ಪಿತ್ತು. ಅಲ್ಲಿಂದ ಹೊರ ಬಂದ ಮೇಲೆ ಅದು ಅವಳನ್ನು ಮಾನಸಿಕವಾಗಿ ಕಾಡಲು ಶುರುವಾಗಿ ಪುರುಷರನ್ನು ಕಂಡರೆ ವಿಚಿತ್ರ ಭಯ ಹುಟ್ಟಿಕೊಂಡಿತು. ಅದೊಂದು ದುಃಸ್ವಪ್ನವಾಗಿ ಜೀವನ ಪೂರ್ತಿ ತಾರಾಳನ್ನು ಕಾಡಿತು ಅವಳ ದಾಂಪತ್ಯ ಜೀವನವನ್ನೂ ಹಾಳು ಮಾಡಿತು…

ಅಂದು ತಾರ ಹೇಳಿಕೊಂಡಾಗ ಏನೂ ಅರಿಯದ ಅವಳ ಬದಲಾಗಿ ಅವಳ ತಾಯಿ ದನಿ ಏರಿಸಿದ್ದರೂ ಕೂಡ ಅದು ಅವಳನ್ನು ಜೀವನ ಪೂರ್ತಿ ಕಾಡುತ್ತಾ ಇರಲಿಲ್ಲವೇನೋ. ಕೇವಲ ತಂದೆ ತಾಯಿ ಪಾತ್ರ ಮಾತ್ರವೇ ಇದೆಯೇ ಇದರಲ್ಲಿ? ಖಂಡಿತ ಇಲ್ಲ. ಸಮಾಜದ ಪಾತ್ರವೂ ಇದೆ ಅಲ್ಲವೇ?
keerthana.manju.guha6@gmail.com

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

3 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

3 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

3 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

3 hours ago